ಆಹಾರಕ್ರಾಂತಿಜತೆಗೆಸೂರುಕೊಟ್ಟಕೀರ್ತಿ ಕಾಂಗ್ರೆಸ್ ಪಕ್ಷದ್ದು
Team Udayavani, Apr 21, 2019, 12:06 PM IST
ದಾವಣಗೆರೆ: ಲೋಕಸಭಾ ಚುನಾವಣಾ ಅಭ್ಯರ್ಥಿ ಎಚ್.ಬಿ.ಮಂಜಪ್ಪ ಪರ ಡಾ| ಶಾಮನೂರು ಶಿವಶಂಕರಪ್ಪ ರೋಡ್ ಶೋ ನಡೆಸಿದರು.
ದಾವಣಗೆರೆ: ಬಡತನ ನಿರ್ಮೂಲನೆಗೆ ಅನ್ನ, ಆಶ್ರಯ, ಆರೋಗ್ಯ ಭಾಗ್ಯ ಯೋಜನೆ ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ ಎಂದು ದಾವಣಗೆರೆ ದಕ್ಷಿಣ
ವಿಧಾನಸಭಾ ಕ್ಷೇತ್ರದ ಶಾಸಕ ಡಾ|ಶಾಮನೂರು ಶಿವಶಂಕರಪ್ಪ ಹೇಳಿದರು.
ಶನಿವಾರ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಚ್ .ಬಿ.ಮಂಜಪ್ಪನವರ ಪರವಾಗಿ ನಗರದ ವಾರ್ಡ್ 8ರ ರಿಂಗ್ ರಸ್ತೆಯಿಂದ ಚುನಾವಣಾ ಪ್ರಚಾರ ಆರಂಭಿಸಿದ ಎಸ್ಸೆಸ್ಸೆ, ಎಸ್.ಎಂ.ಕೃಷ್ಣ ನಗರ, ರಾಜೀವ್ ಗಾಂಧಿ ಬಡಾವಣೆ, ವಿಜಯನಗರ
ಬಡಾವಣೆ, ಎಸ್ಪಿಎಸ್ ನಗರ, ವಾರ್ಡ್ 13ರ ಜ್ಯುಬಿಲಿ ಬಾವಿ ರಸ್ತೆ, ಹೊಸ ಮಸೀದಿ, ಹಾಸಬಾವಿ ಸರ್ಕಲ್, ಎನ್. ಆರ್.ಪೇಟೆ, ಜಗಳೂರು ಬಸ್ ನಿಲ್ದಾಣ, ಬಂಬೂಬಜಾರ್ ಮುಖಾಂತರ, ಅಮರಪ್ಪನ ತೋಟ, ವಾರ್ಡ್ 12ರ ಬಸವರಾಜಪೇಟೆ, ಚಾಮರಾಜಪೇಟೆ ಸೇರಿದಂತೆ ಇಮಾಂ ನಗರದಲ್ಲಿ ರೋಡ್ ಶೋ ನಡೆಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷ ಈ ದೇಶದಲ್ಲಿ ಅಧಿಕಾರ ಹಿಡಿದಾಗ ಸಾಕಷ್ಟು ಸಂಖ್ಯೆಯಲ್ಲಿ ಬಡತನ ತಾಂಡವವಾಡುತ್ತಿತ್ತು. ಆಗ ಆಹಾರ ಕ್ರಾಂತಿ ಮಾಡುವುದರ ಜೊತೆಗೆ ಸೂರು ಇಲ್ಲದವರಿಗೆ ಸೂರು ಕಲ್ಪಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದರು.
ಇದೀಗ ದೇಶ ಸುಭೀಕ್ಷೆಯಿಂದ ಕೂಡಿದೆ. ಒಂದು ಮನೆಯನ್ನು ತಂದೆ ಜವಾಬ್ದಾರಿಯುತವಾಗಿ ಕಟ್ಟಿದ ನಂತರ ಮಗ ದುಡಿಮೆ ಮಾಡುವಾಗ ನನ್ನಿಂದಲೇ ಮನೆ ನಡೆಯುತ್ತಿದೆ ಎನ್ನುವಂತೆ ಇಂದು ಮೋದಿ ಕೇವಲ ಅಧಿಕಾರ ಅನುಭವಿಸುತ್ತಾ ಕಾಂಗ್ರೆಸ್ ಪಕ್ಷ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ ಹೊರತು
ತಾವು ಏನು ಮಾಡಿದ್ದೇವೆ ಎಂಬುದನ್ನು ಹೇಳುತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು.
ರೋಡ್ ಶೋನಲ್ಲಿ ಭಾಗವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಚಮನ್ ಸಾಬ್, ಅಲ್ತಾಫ್, ರಹೀಂಸಾಬ್, ಸೀಮೆಎಣ್ಣೆ ಮಲ್ಲೇಶ್, ಇಟ್ಟಿಗುಡಿ ಮಂಜುನಾಥ್ ಇತರರು ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್