ಭತ್ತ ಬೆಳೆ ಹಾನಿಗೆ 25 ಸಾವಿರ ರೂ. ಪರಿಹಾರ ನೀಡಲು ಆಗ್ರಹ
Team Udayavani, May 31, 2020, 7:38 AM IST
ದಾವಣಗೆರೆ: ಮೆಕ್ಕೆಜೋಳ ಬೆಳೆಗಾರರ ಮಾದರಿಯಲ್ಲೇ ಭತ್ತ ಬೆಳೆದಿರುವ ರೈತರಿಗೂ ಸಹ 5 ಸಾವಿರ ರೂ. ಬೆಳೆ ಹಾನಿ ಪರಿಹಾರ ಘೋಷಿಸಲು ಒತ್ತಾಯಿಸಿ ಶನಿವಾರ ರೈತಸಂಘ ಮತ್ತು ಹಸಿರು ಸೇನೆ(ಹುಚ್ಚವ್ವನಹಳ್ಳಿ ಮಂಜುನಾಥ ಬಣ) ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಪತ್ರ ರವಾನೆ ಮಾಡಿದ್ದಾರೆ.
ಕೋವಿಡ್, ಲಾಕ್ಡೌನ್ ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೆಕ್ಕೆಜೋಳ ಬೆಳೆದವರಿಗೆ 5 ಸಾವಿರ ಬೆಳೆ ಹಾನಿ ಪರಿಹಾರ ಘೋಷಿಸಿದೆ. ಆದರೆ, ಭತ್ತ ಬೆಳೆದಂತಹವರನ್ನೇ ಮರೆತಿದೆ. ಮೆಕ್ಕೆಜೋಳ ಬೆಳೆದವರು,
ಭತ್ತ ಬೆಳೆದವರು ಎಂಬ ತಾರತಮ್ಯಮಾಡದೆ ಭತ್ತ ಬೆಳೆದವರಿಗೂ ಸಹ 5 ಸಾವಿರ ಬೆಳೆ ಹಾನಿಪರಿಹಾರ ಘೋಷಿಸಬೇಕು ಎಂದು ಕಾರ್ಯಕರ್ತರು ಪತ್ರ ಚಳವಳಿ ನಡೆಸಿದರು. ರೈತರು 1 ಎಕರೆಗೆ ಮೆಕ್ಕೆಜೋಳ ಬೆಳೆಯಲು 15 ಸಾವಿರ ರೂ. ವೆಚ್ಚ ತಗಲುತ್ತದೆ. ಹಾಗಾಗಿ ಎಲ್ಲಾ ರೈತರಿಗೆ 15 ಸಾವಿರ, ಭತ್ತ ಬೆಳೆದವರಿಗೆ 25 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಳ್ಳಿ ಮಂಜುನಾಥ್, ಹಸಿರು ಸೇನೆ ಅಧ್ಯಕ್ಷ ಆಲೂರು ಪರಶುರಾಮ್, ಇತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ