ಸಮಕಾಲೀನ ಸಮಸ್ಯೆಗಳಿಗೆ ಬಸವತತ್ವ ಪರಿಹಾರ

ಪ್ರವಚನ ಉದ್ಘಾಟನೆ ಸರಳವಾಗಿರುವ ವಚನಗಳನ್ನು ಓದುವ ಮೂಲಕ ಬದುಕಿನ ಮಾರ್ಗ ಕಂಡುಕೊಳ್ಳಬೇಕು

Team Udayavani, Aug 3, 2019, 3:25 PM IST

3-Agust-36

ದಾವಣಗೆರೆ: ವಿರಕ್ತ ಮಠದಲ್ಲಿ ಶುಕ್ರವಾರ ಸಂಜೆ ಕಲ್ಯಾಣ ದರ್ಶನ ಪ್ರವಚನ ಉದ್ಘಾಟನೆ.

ದಾವಣಗೆರೆ: ಸಮಕಾಲೀನ ಸಮಸ್ಯೆಗಳಾದ ದ್ವೇಷಾಸೂಯೆ, ಅಸಹಿಷ್ಣುತೆ, ಭ್ರಷ್ಟಾಚಾರ, ಜಾತಿಯತೆ, ಅಸಮಾನತೆ ಮತ್ತು ದುಶ್ಚಟ, ದುವ್ಯರ್ಸನಗಳಿಗೆ ಬಸವತತ್ವ ಅತ್ಯುತ್ತಮ ಪರಿಹಾರ ಎಂದು ದಾವಣಗೆರೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಪ್ರತಿಪಾದಿಸಿದ್ದಾರೆ.

109ನೇ ಶ್ರಾವಣ ಮಾಸದ ಪ್ರಯುಕ್ತ ಶುಕ್ರವಾರ ವಿರಕ್ತ ಮಠದಲ್ಲಿ ಪ್ರಾರಂಭವಾದ ಕಲ್ಯಾಣ ದರ್ಶನ ಪ್ರವಚನ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಬಸವಣ್ಣನವರು ಕಟ್ಟಿದ ಕಲ್ಯಾಣ ರಾಜ್ಯ ಇಂದಿಗೂ ಪ್ರಸ್ತುತವಾಗಿದೆ ಎಂದರು.

ಸಮಾಜದಲ್ಲಿನ ಸರ್ವರಿಗೆ ಒಳಿತನ್ನು ಬಯಸುವುದೇ ಕಲ್ಯಾಣವಾಗಿದೆ. ವ್ಯಕ್ತಿಯ ಉದ್ಧಾರ ಮತ್ತು ಜಗತ್ತು, ಸಮಾಜ, ದೇಶದ ಪ್ರಗತಿಯೇ ಕಲ್ಯಾಣದ ಧ್ಯೇಯವಾಗಿದೆ ಎಂದು ತಿಳಿಸಿದರು.

ಮಹಾನ್‌ ದಾರ್ಶನಿಕ ಆಣ್ಣ ಬಸವಣ್ಣನವರು ಒಳಗೊಂಡಂತೆ ಎಲ್ಲಾ ಬಸವಾದಿ ಶರಣರ ಜೀವನವೇ ಆದರ್ಶ. ಅವರು ಕಂಡುಂಡಂತಹ ಅನುಭವವೇ ವಚನ ಸಾಹಿತ್ಯವಾಗಿ ಮೂಡಿ ಬಂದಿದೆ. ಪ್ರತಿಯೊಬ್ಬರು ಅತೀ ಸರಳವಾಗಿ ಇರುವ ವಚನಗಳನ್ನು ಓದುವ ಮೂಲಕ ಬದುಕಿನ ಮಾರ್ಗ ಕಂಡುಕೊಳ್ಳಬೇಕು ಎಂದು ತಿಳಿಸಿದರು.

ಜಾತಿ, ವರ್ಗ, ವರ್ಣ, ಲಿಂಗಭೇದ, ವಯೋಭೇದ ಇಲ್ಲದ, ಸರ್ವರಿಗೆ ಸಮಪಾಲು, ಸರ್ವರಿಗೆ ಸಮಬಾಳು… ನೀಡುವ ಆದರ್ಶ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕಿದೆ. ಅಂತಹ ಪ್ರೇರಣೆ, ಸ್ಫೂರ್ತಿ, ಮಾರ್ಗದರ್ಶನ ನೀಡುವುದಕ್ಕಾಗಿಯೇ ಶ್ರಾವಣ ಮಾಸದಲ್ಲಿ ಪ್ರವಚನ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಗಳು ತಿಳಿಸಿದರು.

ಕಲ್ಯಾಣ ದರ್ಶನ ಪ್ರವಚನ ಆಲಿಸುವುದರಿಂದ ಮನಸ್ಸು ಹಿರಿಯದಾಗುತ್ತದೆ. ಮನಸ್ಸು ವಿಶಾಲ ಆಗುತ್ತದೆ. ದ್ವೇಷ, ಸ್ವಾರ್ಥ, ಮತ್ಸರ, ಅಹಂಕಾರ ದೂರವಾಗುತ್ತವೆ ಎಂದು ತಿಳಿಸಿದರು.

ದಾವಣಗೆರೆ ವಿರಕ್ತ ಮಠದಲ್ಲಿ 109 ವರ್ಷಗಳ ಹಿಂದೆ ಶ್ರೀ ಜಯದೇವ ಜಗದ್ಗುರುಗಳು, ಮೃತ್ಯುಂಜಯ ಅಪ್ಪಗಳು, ಹರ್ಡೇಕರ್‌ ಮಂಜಪ್ಪ ಶ್ರಾವಣ ಮಾಸದ ಪ್ರವಚನ ಪ್ರಾರಂಭಿಸಿದರು. ಶ್ರಾವಣ ಮಾಸದಲ್ಲಿ ಒಳ್ಳೆಯ ವಿಚಾರ ಕೇಳಬೇಕು ಎನ್ನುವುದು ಪ್ರವಚನದ ಮೂಲ ಉದ್ದೇಶ. ಶ್ರವಣ… ಎಂದರೆ ಕೇಳುವುದು. ಹಾಗಾಗಿಯೇ ಶ್ರಾವಣ ಮಾಸದಲ್ಲಿ ಒಳ್ಳೆಯ ವಿಚಾರ ಕೇಳುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.

ದಾವಣಗೆರೆಯ ವಿರಕ್ತ ಮಠದಲ್ಲಿ 1911 ರಲ್ಲಿ ಪ್ರಾರಂಭವಾಗಿರುವ ಶ್ರಾವಣ ಮಾಸದಲ್ಲಿನ ಪ್ರವಚನ ಕಾರ್ಯಕ್ರಮ ಇಂದಿಗೂ ನಡೆದುಕೊಂಡು ಬರುತ್ತಿದೆ. ಇಡೀ ದೇಶಕ್ಕೆ ಇಂತಹ ಕಾರ್ಯಕ್ರಮ ಪ್ರಚುರ ಪಡಿಸಿದ ಕೀರ್ತಿ ಶ್ರೀಮಠಕ್ಕೆ ಸಲ್ಲುತ್ತದೆ ಎಂದು ತಿಳಿಸಿದರು.

ಈಗ ಅನೇಕರು ಸದಾ ಟಿವಿಗಳ ಮುಂದೆ ಕುಳಿತು ಧರ್ಮ, ಸಂಸ್ಕೃತಿ, ಸಂಪ್ರದಾಯ, ಆಚಾರ, ವಿಚಾರ, ಮರೆಯುತ್ತಿದ್ದಾರೆ. ಟಿವಿ ಎಂಬ ಮಾಯೆ ಎಲ್ಲವನ್ನೂ ನುಂಗಿದೆ. ಟಿವಿ ಬಿಟ್ಟು ಪ್ರವಚನ ಕೇಳುವುದರಿಂದ ಜೀವನಕ್ಕೆ ಉತ್ತಮ ಮಾರ್ಗದರ್ಶನ ದೊರೆಯುತ್ತದೆ. ಶ್ರಾವಣ ಮಾಸದ ಅಂಗವಾಗಿ ಪ್ರತಿ ದಿನ ಸಂಜೆ 6.30 ರಿಂದ ನಡೆಯುವ ಪ್ರವಚನ ಕಾರ್ಯಕ್ರಮಕ್ಕೆ ಆಗಮಿಸಿ, ಪ್ರವಚನ ಕೇಳಬೇಕು ಎಂದು ತಿಳಿಸಿದರು.

ಮಹಲಿಂಗಪುರದ ಆಧ್ಯಾತ್ಮಿಕ ಚಿಂತಕ ಚನ್ನಬಸವ ಗುರೂಜಿ ಮಾತನಾಡಿ, 12ನೇ ಶತಮಾನದಲ್ಲಿ ಬಸವಾದಿ ಶರಣರು ಅತ್ಯಂತ ಉತ್ಕೃಷ್ಟ ಮಾರ್ಗದರ್ಶನ ನೀಡಿದರು. ವಚನ ಸಾಹಿತ್ಯ ಹೃದಯವನ್ನ ಮುಟ್ಟುವಂತಹ ಸಾಹಿತ್ಯ. ಬದುಕಿಗೆ ಉತ್ತಮ ಮಾರ್ಗದರ್ಶನ ನೀಡುವ ವಚನಗಳ ಅಭ್ಯಾಸ ಮಾಡಬೇಕು. ಬದುಕಿನ ಕೃತಾರ್ಥತೆ ಪಡೆಯಬೇಕು ಎಂದು ತಿಳಿಸಿದರು.

ನಾಯಕನಹಟ್ಟಿಯ ಅನುಭಾವಿ ಪ.ಮ. ಗುರುಲಿಂಗಯ್ಯ, ರೇಷ್ಮೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಡಿ. ಬಸವರಾಜ್‌, ದಾವಣಗೆರೆ ಅರ್ಬನ್‌ ಬ್ಯಾಂಕ್‌ ನಿರ್ದೇಶಕ ಮಂಜುನಾಥ್‌ ಬೆಳ್ಳೊಡಿ, ಎಂ. ದೊಡ್ಡಪ್ಪ, ರೇಖಾ ಎಂ.ಸಿ. ರಾಜು, ಎಂ. ಜಯಕುಮಾರ್‌, ಎಂ.ಕೆ. ಬಕ್ಕಪ್ಪ, ಹಾಸಭಾವಿ ಕರಿಬಸಪ್ಪ ಇತರರು ಇದ್ದರು.

ಟಾಪ್ ನ್ಯೂಸ್

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.