ಕ್ರೀಡೆ-ಸ್ಪರ್ಧೆಗಳ ಮೂಲಕ ಮತದಾರರ ಜಾಗೃತಿ


Team Udayavani, Apr 19, 2019, 1:24 PM IST

19-April-16

ದಾವಣಗೆರೆ: ಸಾಮೂಹಿಕ ಚಿತ್ರರಚನೆ, ಭಿತ್ತಿ ಚಿತ್ರ ರಚನೆ,
ಹಗ್ಗ-ಜಗ್ಗಾಟ, ಮಡಿಕೆ ಹೊಡೆಯುವುದು, ರಂಗೋಲಿ ಸ್ಪರ್ಧೆ,
ಜಾಗೃತಿ ಗಾಯನ, ಜಾನಪದ ತಂಡಗಳ ಪ್ರದರ್ಶನ, ಮೆಹಂದಿ
ಸಂಭ್ರಮ, ಸ್ಕಿನ್‌ ಆರ್ಟ್‌ ಮತ್ತು ಸಾಹಸ ಕ್ರೀಡೆಗಳ ಪ್ರದರ್ಶನದ
ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

ಗುರುವಾರ ಸಂಜೆ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಜಿಲ್ಲಾ ಸ್ವೀಪ್‌ ಸಮಿತಿ, ಯುವ ಸಬಲೀಕರಣ ಮತ್ತು ಕ್ರೀಡಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಮೂಹ, ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ, ವಿಶ್ವವಿದ್ಯಾಲಯ ಲಲಿತಕಲಾ ಮಹಾವಿದ್ಯಾಲಯ, ಹಿಮಾಲಯನ್‌ ಅಡ್ವೆಂಚರ್‌ ಆ್ಯಂಡ್‌ ನ್ಪೋರ್ಟ್ಸ್ ಅಕಾಡೆಮಿ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಉತ್ಸವ ಮತದಾನ ಜಾಗೃತಿಗೆ ವೇದಿಕೆಯಾಗಿತ್ತು.

ಯುವತಿಯರು, ವಿದ್ಯಾರ್ಥಿನಿಯರು, ಮಹಿಳೆಯರು ರಂಗೋಲಿ ಮೂಲಕ ಮತದಾನದ ಮಹತ್ವದ ಸಂದೇಶ ಸಾರಿದರು. ಚಿತ್ರಕಲಾ ಶಿಕ್ಷಕರು ಮತದಾನದ ಬೆರಳಿನ ಚಿತ್ರದ ಮೂಲಕ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಕೋರಿದರು.

ದಾವಣಗೆರೆ ವಿಶ್ವವಿದ್ಯಾಲಯದ ಲಲಿತಕಲಾ ಮಹಾವಿದ್ಯಾಲುದ
ವಿದ್ಯಾರ್ಥಿಗಳು ವಿದ್ಯುನ್ಮಾನ ಮತಯಂತ್ರ, ವಿವಿ ಪ್ಯಾಟ್‌, ಸಂಸತ್‌,
ಸರತಿ ಸಾಲಲ್ಲಿ ಮತದಾರರು ನಿಂತಿರುವ ಚಿತ್ರ ಬರೆಯುವ ಮೂಲಕ ಮತದಾನದ ಜಾಗೃತಿ ಮೂಡಿಸಿದರು.

ಹಗ್ಗ ಜಗ್ಗಾಟ, ಗೋಣಿ ಚೀಲದ ಸ್ಪರ್ಧೆ ಸಹ ನಡೆದವು.
ಜೆ.ಎಚ್‌. ಪಟೇಲ್‌ಕಾಲೇಜು ವಿದ್ಯಾರ್ಥಿನಿಯರು ಸ್ವೀಪ್‌ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಎಚ್‌. ಬಸವರಾಜೇಂದ್ರ ಅವರಿಗೆ ತ್ರಿವರ್ಣ ಧ್ವಜದ ಟ್ಯಾಟೂ ಹಾಕುವ ಮೂಲಕ ಗಮನ ಸೆಳೆದರು.
ಹಿಮಾಲಯನ್‌ ಅಡ್ವೆಂಚರ್‌ ಆ್ಯಂಡ್‌ ಸ್ಪೋರ್ಟ್ಸ್
ಅಕಾಡೆಮಿಯಿಂದ ಕ್ಲೈಂಬಿಂಗ್‌, ರೋಪ್ಲಿಂಗ್‌ ಮೂಲಕ ಎಲ್ಲರಲ್ಲಿ
ರೋಚಕತೆ ಉಂಟು ಮಾಡಿದರು. ಮತದಾನ ಮಾಡುವಂತೆ
ಕೋರಿದರು.

ಸ್ವೀಪ್‌ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಎಚ್‌. ಬಸವರಾಜೇಂದ್ರ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹಲವಾರು ಕಾರ್ಯಕ್ರಮಗಳನ್ನು ಜಿಲ್ಲಾ ಸ್ವೀಪ್‌ ಸಮಿತಿಯಿಂದ ಮಾಡಲಾಗಿದೆ ಎಂದರು.

ಜಿಲ್ಲಾ ಮಟ್ಟದಿಂದ ಗ್ರಾಪಂ ವರೆಗಿನ ಎಲ್ಲಾ ಇಲಾಖೆಗಳಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿವಿಧ ರೀತಿಯ ಮತ
ಜಾಗೃತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ.
ಸಾರ್ವಜನಿಕರು ಮತದಾನ ಪ್ರಕ್ರಿಯೆಯಲ್ಲಿ ಅಧಿಕ ಪ್ರಮಾಣದಲ್ಲಿ
ಪಾಲ್ಗೊಳ್ಳುವ ನಿರೀಕ್ಷೆ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆಯ ಸಾಮಾನ್ಯ ವೀಕ್ಷಕ ಆನಂದ್‌ ಶರ್ಮಾ, ಜಿಲ್ಲಾ ಪಂಚಾಯತ್‌ ಉಪಕಾರ್ಯ ದರ್ಶಿ ಭೀಮಾನಾಯ್ಕ, ಮುಖ್ಯ ಲೆಕ್ಕಾಧಿಕಾರಿ ಆಂಜನೇಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಬಿ. ಶ್ರೀನಿವಾಸ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್‌ ಬೆಕ್ಕೆರಿ, ಸಿಡಿಪಿಒ ಎಂ. ವೀಣಾ, ಜೆ.ಎಚ್‌. ಪಟೇಲ್‌ ಕಾಲೇಜಿ ಕಾರ್ಯದರ್ಶಿ
ದೊಗ್ಗಳ್ಳಿ ಗೌಡ್ರು ಪುಟ್ಟರಾಜ್‌, ಪ್ರಾಚಾರ್ಯೆ ಪ್ರತಿಭಾ ಪಿ. ದೊಗ್ಗಳ್ಳಿ,
ವ್ಯವಸ್ಥಾಪಕ ಕರಿಬಸಪ್ಪ, ಗಿರೀಶ್‌ ದೇವರಮನೆ, ವಿದ್ಯಾರ್ಥಿಗಳು
ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.