1249.60 ಲಕ್ಷ ರೂ. ಉಳಿತಾಯ ಬಜೆಟ್‌


Team Udayavani, Apr 17, 2021, 6:43 PM IST

vcbfgds

ದಾವಣಗೆರೆ: ಮಹಾನಗರ ಪಾಲಿಕೆಯ 2021-22ನೇ ಸಾಲಿಗೆ 1249.60 ಲಕ್ಷ ರೂಪಾಯಿಯ ಉಳಿತಾಯ ಬಜೆಟ್‌ ನ್ನು ಮೇಯರ್‌ ಎಸ್‌.ಟಿ. ವೀರೇಶ್‌ ಮಂಡಿಸಿದರು.

ಶುಕ್ರವಾರ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಬಜೆಟ್‌ ಸಭೆಯಲ್ಲಿ 45 ನಿಮಿಷಗಳ ಕಾಲ, 39 ಕಾರ್ಯಕ್ರಮಗಳ ಆಯವ್ಯಯ ಪತ್ರ ಮಂಡಿಸಿ, ಸಭೆಯ ಅನುಮೋದನೆ ಕೋರಿದರು.

ಸಾಕಷ್ಟು ಚರ್ಚೆ ನಂತರ ಸಭೆ ಪ್ರಸಕ್ತ ಸಾಲಿನ ಬಜೆಟ್‌ಗೆ ಅನುಮೋದನೆ ನೀಡಿತು. 2021-22ನೇ ಸಾಲಿನಲ್ಲಿ ರಾಜ್ಯ ಹಣಕಾಸು ಆಯೋಗದ ಮುಕ್ತ ನಿಧಿಯಿಂದ ರಾಜ್ಯ ಸರ್ಕಾರ 672 ಲಕ್ಷ ಹಂಚಿಕೆ ಮಾಡಿದೆ. ಪ್ರಸಕ್ತ ಸಾಲಿನಲ್ಲಿ ಒಟ್ಟು 2476 ಲಕ್ಷ ವಿದ್ಯುತ್‌ ಅನುದಾನ ಹಂಚಿಕೆ ಮಾಡಲಾಗಿದೆ. ನಗರಪಾಲಿಕೆಯ ಕಾಯಂ, ನೇರ ಪಾವತಿ, ಗುತ್ತಿಗೆ ಆಧಾರಿತ ನೌಕರರ ವೇತನಕ್ಕಾಗಿ 3796 ಲಕ್ಷ ನೀಡಲಾಗಿದೆ. 15ನೇ ಕೇಂದ್ರ ಹಣಕಾಸು ಆಯೋಗದಿಂದ 2579 ಲಕ್ಷ ರೂ. ಅನುದಾನ ನಿಗದಿಪಡಿಸಲಾಗಿದೆ. ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ಈಗಾಗಲೇ 2500 ಲಕ್ಷ ಮೊದಲ ಕಂತಿನ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ನಗರ ವ್ಯಾಪ್ತಿಯಲ್ಲಿನ ಕಟ್ಟಡ, ಖಾಲಿ ನಿವೇಶನಗಳ ಮೇಲೆ ವಿಧಿಸಲಾಗುವ ತೆರಿಗೆಯಿಂದ 2200 ಲಕ್ಷ, ವಾಣಿಜ್ಯ ಮಳಿಗೆಗಳಿಂದ 55 ಲಕ್ಷ, ನೀರಿನ ಕಂದಾಯದಿಂದ 600 ಲಕ್ಷ, ನೀರು ಸರಬರಾಜು ಸಂಪರ್ಕ ಶುಲ್ಕದ ರೂಪದಲ್ಲಿ 25 ಲಕ್ಷ, ಒಳಚರಂಡಿ ಸಂಪರ್ಕ ಬಳಕೆದಾರರ ಶುಲ್ಕದ ರೂಪದಲ್ಲಿ 75 ಲಕ್ಷ, ಹೊಸ ಸಂಪರ್ಕಗಳಿಂದ 25 ಲಕ್ಷ, ಸಂತೆ, ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರಿಂದ 50 ಲಕ್ಷ ಸುಂಕ, ಘನ ತ್ಯಾಜ್ಯ ನಿರ್ವಹಣೆ ಬಳಕೆದಾರರಿಂದ 35 ಲಕ್ಷ, ಕಟ್ಟಡ ಪರವಾನಿಗೆಯಿಂದ 100 ಲಕ್ಷ ಶುಲ್ಕ, ಉದ್ದಿಮೆ ಪರವಾನಿಗೆಯಿಂದ 80 ಲಕ್ಷ ಒಳಗೊಂಡಂತೆ ಒಟ್ಟಾರೆಯಾಗಿ ನಗರಪಾಲಿಕೆಯ ಸ್ವಂತ ಮೂಲಗಳಿಂದ 3991.85 ಲಕ್ಷ ಅನುದಾನ ನಿರೀಕ್ಷೆ ಮಾಡಲಾಗಿದೆ ಎಂದು ತಿಳಿಸಿದರು.

ದೈನಂದಿನ ಆಡಳಿತ ನಿರ್ವಹಣಾ ವೆಚ್ಚವಾಗಿ 361.75 ಲಕ್ಷ, ಮಾನವ ಸಂಪನ್ಮೂಲ ವೆಚ್ಚವಾಗಿ 3784.50 ಲಕ್ಷ, ಮೂಲಭೂತ ಸೌಕರ್ಯ ಆಸ್ತಿಗಳ ನಿರ್ವಹಣೆ ಮತ್ತು ದುರಸ್ತಿಗೆ 750 ಲಕ್ಷ, ಹೊರ ಗುತ್ತಿಗೆಗಾಗಿ 685 ಲಕ್ಷ, ಉಗ್ರಾಣ ಸಾಮಗ್ರಿ ಖರೀದಿಗೆ 185 ಲಕ್ಷ, ಇಂಧನ ವೆಚRಕ್ಕಾಗಿ 3380 ಲಕ್ಷ ಅಂದಾಜು ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಒಟ್ಟಾರೆಯಾಗಿ 2021-2ನೇ ಸಾಲಿನ ಬಜೆಟ್‌ ಆರಂಭಿಕ ಶಿಲ್ಕು 8414.50 ಲಕ್ಷ, 12710.85 ಲಕ್ಷ ರಾಜಸ್ವ ಸ್ವೀಕೃತಿ, 9970 ಲಕ್ಷ ಬಂಡವಾಳ ಸ್ವೀಕೃತಿ, 12234 ಲಕ್ಷ ಅಸಾಮಾನ್ಯ ಸ್ವೀಕೃತಿ ಒಳಗೊಂಡಂತೆ ಒಟ್ಟು 43329.35 ಲಕ್ಷ ಸ್ವೀಕೃತಿ ಹೊಂದಿದೆ.

ಅಂತೆಯೇ 11431.25 ಲಕ್ಷ ರಾಜಸ್ವ ಪಾವತಿ, 14643 ಲಕ್ಷ ಬಂಡವಾಳ ಪಾವತಿ, 16005 ಲಕ್ಷ ಅಸಾಮಾನ್ಯ ಪಾವತಿ ಒಳಗೊಂಡಂತೆ ಒಟ್ಟಾರೆ 42079.75 ಲಕ್ಷ ಪಾವತಿ ಹೊಂದಿದೆ. ಒಟ್ಟು 43329.35 ಲಕ್ಷ ಸ್ವೀಕೃತಿಯಲ್ಲಿ 42079.75 ಪಾವತಿ ಮಾಡಿದರೆ 1249.60 ಲಕ್ಷ ಉಳಿತಾಯ ಆಗುತ್ತದೆ ಎಂದು ವೀರೇಶ್‌ ಮಾಹಿತಿ ನೀಡಿದರು. ಬಿಜೆಪಿ ಸದಸ್ಯರು ಬಜೆಟ್‌ನ್ನು ಸ್ವಾಗತಿಸಿದರು. ಕಾಂಗ್ರೆಸ್‌ ಸದಸ್ಯರು ಕೆಲವಾರು ಸಲಹೆ ನೀಡಿದರು.

ಸಾಕಷ್ಟು ಚರ್ಚೆಯ ನಂತರ ಸಭೆ ಪ್ರಸಕ್ತ ಸಾಲಿನ ಆಯವ್ಯಯಕ್ಕೆ ಅನುಮೋದನೆ ನೀಡಿತು. ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌, ಉಪ ಮೇಯರ್‌ ಶಿಲ್ಪ ಜಯಪ್ರಕಾಶ್‌, ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಇದ್ದರು.

 

 

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.