ಭರ್ಜರಿ ಮಳೆ-ನೀರಿನ ಹೊಳೆ!

ರಸ್ತೆ ಮೇಲೆಲ್ಲ ಹರಿದ ಚರಂಡಿ ನೀರು•ಸವಾರರ ಪರದಾಟ-ಟ್ರಾಫಿಕ್‌ ಜಾಮ್‌

Team Udayavani, Jul 15, 2019, 10:10 AM IST

15-July-3

ದಾವಣಗೆರೆ: ಶೇಖರಪ್ಪ ನಗರದ ರೈಲ್ವೆ ಕೆಳ ಸೇತುವೆಯಲ್ಲಿ ನೀರು ನಿಂತಿರುವುದು.

ದಾವಣಗೆರೆ: ಭಾನುವಾರ ಸಂಜೆ ಸುರಿದ ಭಾರೀ ಮಳೆಗೆ ಸ್ಮಾರ್ಟ್‌ಸಿಟಿ, ಜಿಲ್ಲಾ ಕೇಂದ್ರ ದಾವಣಗೆರೆ ಅಕ್ಷರಶಃ ತೊಯ್ದು ಹೋಯಿತು.

ಪೂರ್ವ ಮುಂಗಾರು ನಂತರದ ಮುಂಗಾರು ಹಂಗಾಮು ಪ್ರಾರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ದಾವಣಗೆರೆಯಲ್ಲಿ ಒಂದೇ ಸಮನೆ ಸುರಿದ ಮಳೆಯಿಂದ ತಗ್ಗು ಪ್ರದೇಶದ ಜನರು ತೀವ್ರ ತೊಂದರೆ ಅನುಭವಿಸಿದರು.

ಉತ್ತಮ ಮಳೆಯ ಕಾರಣ ರಸ್ತೆಗಳಲ್ಲಿ ನೀರು ನಿಂತಿತ್ತು. ರಸ್ತೆಯಲ್ಲಿ ನೀರಿದಿಯೋ ಅಥವಾ ನೀರಿನಲ್ಲೇ ರಸ್ತೆ ಇದೆಯೋ ಎನ್ನುವಂತೆ ಅನೇಕ ಕಡೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದ ಕಾರಣಕ್ಕೆ ದ್ವಿಚಕ್ರ ವಾಹನ, ಆಟೋ ರಿಕ್ಷಾ ಸವಾರರು, ಪಾದಚಾರಿಗಳು ಇನ್ನಿಲ್ಲದ ಸಮಸ್ಯೆಗೀಡಾದರು.

ಮಹಾನಗರ ಪಾಲಿಕೆ ಮುಂದಿನ ರೈಲ್ವೆ ಕೆಳ ಸೇತುವೆ, ಶೇಖರಪ್ಪ ನಗರದ ಅಂಡರ್‌ ಬ್ರಿಡ್ಜ್… ಮುಂತಾದ ಕಡೆ ಭಾರೀ ಪ್ರಮಾಣದಲ್ಲಿ ರಭಸವಾಗಿ ನೀರು ಹರಿದು ಬರುತ್ತಿದ್ದ ಕಾರಣಕ್ಕೆ ಒಂದು ಕಡೆಯಿಂದ ಮತ್ತೂಂದು ಕಡೆ ಸಾಗಲು ಹೆಣಗಾಡಬೇಕಾಯಿತು.

ಅಶೋಕ ಚಿತ್ರಮಂದಿದರ ಬಳಿ ಸಣ್ಣ ಮಳೆ ಬಂದರೂ ಹಳ್ಳದಂತೆ ನೀರು ನಿಲ್ಲುವುದು ಸಾಮಾನ್ಯ. ಭಾನುವಾರದ ಮಳೆಗೆ ದೊಡ್ಡ ಹಳ್ಳದಂತೆ ನೀರು ನಿಂತ ಪರಿಣಾಮ ಸಾರ್ವಜನಿಕರು, ವಾಹನಗಳ ಸವಾರರು ಅಕ್ಷರಶಃ ಪರದಾಡಿದರು. ಸುರಿಯುವ ಮಳೆಯಲ್ಲೇ ಗಂಟೆಗಟ್ಟಲೆ ಟ್ರಾಫಿಕ್‌ ಜಾಮ್‌ ಆಗಿತ್ತು.

ಎಸ್‌ಪಿಎಸ್‌ ನಗರ, ಶಿವ ನಗರ… ಮುಂತಾದ ಕಡೆಯಲ್ಲಿನ ತಗ್ಗು ಪ್ರದೇಶಗಳಲ್ಲಿನ ಮನೆಗೆ ಏಕಾಏಕಿ ನೀರು ನುಗ್ಗಿದ್ದು ಜನರು ತೊಂದರೆ ಅನುಭವಿಸುವಂತಾಯಿತು. ಮಳೆಯಿಂದ ಮಿನಿ ಕೆರೆಯಂತಾಗುವ ಸಾರಿಗೆ ಬಸ್‌ ನಿಲ್ದಾಣದಲ್ಲಿ ಸಾಕಷ್ಟು ಪ್ರಮಾಣದ ನೀರು ನಿಂತಿದ್ದರಿಂದ ಪ್ರಯಾಣಿಕರು ಬಸ್‌ ಹತ್ತಲು ಮತ್ತು ಇಳಿದು ತಮ್ಮ ಪ್ರದೇಶಕ್ಕೆ ತೆರಳಲು ಪ್ರಯಾಸ ಪಡಬೇಕಾಯಿತು.

ಕಳೆದ ಅನೇಕ ವರ್ಷದಿಂದ ಸಣ್ಣ ಮಳೆಗೂ ಸಹ ದಾವಣಗೆರೆಯಲ್ಲಿ ದೊಡ್ಡ ಪ್ರಮಾಣದ ಸಮಸ್ಯೆ ಆಗುವ ಉದಾಹರಣೆ ಸಾಕಷ್ಟು ಇವೆ. ಪ್ರತಿ ಮಳೆಗಾಲದಲ್ಲೂ ಸಮಸ್ಯೆ ಬಗೆ ಹರಿಸುವ ಭರಪೂರ ಭರವಸೆ ನೀಡಲಾಗುತ್ತದೆ. ಆದರೆ, ಅದು ಕಾರ್ಯರೂಪಕ್ಕೆ ಬರುವುದಿಲ್ಲ. ಭರವಸೆಗಳು ಸಹ ಮಳೆಯ ನೀರಿನಲ್ಲೇ ಕೊಚ್ವಿ ಕೊಂಡು ಹೋಗುತ್ತವೆ…. ಎಂಬ ಸಾರ್ವಜನಿಕರ ದೂರು ಸತ್ಯ ಎಂಬುದಕ್ಕೆ ಅನೇಕ ಕಡೆ ಸಮಸ್ಯೆ ಉಂಟಾಗಿದ್ದೇ ಸಾಕ್ಷಿ.

ಈಗಲೇ ಎಚ್ಚೆತ್ತುಕೊಂಡು ಮಳೆಯಿಂದ ಸಮಸ್ಯೆ ಎದುರಾಗುವ ಪ್ರದೇಶಗಳಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಂಡಲ್ಲಿ ಜನರು ತೊಂದರೆ ಅನುಭವಿಸುವುದು ತಪ್ಪುತ್ತದೆ. ಈ ನಿಟ್ಟಿನಲ್ಲಿ ಸಂಬಂಧಿತರು ಗಮನ ಹರಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯ.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.