ನೂತನ ವರ್ಷಕ್ಕೆ ಸಂಭ್ರಮದ ಸ್ವಾಗತ


Team Udayavani, Jan 2, 2020, 5:40 PM IST

2-January-31

ದಾವಣಗೆರೆ: ಭರ್ಜರಿ ನೃತ್ಯ, ಬಣ್ಣ ಬಣ್ಣ ಚಿತ್ತಾರದ ಪಟಾಕಿ ಸಿಡಿತ, ಕೇಕ್‌ ಕಟ್‌, ಮೋಜು-ಮಸ್ತಿ… ಹೀಗೆ ವಿಧ ವಿಧವಾಗಿ ದಾವಣಗೆರೆ ಜನರು ಸಡಗರ, ಸಂಭ್ರಮದಿಂದ ಹೊಸ ವರ್ಷ- 2020
ಆಚರಿಸಿದರು.

ಹೊಸ ವರ್ಷದ ಸಂಭ್ರಮಾಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ದಾವಣಗೆರೆ ಪ್ರಮುಖ ಸ್ಥಳ, ವೃತ್ತ, ಬೇಕರಿ, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌, ಹೋಟೆಲ್‌ಗ‌ಳಿಗೆ ಝಗಮಗಿಸುವ ವಿದ್ಯುತ್‌ ದೀಪಗಳ ಅಲಂಕಾರ ಮಾಡಲಾಗಿತ್ತು. ಮಧ್ಯರಾತ್ರಿ 12 ಆಗುತ್ತಿದ್ದಂತೆ ವಿಷ್‌ ಯು ಹ್ಯಾಪಿ ನ್ಯೂ ಇಯರ್‌, ವೆಲ್‌ಕಂ ಹ್ಯಾಪಿ ನ್ಯೂ ಇಯರ್‌… ಎಂದು ಸಂಭ್ರಮಿಸಿದರು.

ಕೇಕೇ, ವಿಷಲ್‌ ಹಾಕಿ, ಕುಣಿದು, ಕುಪ್ಪಳಿಸುವ ಮೂಲಕ ಸಂಭ್ರಮದಲ್ಲಿ ಮಿಂದೆದ್ದರು. ಹೊಸ ವರ್ಷದ ಸಂಭ್ರಮಾಚರಣೆಗಾಗಿಯೇ ಹಲವೆಡೆ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಧ್ವನಿವರ್ಧಕ, ಡಿಜೆಗಳಿಂದ ಹೊರ ಹೊಮ್ಮುತ್ತಿದ್ದ ಹಾಡುಗಳಿಗೆ ಭರ್ಜರಿ ಸ್ಟೆಪ್‌ ಹಾಕಿದರು.

ಯುವಕರು, ಯುವತಿಯರು, ಹಿರಿಯರು ಯಾವುದೇ ವಯೋಮಾನದ ಬಿಗುಮಾನವಿಲ್ಲದೆ ಸಂಭ್ರಮಿಸಿದರು. ಹೊಸ ವರ್ಷದ ಸ್ವಾಗತಕ್ಕಾಗಿ ಪಾರ್ಟಿ ಸಾಮಾನ್ಯವಾಗಿತ್ತು. ದಾವಣಗೆರೆ ಕ್ಲಬ್‌ನಲ್ಲಿ ನಡೆದ ಹೊಸ ವರ್ಷದ ಸಂಭ್ರಮಾಚರಣೆ ಗಮನ ಸೆಳೆಯುವಂತಿತ್ತು. ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಇತರರು ಪಾಲ್ಗೊಂಡು ಹೊಸ ವರ್ಷದ ಶುಭ ಕೋರಿದರು.

ಓಣಿ, ವಠಾರ, ಅಕ್ಕಪಕ್ಕದ ಮನೆಯವರು ಸೇರಿಕೊಂಡು ವಿವಿಧ ಆಟೋಟ, ಮಕ್ಕಳಿಗೆ ಕ್ವಿಜ್‌, ಅಂತ್ಯಾಕ್ಷರಿ, ರಂಗೋಲಿ ಇತರೆ ಸ್ಪರ್ಧೆಗಳ ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಣೆ, ಇತರೆ ಕಾರ್ಯಕ್ರಮಗಳನ್ನು ನಡೆಸಿದರು.

ಬ್ಯಾಡ್ಮಿಂಟನ್‌, ಥ್ರೋಬಾಲ್‌, ಕುಂಟೆಬಿಲ್ಲೆ ಆಡುವ ಮೂಲಕವೂ ಹೊಸ ವರ್ಷದ ಮೊದಲ ಕ್ಷಣಗಳನ್ನು ಸ್ಮರಣೀಯ ವಾಗಿಸಿಕೊಂಡರು. ಹಲವಾರು ಕಡೆ ಕೇಕ್‌ ಕತ್ತರಿಸಿ, ಸಿಹಿ ವಿತರಿಸಿ ಹೊಸ ವರ್ಷಾಚರಣೆ ಮಾಡಿದರು. ಕೆಲವರು ಸರಿ ರಾತ್ರಿಯಲ್ಲೇ ದೇವಸ್ಥಾನಗಳಿಗೆ ತೆರಳಿ, ಪ್ರಾರ್ಥಿಸಿದರು. ಈಚೆಗೆ ಹೊಸ ವರ್ಷ ಎಂದರೆ ಬೈಕ್‌ಗಳ ಸೈಲೆನ್ಸರ್‌ ತೆಗೆದು, ಕರ್ಕಶ ಶಬ್ದ ಮಾಡುತ್ತಾ, ಕೂಗಾಟ, ಚೀರಾಟ ದೊಂದಿಗೆ ಭಾರೀ ವೇಗದಲ್ಲಿ ಸಂಚರಿಸುವುದು ಕಡ್ಡಾಯ ಎನ್ನುವಂತಾಗಿದೆ. ಅಲ್ಲಲ್ಲಿ ಯುವಕರು ಸೈಲೆನ್ಸರ್‌ ತೆಗೆದು, ಕರ್ಕಶ ಶಬ್ದ ಮಾಡುತ್ತಾ, ಕೂಗಾಟ, ಚೀರಾಟದೊಂದಿಗೆ ಭಾರೀ ವೇಗದಲ್ಲಿ ಸಂಚರಿಸಿದರು. ತಮ್ಮದೇ ರೀತಿ ಹೊಸ ವರ್ಷ ಆಚರಿಸಿದರು. ಬುಧವಾರ ಶಾಲಾ-ಕಾಲೇಜು, ಕಚೇರಿಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಮುಗಿಲು ಮುಟ್ಟುವಂತಿತ್ತು.

ಶಾಲಾ-ಕಾಲೇಜುಗಳಲ್ಲಂತೂ ಅಕ್ಷರಶಃ ಹಬ್ಬದ ವಾತಾವರಣವೇ ಕಂಡು ಬಂದಿತು. ವಿದ್ಯಾರ್ಥಿಗಳು ಬಣ್ಣ ಬಣ್ಣದ ಬಟ್ಟೆಗಳಲ್ಲಿ ಕಂಗೊಳಿಸಿದರು. ತರಗತಿ ಕೊಠಡಿಗಳನ್ನು ವಿಶೇಷವಾಗಿ ಸಿಂಗರಿಸಲಾಗಿತ್ತು. ಕೇಕ್‌ ಕತ್ತರಿಸಿ, ಸಿಹಿ ವಿತರಿಸಿ, ಶಿಕ್ಷಕರು, ಸಹಪಾಠಿಗಳೊಂದಿಗೆ ಹೊಸ ವರ್ಷದ ಮೊದಲ ದಿನ ಸವಿ ಸವಿದರು.

ಹೊಸ ವರ್ಷದ ಹಿನ್ನೆಲೆಯಲ್ಲಿ ಪಾರ್ಕ್‌ಗಳು ತುಂಬಿ ತುಳುಕಿದ್ದವು. ಟಿವಿ ಸ್ಟೇಷನ್‌ ಕೆರೆ, ಕುಂದುವಾಡ ಕೆರೆ, ಕೊಂಡಜ್ಜಿ, ಆನಗೋಡು ಪಾರ್ಕ್‌ ಇತರೆಡೆ ಜನಜಂಗುಳಿ ಕಂಡು ಬಂದಿತು. ಕುಟುಂಬದವರು, ಆಪ್ತರೊಡಗೂಡಿ ಸಾಮೂಹಿಕ ಭೋಜನದ ಮೂಲಕವೂ ಹೊಸ ವರ್ಷವನ್ನು ಸಂಭ್ರಮಿಸಿದರು. ಹೋಟೆಲ್‌, ಚಿತ್ರಮಂದಿರ, ಮಾಲ್‌ನಲ್ಲೂ ಸಂಭ್ರಮಾಚರಣೆ ಕಂಡು ಬಂದಿತು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.