ಅಚ್ಚರಿ ಫಲಿತಾಂಶದ ಕ್ಷೇತ್ರದಲ್ಲಿ ಯಾರಿಗೆ ಲೀಡ್‌?

•ಸರಿ ಸುಮಾರು ಕಳೆದ ವಿಧಾನಸಭೆ ಚುನಾವಣೆಯಷ್ಟೇ ಮತದಾನ ಪ್ರಮಾಣ•ಬಿಜೆಪಿ ಶಾಸಕ ರವೀಂದ್ರನಾಥ್‌ ಕ್ಷೇತ್ರ

Team Udayavani, Apr 27, 2019, 11:03 AM IST

27-April-6

ದಾವಣಗೆರೆ:  ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಮತಕ್ಷೇತ್ರ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 2014 ಮತ್ತು ಈಗಷ್ಟೇ ಮುಗಿದಿರುವ 2019ರ ಚುನಾವಣೆಯಲ್ಲಿನ ಮತದಾನ ಪ್ರಮಾಣದಲ್ಲಿ ಭಾರೀ ವ್ಯತ್ಯಾಸವೇನು ಇಲ್ಲ.

2008ರಲ್ಲಿ ಅಸ್ತಿತ್ವಕ್ಕೆ ಬಂದಿರುವ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 1,21,501 ಪುರುಷರು ಮತ್ತು 1,22,041 ಮಹಿಳೆಯರು ಹಾಗೂ 32 ಇತರೆ ಒಳಗೊಂಡಂತೆ 2,43,574 ಮತದಾರರು ಇದ್ದಾರೆ.

ಕಳೆದ ಏ.23 ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ. 65.71 ಮತದಾನ ಆಗಿದೆ. 81,420 ಪುರುಷರು, 78,644 ಮಹಿಳಾ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಒಟ್ಟಾರೆ ಕ್ಷೇತ್ರದ 2,43,574 ಮತದಾರರ ಪೈಕಿ 1,60,064 ಮಂದಿ ತಮ್ಮ ಸಂವಿಧಾನಿಕ ಹಕ್ಕು ಚಲಾಯಿಸಿದ್ದಾರೆ.

2014ರಲ್ಲಿ ನಡೆದ ಚುನಾವಣೆಯಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಶೇ. 65.13 ಮತದಾನ ಆಗಿತ್ತು. 2,26,924 ಮತದಾರರಲ್ಲಿ 1,48,025 ಮತದಾರರರು ಮತದಾನ ಮಾಡಿದ್ದರು.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಎಸ್‌.ಎ. ರವೀಂದ್ರನಾಥ್‌ 81,434 ಮತ ಗಳಿಸಿದ್ದರು. ಕ್ಷೇತ್ರದ ಶಾಸಕರು ಆಗಿದ್ದಂತಹ ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ 58,427 ಮತ ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿದ್ದರು.

ಗಮನಾರ್ಹ ವಿಷಯವೆಂದರೆ ಬಹಳ ವರ್ಷಗಳ ನಂತರ 2013ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಬಿಜೆಪಿಯ ಎಸ್‌.ಎ. ರವೀಂದ್ರನಾಥ್‌ ವಿರುದ್ಧ 53 ಸಾವಿರಕ್ಕೂ ಅಧಿಕ ಮತಗಳಲ್ಲಿ ಗೆಲುವು ಸಾಧಿಸಿದ್ದರು. ಒಂದು ವರ್ಷದ ಅಂತರದಲ್ಲಿ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಸ್ವ ಕ್ಷೇತ್ರದಲ್ಲಿ ಭಾರೀ ಹಿನ್ನೆಡೆ ಕಂಡಿದ್ದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಮತ್ತು ಬಿಜೆಪಿಯ ಎಸ್‌.ಎ. ರವೀಂದ್ರನಾಥ್‌ ನಡೆದ ರೋಚಕ, ಭಾರೀ ಪೈಪೋಟಿಯಲ್ಲಿ ರವೀಂದ್ರನಾಥ್‌ ಅಚ್ಚರಿಯ ಗೆಲುವು ಸಾಧಿಸುವ ಮೂಲಕ ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳುವಂತೆ ಮಾಡಿದರು. ಆ ಫಲಿತಾಂಶ ಲೋಕಸಭಾ ಚುನಾವಣೆ ಮೇಲೂ ಪರಿಣಾಮ ಉಂಟು ಮಾಡುವ ಲೆಕ್ಕಾಚಾರ ಇದೆ.

ಕಳೆದ ಬಾರಿ ಚುನಾವಣೆಗಿಂತಲೂ ಈ ಬಾರಿ ಚುನಾವಣೆಯಲ್ಲಿ ಮತದಾನ ಮಾಡಿದವರ ಶೇಕಡಾವಾರು ಪ್ರಮಾಣದಲ್ಲಿ ಶೇ. 0.58 ಮಾತ್ರ ವ್ಯತ್ಯಾಸ. ಶೇಕಡಾವಾರುಗಿಂತಲೂ ಮತದಾರರ ಲೆಕ್ಕ ಹಾಕಿದರೆ ಈ ಬಾರಿ 11,979 ಹೆಚ್ಚು ಮತದಾರರು ತಮ್ಮ ಪರಮೋಚ್ಚ ಅಧಿಕಾರ ಚಲಾಯಿಸಿದ್ದಾರೆ. 11,979 ಮತಗಳು ಫಲಿತಾಂಶದ ಲೆಕ್ಕಾಚಾರವನ್ನೇ ಬುಡಮೇಲು ಮಾಡಬಹುದು ಎಂಬುದು ಗಮನಾರ್ಹ!.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಪ್ರಮಾಣದಲ್ಲಿ ಕಳೆದ ಬಾರಿಯ ಚುನಾವಣೆಗಿಂತ ಅಂತಹ ಭಾರೀ ವ್ಯತ್ಯಾಸ ಇಲ್ಲ. ಹಾಗಾಗಿಯೇ ಇದೇ ಪಕ್ಷ ಲೀಡ್‌ ಪಡೆಯುತ್ತದೆ ಎಂದು ಅಂದಾಜಿಸುವುದು ಸುಲಭ ಅಲ್ಲ.

2018ರ ಚುನಾವಣೆಯಂತೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳ ಜೊತೆಗೆ ಹೊಸದಾಗಿ ಸೇರ್ಪಡೆಯಾಗಿರುವ ಯುವ ಮತದಾರರ ಒಲವಿನ ಬಲದ ಆಧಾರದಲ್ಲಿ ಬಿಜೆಪಿಗೆ ಲೀಡ್‌… ದೊರೆಯಲಿದೆ ಎಂಬುದು ಕಮಲ ಪಾಳೆಯದ ಲೆಕ್ಕಾಚಾರ.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಕಣದಲ್ಲಿರುವ ಕಾರಣಕ್ಕೆ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳ ಜೊತೆಗೆ ಜೆಡಿಎಸ್‌ ಮತಗಳು ಸೇರುವುದರಿಂದ ಮೈತ್ರಿ ಅಭ್ಯರ್ಥಿಗೆ ಲೀಡ್‌ ದೊರೆಯಲಿದೆ ಎಂಬುದು ಮೈತ್ರಿ ಪಾಳೆಯದ ಅಂದಾಜು. ಬಿಜೆಪಿ ಮತ್ತು ಮೈತ್ರಿ ಅಭ್ಯರ್ಥಿಗಳ ಪರ ಏನೇ ಲೆಕ್ಕಾಚಾರ ಇದ್ದರೂ ಅದು ಪಕ್ಕಾ ಆಗುವುದು ಮೇ 23 ರಂದು ಮತ ಎಣಿಕೆಯ ನಂತರವೇ. ಅಂತಹ ಫೈಟ್… ಇಲ್ಲ ಎಂಬ ಕಾರಣಕ್ಕಾಗಿಯೇ ಏನೋ ಬೆಟ್ಟಿಂಗ್‌ ಸದ್ದು ಇಲ್ಲವೇ ಇಲ್ಲ ಎನ್ನುವಂತಿದೆ.

ಟಾಪ್ ನ್ಯೂಸ್

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.