ದಿನಕ್ಕೆ 3 ತಾಸು ಅಘೋಷಿತ ಲೋಡ್‌ ಶೆಡ್ಡಿಂಗ್‌


Team Udayavani, Nov 9, 2017, 3:00 PM IST

09-4.jpg

ದಾವಣಗೆರೆ: ಕಲ್ಲಿದ್ದಲು ಕೊರತೆಯಿಂದಾಗಿ ಇದೀಗ ರಾಜ್ಯದಲ್ಲಿ ವಿದ್ಯುತ್‌ ಸಮಸ್ಯೆ ತಲೆದೋರಿದ್ದು, ಪರಿಸ್ಥಿತಿ ನಿಭಾಯಿಸಲು ಕೆಪಿಟಿಸಿಎಲ್‌ ಅಘೋಷಿತ ಲೋಡ್‌ ಶೆಡ್ಡಿಂಗ್‌ ಜಾರಿ ಮಾಡಿದೆ.

ಕಲ್ಲಿದ್ದಲು ವಿದ್ಯುತ್‌ ಉತ್ಪಾದನಾ ಘಟಕಗಳಿಗೆ ಕಲ್ಲಿದ್ದಲು ಪೂರೈಕೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ವಿದ್ಯುತ್‌ ಉತ್ಪಾದನಾ ಪ್ರಮಾಣ ತೀರಾ ಕಡಿಮೆಯಾಗಿರುವುದು ಸಮಸ್ಯೆಗೆ ಕಾರಣವಾಗಿದೆ. ಪ್ರತಿದಿನ ರಾಜ್ಯಕ್ಕೆ ಕನಿಷ್ಠ 6000 ಮೆಗಾ ವ್ಯಾಟ್‌, ಗರಿಷ್ಠ 9000 ಮೆಗಾವ್ಯಾಟ್‌ ವಿದ್ಯುತ್‌ನ ಅವಶ್ಯಕತೆ ಇದೆ. ಅಂದರೆ ವಿದ್ಯುತ್‌ ಅವಲಂಬನೆ ಅತಿ ಕಡಿಮೆ ಇರುವ ಮಧ್ಯಾಹ್ನ 2ರಿಂದ 4 ಗಂಟೆವರೆಗೆ 6000 ಮೆ.ವ್ಯಾ., ಅತಿ ಹೆಚ್ಚಿರುವ ಸಂಜೆ 6 ಗಂಟೆಯಿಂದ ಮಧ್ಯರಾತ್ರಿಯವರೆಗೆ 9000 ಮೆ.ವ್ಯಾ. ಬೇಕಿದೆ. ಆದರೆ, ಈಗ ಉತ್ಪಾದನೆಯಾಗುತ್ತಿರುವ ಪ್ರಮಾಣ ಶೇ.30ರಷ್ಟು ಕುಸಿತ ಕಂಡಿದೆ. ಜಲ ವಿದ್ಯುತ್‌ ಉತ್ಪಾದಕಾ ಘಟಕಗಳಲ್ಲಿ ಸ್ವಾಭಾವಿಕವಾಗಿ ಕ್ರಮೇಣ ಉತ್ಪಾದನಾ ಪ್ರಮಾಣ ಇಳಿಕೆ ಆಗುತ್ತದೆ. ಇನ್ನೂ ಚಳಿಗಾಲದ ಎಫೆಕ್ಟ್ನಿಂದ ಸೋಲಾರ್‌ ಉತ್ಪಾದನೆ ಸಹ ಕಳೆದ ಕೆಲ ದಿನಗಳಿಂದ ತೀರಾ ಇಳಿಕೆಯಾಗಿದೆ. ಪವನ ವಿದ್ಯುತ್‌ ಉತ್ಪಾದನೆ ನಿರೀಕ್ಷೆಗೆ ತಕ್ಕಂತೆ ಆಗುತ್ತಿಲ್ಲ.

ಪ್ರಮುಖವಾಗಿ ಶಾಖೋತ್ಪನ್ನ ವಿದ್ಯುತ್‌ ಉತ್ಪಾದನೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ರಾಯಚೂರಿನ ಆರ್‌ಟಿಪಿಎಸ್‌, ಯರಮರಾಸ್‌ ಶಾಖೋತ್ಪನ್ನ ಉತ್ಪಾದನಾ ಘಟಕ (ವೈಟಿಪಿಎಸ್‌) ಬಳ್ಳಾರಿಯ ಬಿಟಿಪಿಎಸ್‌, ಉಡುಪಿಯ ಯುಪಿಸಿಎಲ್‌ಗ‌ಳಲ್ಲಿ ಇಂಧನದ ಕೊರತೆ ಉಂಟಾಗಿ ಉತ್ಪಾದನಾ ಪ್ರಮಾಣ ಗರಿಷ್ಠ ಇಳಿಕೆ ಕಂಡಿದೆ. ರಾಯಚೂರಿನ ಆರ್‌ಟಿಪಿಎಸ್‌ನ 8 ಘಟಕಗಳಿಂದ 
ಒಟ್ಟು 1720 ಮೆ.ವ್ಯಾ. (ದಿನಕ್ಕೆ 216 ಮೆಗಾ ಯುನಿಟ್‌) ಉತ್ಪಾದಿಸಬಹುದು. ಆದರೆ, ಹಾಲಿ ಒಂದು ಘಟಕ ಸ್ಥಗಿತಗೊಂಡಿದ್ದು ಉಳಿದ 7 ಘಟಕಗಳಿಂದ ದಿನಪೂರ್ತಿ ಉತ್ಪಾದನೆಯಾಗಿರುವ ವಿದ್ಯುತ್‌ ಪ್ರಮಾಣ 23.8 ಮೆಗಾ ಯುನಿಟ್‌ ಮಾತ್ರ. ಬಳ್ಳಾರಿಯ ಬಿಟಿಪಿಎಸ್‌ನ 3 ಘಟಕಗಳಿಂದ 1700 ಮೆಗಾ ವ್ಯಾಟ್‌ನಂತೆ ದಿನಕ್ಕೆ 40.8 ಮೆಗಾ ಯುನಿಟ್‌ ವಿದ್ಯುತ್‌ ಉತ್ಪಾದಿಸುವ ಶಕ್ತಿ ಇದೆ. ಆದರೆ, ಈಗ ಬಿಟಿಪಿಎಸ್‌ ದಿನಕ್ಕೆ 10.34 ಮೆಗಾ ಯುನಿಟ್‌ ವಿದ್ಯುತ್‌ ಮಾತ್ರ ಉತ್ಪಾದಿಸುತ್ತಿದೆ. ಉಡುಪಿಯ ಪವರ್‌ ಕಾರ್ಪೋರೇಷನ್‌ನಿಂದಲೂ ಸಹ ಇದೀಗ ಉತ್ಪಾದನಾ ಪ್ರಮಾಣ ಇಳಿಕೆ ಆಗಿದೆ. 1200 ಮೆ.ವ್ಯಾ. ಉತ್ಪಾದನಾ ಸಾಮರ್ಥ್ಯ ಹೊಂದಿರುವ ಆ ಘಟಕ 28.8 ಮೆಗಾ ಯುನಿಟ್‌ ವಿದ್ಯುತ್‌ ಪೂರೈಸಬಲ್ಲದು. ಆದರೆ, ಹಾಲಿ 11.65 ಮೆಗಾ ಯುನಿಟ್‌ ಮಾತ್ರ ಉತ್ಪಾದಿಸುತ್ತಿದೆ. ಇದಲ್ಲದೆ ಜಲ ವಿದ್ಯುತ್‌ ಉತ್ಪಾದನೆ ಪ್ರಮಾಣ ಸಹ ಇಳಿಕೆ ಕಂಡಿದೆ.

ಇದೇ ಕಾರಣಕ್ಕೆ ಎಸ್ಕಾಂಗಳ ಮೇಲೆ ಕೆಪಿಟಿಸಿಎಲ್‌ ಅಘೋಷಿತ ಲೋಡ್‌ ಶೆಡ್ಡಿಂಗ್‌ ಮಾಡುವಂತೆ ಒತ್ತಡ ಹೇರಿದೆ. ಪ್ರಮುಖ ಅವಧಿಯಲ್ಲಿ ಕನಿಷ್ಠ 2 ತಾಸು ವಿದ್ಯುತ್‌ ಪೂರೈಕೆ ಸ್ಥಗಿತಗೊಳಿಸಲು ಸೂಚಿಸಿದೆ. ಬೆಳಗ್ಗೆ 6.30ರಿಂದ 8, 8ರಿಂದ ಮದ್ಯಾಹ್ನ 2 ಗಂಟೆಯವರೆಗೆ, ಸಂಜೆ 4ರಿಂದ 6, 6ರಿಂದ 9 ಹಾಗೂ ರಾತ್ರಿ 9 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್‌ ಸ್ಥಗಿತಗೊಳಿಸಿ, ಕೊರತೆ ನಿಭಾಯಿಸುವಂತೆ ಕೆಪಿಟಿಸಿಎಲ್‌ ಅಧಿಕಾರಿಗಳು ಎಸ್ಕಾಂಗಳಿಗೆ ಸೂಚನೆ ನೀಡುತ್ತಿವೆ. ಚಳಿಗಾಲದಕ್ಕೆ ಕಾಲಿಟ್ಟಿರುವ ಈ ದಿನಗಳಲ್ಲೇ ವಿದ್ಯುತ್‌ ಬರ ಕಾಡಲು ಆರಂಭವಾಗಿರುವುದನ್ನು ನೋಡಿದರೆ ಬೇಸಿಗೆ
ಕಳೆಯುವುದು ಹೇಗೆ ಎಂಬ ಲೆಕ್ಕಾಚಾರವನ್ನ ಜನರು ಈಗಲೇ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.