ಗಣಿತ ಪರೀಕ್ಷೆಗೆ 20,804 ವಿದ್ಯಾರ್ಥಿಗಳು ಹಾಜರ್
Team Udayavani, Jun 28, 2020, 9:33 AM IST
ದಾವಣಗೆರೆ: ಜಿಲ್ಲೆಯ 93 ಪರೀಕ್ಷಾ ಕೇಂದ್ರಗಳಲ್ಲಿ ಶನಿವಾರ ನಡೆದ ಎಸ್ಸೆಸ್ಸೆಲ್ಸಿ ಗಣಿತ ವಿಷಯದ ಪರೀಕ್ಷೆಗೆ 20,804 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ಒಟ್ಟು 21,991 ನೋಂದಾಯಿತ ವಿದ್ಯಾರ್ಥಿಗಳಲ್ಲಿ 20,804 ವಿದ್ಯಾರ್ಥಿಗಳು ಹಾಜರಾಗಿದ್ದರು. 1,247 ವಿದ್ಯಾರ್ಥಿಗಳು ಗೈರಾಗಿದ್ದರು. ಪರೀಕ್ಷಾ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ವರದಿಯಾಗಿಲ್ಲ. ಚನ್ನಗಿರಿಯಲ್ಲಿ 3,974 ವಿದ್ಯಾರ್ಥಿಗಳಲ್ಲಿ 3,719, ದಾವಣಗೆರೆ ಉತ್ತರದಲ್ಲಿ 3,341 ವಿದ್ಯಾರ್ಥಿಗಳಲ್ಲಿ 3,242, ದಾವಣಗೆರೆ ದಕ್ಷಿಣದಲ್ಲಿ 6,234 ವಿದ್ಯಾರ್ಥಿಗಳಲ್ಲಿ 5,299, ಹರಿಹರದಲ್ಲಿ 3,22 ವಿದ್ಯಾರ್ಥಿಗಳಲ್ಲಿ 3,059, ಜಗಳೂರಿನಲ್ಲಿ 2,312 ವಿದ್ಯಾರ್ಥಿಗಳಲ್ಲಿ 2,206 ವಿದ್ಯಾರ್ಥಿಗಳು ಹಾಜರಾಗಿದ್ದರು. ಹೊನ್ನಾಳಿ ತಾಲೂಕಿನಲ್ಲಿ ಯಾವೊಬ್ಬ ವಿದ್ಯಾರ್ಥಿಯೂ ಗೈರಾಗಿಲ್ಲ. ನೋಂದಣಿಯಾದ ಎಲ್ಲಾ 2,908 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಜಿಲ್ಲೆಯ ವಿವಿಧ ಕಂಟೇನ್ಮೆಂಟ್ ಝೋನ್ನ 96 ವಿದ್ಯಾರ್ಥಿಗಳಲ್ಲಿ 80 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಚನ್ನಗಿರಿಯಲ್ಲಿ 7, ದಾವಣಗೆರೆ ಉತ್ತರದಲ್ಲಿ 21, ದಾವಣಗೆರೆ ದಕ್ಷಿಣದಲ್ಲಿ 23, ಹರಿಹರದಲ್ಲಿ 28, ಹೊನ್ನಾಳಿಯಲ್ಲಿ ಒಬ್ಬ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಿದ್ದರು. ಅನಾರೋಗ್ಯದ ಕಾರಣದಿಂದ ದಾವಣಗೆರೆ ದಕ್ಷಿಣ ವಲಯದಲ್ಲಿ ಓರ್ವ ವಿದ್ಯಾರ್ಥಿ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದರು. ಸರ್ಕಾರಿ ಮತ್ತು ಖಾಸಗಿ ವಸತಿ ನಿಲಯಗಳಲ್ಲಿನ 167 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ 86 ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. 375 ವಲಸೆ ವಿದ್ಯಾರ್ಥಿಗಳಲ್ಲಿ 373 ವಿದ್ಯಾರ್ಥಿಗಳು ಹಾಜರಾಗಿದ್ದರೆ, ಇಬ್ಬರು ಗೈರು ಹಾಜರಾಗಿದ್ದರು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ