ಪಾಲಿಕೆ ಬಜೆಟ್‌ನಲ್ಲಿ ಕ್ರೀಡೆಗೆ 1 ಕೋಟಿ ಮೀಸಲು


Team Udayavani, Feb 25, 2017, 1:20 PM IST

dvg4.jpg

ದಾವಣಗೆರೆ: ವೇಟ್‌ ಲಿಫ್ಟಿಂಗ್‌, ಕುಸ್ತಿ ಒಳಗೊಂಡಂತೆ ಹಲವಾರು ಕ್ರೀಡೆಗಳಿಗೆ ಇನ್ನೂ ಹೆಚ್ಚಿನ ಮಟ್ಟದ ಪ್ರೋತ್ಸಾಹ, ಸಹಕಾರ ನೀಡುವ ಉದ್ದೇಶದಿಂದ ಈ ಬಾರಿಯ ಬಜೆಟ್‌ನಲ್ಲಿ 1 ಕೋಟಿ ಅನುದಾನ ಮೀಸಲಿಡಲಾಗುವುದು ಎಂದು ಮೇಯರ್‌ ರೇಖಾ ನಾಗರಾಜ್‌ ಭರವಸೆ ನೀಡಿದ್ದಾರೆ. 

ಶುಕ್ರವಾರ ದಾವಣಗೆರೆ ಐರನ್‌ ನ್ಪೋಟ್‌ ಅಂಡ್‌ ಕಲ್ಚರಲ್‌ ಸೆಂಟರ್‌ನಿಂದ ಆಯೋಜಿಸಿರುವ ದಕ್ಷಿಣ ಭಾರತ ಮಟ್ಟದ ಪುರುಷರ, ಮಹಿಳೆಯರ ವೇಟ್‌ ಲಿಫ್ಟಿಂಗ್‌, ಬೆಂಚ್‌ಪ್ರಸ್‌ ಚಾಂಪಿಯನ್‌ಶಿಪ್‌-2017 ಉದ್ಘಾಟಿಸಿ ಮಾತನಾಡಿದ ಅವರು, ಮಹಾನಗರ ಪಾಲಿಕೆಯ ಬಜೆಟ್‌ನಲ್ಲಿ ಕ್ರೀಡಾ ಚಟುವಟಿಕೆಗೆ ಶೇ. 1 ರಷ್ಟು ಅನುದಾನ ಮೀಸಲಿಡಲಾಗುತ್ತಿತ್ತು. 

ಈ ಬಾರಿಯ ಬಜೆಟ್‌ನಲ್ಲಿ ಶೇ. 1 ರಷ್ಟು ಮೀಸಲಾತಿ ಯನ್ನು ಶೇ. 2ಕ್ಕೆ ಹೆಚ್ಚಿಸಲಾಗುವುದು  ಎಂದು ತಿಳಿಸಿದರು. ದಾವಣಗೆರೆಯಲ್ಲಿ 30 ವರ್ಷದ ನಂತರ ದಕ್ಷಿಣ ಭಾರತ ಮಟ್ಟದ ವೇಟ್‌ ಲಿಫ್ಟಿಂಗ್‌, ಬೆಂಚ್‌ಪ್ರಸ್‌ ಚಾಂಪಿಯನ್‌ಶಿಪ್‌ ನಡೆಸುತ್ತಿರುವುದು ನಿಜಕ್ಕೂ ಸಂತೋಷದ ವಿಚಾರ. ಈ ಕ್ರೀಡಾಕೂಟ ಯಶಸ್ವಿಯಾಗಲಿ, ಮುಂದಿನ ದಿನಗಳಲ್ಲಿ ರಾಷ್ಟ್ರ ಮಟ್ಟದ ಚಾಂಪಿಯನ್‌ಶಿಪ್‌ ನಡೆಯುವಂತಾಗಲಿ. 

ನಗರಪಾಲಿಕೆಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ಅಖೀಲ ಭಾರತ ವೇಟ್‌ ಲಿಫ್ಟಿಂಗ್‌ ಫೆಡರೇಷನ್‌ ಪ್ರಧಾನ ಕಾರ್ಯದರ್ಶಿ ಸುಬ್ರತ ದತ್ತ ಮಾತನಾಡಿ, ದಾವಣಗೆರೆಯಲ್ಲಿ 30 ವರ್ಷದ ನಂತರ ದಕ್ಷಿಣ ಭಾರತ ಮಟ್ಟದ ವೇಟ್‌ ಲಿಫ್ಟಿಂಗ್‌, ಬೆಂಚ್‌ಪ್ರಸ್‌ ಚಾಂಪಿಯನ್‌ ಶಿಪ್‌ ನಡೆಸಲಾಗುತ್ತಿದೆ.

ಇದೇ ಸಂದರ್ಭದಲ್ಲಿ ಮಾರ್ಚ್‌ನಲ್ಲಿ ಇಂಡೋನೇಷ್ಯಾದಲ್ಲಿ ನಡೆಯುವ ಏಷ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುವ ಭಾರತೀಯ ವೇಟ್‌ ಲಿಫ್ಟಿಂಗ್‌ ತಂಡದ ಆಯ್ಕೆ ಟ್ರಯಲ್ಸ್‌ ನಡೆಯುತ್ತಿದೆ. ಹಾಗಾಗಿ ಪ್ರತಿ ಕ್ರೀಡಾಪಟು ಉತ್ತಮ ಪ್ರದರ್ಶನ ನೀಡಬೇಕು. ಭಾರತೀಯ ತಂಡಕ್ಕೆ ಆಯ್ಕೆಗೆ ಈ ಚಾಂಪಿಯನ್‌ ಶಿಪ್‌ ಪಂದ್ಯಾವಳಿ ಉತ್ತಮ ವೇದಿಕೆಯಾಗಲಿ ಎಂದು ಆಶಿಸಿದರು. 

ಮಹಾನಗರಪಾಲಿಕೆ ಸದಸ್ಯ ದಿನೇಶ್‌ ಕೆ. ಶೆಟ್ಟಿ ಮಾತನಾಡಿ, ದಾವಣಗೆರೆ ಕುಸ್ತಿ, ವೇಟ್‌ ಲಿಫ್ಟಿಂಗ್‌, ಕ್ರಿಕೆಟ್‌ ಆಟಗಾರರ ತವರೂರು. ಇಲ್ಲಿನ ಅನೇಕ ಆಟಗಾರರು ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ ಅಲ್ಲದೆ ಹಲವಾರು ಪ್ರಶಸ್ತಿ ಪಡೆದಿದ್ದಾರೆ. ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಚಿವರಾಗಿದ್ದ ಸಂದರ್ಭದಲ್ಲಿ 30ಕ್ಕೂ ಹೆಚ್ಚು ಕೋಚ್‌ಗಳನ್ನು ನೇಮಕ ಮಾಡಿದ್ದರಿಂದ ಸಾಧನೆಗೆ ಕಾರಣವಾಗಿದೆ.

ಬೆಂಗಳೂರು, ಮೈಸೂರಿಗೆ ಮಾತ್ರವೇ ಸೀಮಿತವಾಗಿದ್ದ ಅನೇಕ ಕ್ರೀಡಾಕೂಟಗಳು ನಡೆಯುವಂತಾಯಿತು. ಕ್ರೀಡಾಂಗಣಗಳು ಸಹ ನಿರ್ಮಾಣವಾದವು ಎಂದು ಸ್ಮರಿಸಿದರು. ಮಹಾನಗರಪಾಲಿಕೆ ಸದಾ ಕ್ರೀಡಾ ಚಟುವಿಟಕೆಗೆ ಎಲ್ಲ ರೀತಿಯ ಪ್ರೋತ್ಸಾಹ, ಸಹಕಾರ ನೀಡುತ್ತಿದೆ. ಬಜೆಟ್‌ನಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಮೀಸಲಿಟ್ಟಿದ್ದ 30-40 ಲಕ್ಷ ಅನುದಾನ ಈ ಬಾರಿಯ ಬಜೆಟ್‌ನಲ್ಲಿ ದ್ವಿಗುಣಗೊಳಿಸಲಾಗುವುದು ಎಂದು ಮೇಯರ್‌ ಭರವಸೆ ನೀಡಿದ್ದಾರೆ.

ಹಾಗಾಗಿ ಮುಂದಿನ ದಿನಗಳಲ್ಲಿ ಕ್ರೀಡಾ ಚಟುವಟಿಕೆಗೆ 1 ಕೋಟಿಯಷ್ಟು ಅನುದಾನ ದೊರೆಯಲಿದೆ. ಕ್ರೀಡಾಪಟುಗಳು ಉತ್ತಮ ಸಾಧನೆಯ ಮೂಲಕ ದಾವಣಗೆರೆಗೆ ಕೀರ್ತಿ ತರಬೇಕು ಎಂದು ಆಶಿಸಿದರು. ದಾವಣಗೆರೆ ಐರನ್‌ ನ್ಪೋರ್ಟ್ಸ್ ಅಂಡ್‌  ಕಲ್ಚರಲ್‌ ಸೆಂಟರ್‌ ಅಧ್ಯಕ್ಷ ಕೆ. ಗಂಗಪ್ಪ ಅಧ್ಯಕ್ಷತೆ ವಹಿಸಿದ್ದರು. ವೇಟ್‌ ಲಿಫ್ಟಿಂಗ್‌ ಫೆಡರೇಷನ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್‌ಕುಮಾರ್‌ ಕುದ್ರೋಳಿ, ಜೋಸೆಫ್‌ ಫರ್ನಾಂಡಿಸ್‌, ಎಸ್‌. ಘೋಷ್‌, ಕೋಟೇಶ್ವರರಾವ್‌, ಬಿ.ಜಿ. ಅಜಯ್‌ ಕುಮಾರ್‌, ಪಿ.ಜಿ. ಪಾಂಡುರಂಗ, ನಗರಸಭೆ ಮಾಜಿ ಉಪಾಧ್ಯಕ್ಷ ಎ.ನಾಗರಾಜ್‌, ಬಿ. ರಘು, ರಂಗಸ್ವಾಮಿ, ಕೆ.ಆರ್‌. ಗೋವಿಂದಪ್ಪ, ಎಚ್‌. ಎಂ. ಲಕ್ಷ್ಮಿ ಇತರರು ಇದ್ದರು. ಕೆ. ಕುಮಾರ್‌ ಸ್ವಾಗತಿಸಿದರು.  

ಟಾಪ್ ನ್ಯೂಸ್

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

police crime

West Bengal ಬಿಜೆಪಿಯ ಮುಸ್ಲಿಂ ಕಾರ್ಯಕರ್ತನ ಬರ್ಬರ ಹತ್ಯೆ

1-wq-wewqe

T20 World Cup; ಪಪುವಾ ನ್ಯೂ ಗಿನಿಯ ವಿರುದ್ಧ ವಿಂಡೀಸ್‌ ಗೆ 5 ವಿಕೆಟ್ ಗಳ ಜಯ

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪೇಟಿಎಂ ಮೂಲಕ 2000 ರೂ ಲಂಚ ಪಡೆದ ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ

Davanagere; ಪೇಟಿಎಂ ಮೂಲಕ 2000 ರೂ ಲಂಚ ಪಡೆದ ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ

police

LIC ಹೌಸಿಂಗ್ ಫೈನಾನ್ಸ್ ವ್ಯವಸ್ಥಾಪಕರ ಕೊಲೆ ಯತ್ನ:ಇಬ್ಬರ ಬಂಧನ

1-sadsda

Minister ಎಸ್.ಎಸ್. ಮಲ್ಲಿಕಾರ್ಜುನ್ ಅವರು ಆಸ್ಪತ್ರೆಗೆ ದಾಖಲಾಗಿಲ್ಲ: ಡಾ. ಪ್ರಭಾ

film-chamber

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪರ್ಯಾಯವಾಗಿ ಕನ್ನಡ ಫಿಲಂ ಚೇಂಬರ್ ರಚನೆ

Parameshwar

Channagiri ಠಾಣೆ ಧ್ವಂಸ, ಆದಿಲ್ ಸಾವಿನ ಪ್ರಕರಣಗಳ ಹೆಚ್ಚಿನ ತನಿಖೆ: ಡಾ| ಜಿ. ಪರಮೇಶ್ವರ್

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

1-asdasdas

Tamil actor ಕರುಣಾಸ್‌ ಬಳಿ 40 ಬುಲೆಟ್‌ಗಳು ಪತ್ತೆ!

mob

WhatsApp ನಲ್ಲಿ ಶೀಘ್ರ ಚಾಟ್‌ ಫಿಲ್ಟರ್‌ ಅಪ್‌ಡೇಟ್‌?

Vimana 2

Again ವಿಮಾನಕ್ಕೆ ಬಾಂಬ್‌ ಬೆದರಿಕೆ: ವಾರದಲ್ಲಿ 4ನೇ ಘಟನೆ

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.