ಮಹಾತ್ಮರ ಚಿಂತನೆ-ಆದರ್ಶ ಅಳವಡಿಸಿಕೊಳ್ಳೋಣ

•ನಾಡಪ್ರಭು ಕೆಂಪೇಗೌಡ ಜಯಂತಿ•ಬೆಂಗಳೂರು ನಿರ್ಮಾತೃ•387 ದೊಡ್ಡ ಕೆರೆ-ಅನೇಕ ಚಿಕ್ಕ ಕೆರೆ ಕಟ್ಟಿಸಿದವರು

Team Udayavani, Jun 28, 2019, 10:12 AM IST

28-June-3

ದಾವಣಗೆರೆ: ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದ ಸಂದರ್ಭ.

ದಾವಣಗೆರೆ: ಮಹಾತ್ಮರನ್ನು ಮಹಾತ್ಮರಾಗಿರಲು ಬಿಟ್ಟು, ಅವರ ಆಲೋಚನೆ ಹಾಗೂ ಚಿಂತನೆಗಳನ್ನು ಮಾತ್ರ ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳೋಣ. ಮಹಾತ್ಮರನ್ನು ಯಾವುದೇ ಒಂದು ಜಾತಿ, ಧರ್ಮಕ್ಕೆ ಸೀಮಿತ ಗೊಳಿಸಬಾರದು ಎಂದು ಬೆಂಗಳೂರಿನ ಜಾನಪದ ಹಾಗೂ ಬುಡಕಟ್ಟು ಸಂಶೋಧಕ ಡಾ| ಹನಿಯೂರು ಚಂದ್ರೇಗೌಡ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘದ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಕುವೆಂಪು ಕನ್ನಡ ಭವನದಲ್ಲಿ ಆಯೋಜಿದ್ದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಮಹಾತ್ಮರ ಚಿಂತನೆಗಳು ಮತ್ತು ಕಾರ್ಯ ಚಟುವಟಿಕೆಗಳನ್ನು ನಾವು ತಿಳಿದುಕೊಳ್ಳುವ ಮೂಲಕ ನಮ್ಮಲ್ಲಿ ಬದಲಾವಣೆ ತಂದುಕೊಳ್ಳಬೇಕು ಎಂದರು.

ನಾಡಪ್ರಭು ಕೆಂಪೇಗೌಡರು ಸರ್ವಜಾತಿ ಸಮನ್ವಯ, ಸರ್ವಧರ್ಮ ಪಾಲಕರು. ವಿಶಾಲ ನೀರಾವರಿ ಯೋಜನೆಗಳು ಹಾಗೂ ಬೃಹತ್‌ ಬೆಂಗಳೂರು ನಿರ್ಮಾಣದಂತಹ ಕಾರ್ಯದಿಂದ ನಾಡಿನಲ್ಲಿ ಪ್ರಖ್ಯಾತಿ ಹೊಂದಿದಂತಹವರು. ಅವರ ಅಂದಿನ ಯೋಜನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು. ಕೆಂಪೇಗೌಡರು ಸುಮಾರು 480 ವರ್ಷಗಳ ಹಿಂದೆಯೇ ಕೃಷಿ ಮತ್ತು ನೀರಾವರಿಗೆ ಹೆಚ್ಚಿನ ಪ್ರ್ರಾಮುಖ್ಯತೆ ನೀಡಿದ್ದು, ಅದಕ್ಕಾಗಿ 387 ದೊಡ್ಡ ಕೆರೆಗಳು ಹಾಗೂ ಸಾವಿರಕ್ಕೂ ಅಧಿಕ ಸಣ್ಣ ಕೆರೆ ನಿರ್ಮಿಸಿದ್ದರು. ಇಂದು ಬೆಂಗಳೂರು ಶರವೇಗದ ಬೆಳವಣಿಗೆಯಿಂದಾಗಿ ಸಿದ್ದನಕಟ್ಟೆ ದೊಡ್ಡ ಕೆರೆಯು ಕೆ.ಆರ್‌ ಮಾರುಕಟ್ಟೆಯಾಗಿ, ಸಂಪಂಗಿ ಕೆರೆಯು ಕಂಠೀರವ ಸ್ಟೇಡಿಯಂ ಆಟದ ಮೈದಾನವಾಗಿ, ಧರ್ಮಾವತಿ ಕೆರೆಯು ಮೆಜೆಸ್ಟಿಕ್‌ ಬಸ್‌ ನಿಲ್ದಾಣವಾಗಿ ಮಾರ್ಪಟ್ಟಿವೆ. ನಿರಂತರ ಒತ್ತುವರಿಯಿಂದಾಗಿ ಈಗ ಕೇವಲ ಬೆರಳೆಣಿಕೆಯಷ್ಟು ಕೆರೆಗಳು ಮಾತ್ರ ಉಳಿದುಕೊಂಡಿವೆ ಎಂದು ವಿಷಾದಿಸಿದರು.

ಕೆಂಪೇಗೌಡರು ತಮ್ಮ ಕಾಲಾವಧಿಯಲ್ಲಿ ಸರ್ವಜಾತಿಗೆ ಪ್ರಾಮುಖ್ಯತೆ ನೀಡಿ, ಜಾತಿ ಮತ್ತು ಕುಲಕಸುಬುಗಳಿಗೆ ಸಂಬಂಧಿಸಿದಂತೆ ಶೆಟ್ಟಿಪೇಟೆ, ಗೌಡಪೇಟೆ, ಅಕ್ಕಿಪೇಟೆ ಮತ್ತು ಬಳೆಪೇಟೆ ಸೇರಿದಂತೆ ಸುಮಾರು 52 ಪೇಟೆಗಳನ್ನು ಕಟ್ಟಿದ್ದಾರೆ. ಕೆಂಪೇಗೌಡರ ಈ ಪೇಟೆಗಳನ್ನು ಕಂಡ ಬ್ರಿಟಿಷರು ಲಂಡನ್‌ನಲ್ಲಿ 12 ಪೇಟೆಗಳನ್ನು ಇವರ ವಿಚಾರಧಾರೆ ಆಧರಿಸಿ ಲಂಡೋನಿಯಾ ಎನ್ನುವ ಸ್ಟ್ರೀಟ್‌ಗಳನ್ನು ನಿರ್ಮಿಸಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಶೈಲಜಾ ಬಸವರಾಜ್‌ ಮಾತನಾಡಿ, ಇಂದು ಕರ್ನಾಟಕ ಎಂದ ಕೂಡಲೇ ಕೆಂಪೇಗೌಡರು 480 ವರ್ಷಗಳ ಹಿಂದೆ ನಿರ್ಮಿಸಿದ ಬೆಂಗಳೂರು ಹೆಸರನ್ನು ಹೇಳುತ್ತಾರೆ. ಕೆಂಪೇಗೌಡರು ಬೆಂಗಳೂರು ನಗರದಲ್ಲಿ ಉತ್ತಮ ಮಾರುಕಟ್ಟೆ, ವ್ಯವಸ್ಥಿತ‌ ಪೇಟೆಗಳನ್ನು ನಿರ್ಮಿಸಿ, ಅಂದಿನ ಕಾಲದಲ್ಲಿಯೇ ಎಲ್ಲರಿಗೂ ಉಪಯುಕ್ತವಾಗುವಂತಹ ನಗರ ನಿರ್ಮಿಸಿದ್ದಾರೆ ಎಂದು ಹೇಳಿದರು.

ಶಾಸಕ ಎಸ್‌.ಎ ರವೀಂದ್ರನಾಥ್‌ ಮಾತನಾಡಿ, ಕೆಂಪೇಗೌಡರು ಬೆಂಗಳೂರು ನಿರ್ಮಿಸಿ, ನೂರಾರು ಕೆರೆಗಳನ್ನು ಕಟ್ಟಿದ್ದಾರೆ. ಆದರೆ, ನಾವು ಒಂದು ಕೆರೆಯನ್ನೂ ಕಟ್ಟಲಾಗುವುದಿಲ್ಲ. ಅಂದಿನ ಜನರಲ್ಲಿ ತ್ಯಾಗ ಮನೊಭಾವ ಇದ್ದಿದ್ದರಿಂದ ಅವರು ಕೆರೆ ಕಟ್ಟಲು ಜಮೀನು ದಾನ ಮಾಡಿದ್ದರು. ಇಂದು ಕೆರೆಗಳನ್ನು ಒತ್ತುವರಿ ಮಾಡುತ್ತಿರುವುದು ವಿಷಾದನೀಯ ಎಂದರು.

ಜಿಪಂ ಸದಸ್ಯ ಬಸವಂತಪ್ಪ, ಕೆಂಪೇಗೌಡರು ಬೆಂಗಳೂರು ನಿರ್ಮಿಸಿದ್ದರೆ, ನಾವು ಒಡೆದ ಮನಸ್ಸುಗಳನ್ನು ಒಗ್ಗೂಡಿಸಿ, ಜಾತಿ-ಮತ ಭೇದಗಳಿಲ್ಲದ ಹೊಸ ನಾಡನ್ನು ಕಟ್ಟಬೇಕಿದೆ ಎಂದರು.

ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ ಮಾತನಾಡಿ, ಜನರಿಗಾಗಿ ಕೆಲಸ ಮಾಡಿದಂತಹ ಕೆಂಪೇಗೌಡರು ಮತ್ತು ವಿಶ್ವೇಶ್ವರಯ್ಯನವರು ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದ್ದಾರೆೆ. ಮಹನೀಯರ ಚಿಂತನೆಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ನಮ್ಮಿಂದಾಗಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಒಕ‌್ಕಲಿಗ ಸಂಘದ ಅಧ್ಯಕ್ಷ ಎನ್‌.ಜೆ ನಾಗರಾಜ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್‌ ಬೆಕ್ಕೇರಿ, ಸಮಾಜದ ಮುಖಂಡರು ಭಾಗವಹಿಸಿದ್ದರು.

ಕೆಂಪೇಗೌಡರು ತಮ್ಮ ಕಾಲಾವಧಿಯಲ್ಲಿ ಸರ್ವಜಾತಿಗೆ ಪ್ರಾಮುಖ್ಯತೆ ನೀಡಿ, ಜಾತಿ ಮತ್ತು ಕುಲಕಸುಬುಗಳಿಗೆ ಸಂಬಂಧಿಸಿದಂತೆ ಶೆಟ್ಟಿಪೇಟೆ, ಗೌಡಪೇಟೆ, ಅಕ್ಕಿಪೇಟೆ ಮತ್ತು ಬಳೆಪೇಟೆ ಸೇರಿದಂತೆ ಸುಮಾರು 52 ಪೇಟೆಗಳನ್ನು ಕಟ್ಟಿದ್ದಾರೆ. ಕೆಂಪೇಗೌಡರ ಈ ಪೇಟೆಗಳನ್ನು ಕಂಡ ಬ್ರಿಟಿಷರು ಲಂಡನ್‌ನಲ್ಲಿ 12 ಪೇಟೆಗಳನ್ನು ಇವರ ವಿಚಾರಧಾರೆ ಆಧರಿಸಿ ಲಂಡೋನಿಯಾ ಎನ್ನುವ ಸ್ಟ್ರೀಟ್‌ಗಳನ್ನು ನಿರ್ಮಿಸಿದ್ದಾರೆ.
•ಡಾ| ಹನಿಯೂರು ಚಂದ್ರೇಗೌಡ,
ಸಂಶೋಧಕರು

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.