47.62 ಕೋಟಿ ರೂ. ಕ್ರಿಯಾಯೋಜನೆಗೆ ಅಸ್ತು


Team Udayavani, Jun 18, 2019, 3:08 PM IST

dg-tdy-3…

ದಾವಣಗೆರೆ: ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ನಡೆಯಿತು.

ದಾವಣಗೆರೆ: 2019-20 ನೇ ಸಾಲಿನ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು (ಎನ್‌ಆರ್‌ಡಿಡಬ್ಲ್ಯುಪಿ) ಕಾರ್ಯಕ್ರಮದ 4762.31 ಲಕ್ಷ ರೂ. ಕ್ರಿಯಾಯೋಜನೆಗೆ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಅನುಮೋದನೆ ನೀಡಿದೆ.

ಸೋಮವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಶೈಲಜಾ ಬಸವರಾಜ್‌ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ಕ್ರಿಯಾಯೋಜನೆ ಕುರಿತಂತೆ ವಿಸ್ತೃತವಾಗಿ ಚರ್ಚಿಸಿದ ನಂತರ ಸರ್ವಾನುಮತದ ಅನುಮೋದನೆ ನೀಡಿತು.

ಸಭೆ ಪ್ರಾರಂಭದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗ ಕಾರ್ಯಪಾಲಕ ಅಭಿಯಂತರ ರಾಜು , 2019-20 ಸಾಲಿನ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಕಾರ್ಯಕ್ರಮದಡಿ ತಯಾರಿಸಲಾದ ಕ್ರಿಯಾಯೋಜನೆ ಮಂಡಿಸುತ್ತಾ, ಕ್ರಿಯಾ ಯೋಜನೆಯಲ್ಲಿ ಮುಂದುವರೆದ(ಸ್ಪಿಲ್ ಓವರ್‌) ಹಾಗೂ ಪ್ರಸಕ್ತ ಅವಶ್ಯಕವಾದ ಎಲ್ಲಾ ಕಾಮಗಾರಿಗಳನ್ನು ಸೇರಿಸಲಾಗಿದೆ. ಎಲ್ಲಾ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಸಭೆ ನಡೆಸಿ ಅಗತ್ಯ ಕಂಡು ಬಂದ ಯೋಜನೆಗಳನ್ನು ಕ್ರಿಯಾ ಯೋಜನೆಯಲ್ಲಿ ಸೇರ್ಪಡೆಗೊಳಿಸಲಾಗಿದೆ. ಎಲ್ಲಾ ಕಾಮಗಾರಿಗಳನ್ನು ಜೂನ್‌ ಅಂತ್ಯದೊಳಗೆ ಪೂರ್ಣಗೊಳಿಸಲು ಗುರಿ ನೀಡಲಾಗಿದೆ ಎಂದರು.

ಬರಗಾಲದಲ್ಲಿ ಸತತವಾಗಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುತ್ತಿದ್ದ ಜನವಸತಿಗಳಿಗೆ ಸಮರ್ಪಕ ನೀರಿನ ಮೂಲ ಹಾಗೂ ಆ ಮೂಲದಿಂದ ಈ ಕಾರ್ಯಕ್ರಮಡಿ ಸಂಪರ್ಕ ಕಲ್ಪಿಸಲಾಗುವುದು. ಭಾಗಶಃ ಸಮಸ್ಯಾತ್ಮಕ ಜನವಸತಿಗಳಿಗೆ ನೀರಿನ ಮೂಲ ಹಾಗೂ ಆ ಮೂಲದಿಂದ ಸಂಪರ್ಕ ಒ‌ಗಿಸುವುದು, ಬಹುಗ್ರಾಮ ಯೋಜನೆಗಳಿಗೆ ಅವಶ್ಯಕತೆ ಇದ್ದರೆ ಐಆರ್‌ ನ ನಿರ್ಮಾಣ ಅಥವಾ ಐಆರ್‌ ಇದ್ದರೆ ಅದರ ಸಾಮರ್ಥ್ಯ ಹೆಚ್ಚಿಸುವುದು. ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಬಹುಗ್ರಾಮ ಯೋಜನೆಗಳಲ್ಲಿ ಜನವಸತಿಗಳಲ್ಲಿ ಗೃಹ ಸಂಪರ್ಕ ಕಲ್ಪಿಸುವುದಕ್ಕೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಜನವಸತಿಗೆ ಅವಶ್ಯಕವಿರುವ ನೀರು ಸರಬರಾಜಿನ ಪ್ರಮಾಣ, ಮೂಲಭೂತ ಸೌಕರ್ಯ, ಜಿಯಾಜಲಿಸ್ಟ್‌ ಮೂಲಕ ಜಲಮೂಲ ಗುರುತಿಸುವುದು, ವಿದ್ಯುತ್‌ ಸಂಪರ್ಕ, ಇತರೆ ಪೂರಕ ಸೌಕರ್ಯಗಳ ಬಗ್ಗೆ ಯೋಜನೆ ಪೂರ್ವ ಸಮೀಕ್ಷೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ಪೂರ್ಣಗೊಂಡ ಬಹುಗ್ರಾಮ ಯೋಜನೆಗಳನ್ನು ನಿರ್ವಹಿಸಲಾಗುವುದು, ಪ್ರಗತಿಯಲ್ಲಿರುವ ಬಹುಗ್ರಾಮ ಯೋಜನೆಗಳನ್ನು ಕ್ರಿಯಾಯೋಜನೆಯಲ್ಲಿ ಅಳವಡಿಸಲಾಗಿದೆ. ಹಿಂದಿನ ಸಾಲಿನವರೆಗೆ ಅನುಮೋದನೆಯಾದ ಎಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಜೂನ್‌ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು. 30 ಲಕ್ಷಗಳವರೆಗಿನ ಕಾಮಗಾರಿಗಳಿಗೆ ಪೂರ್ಣ ಅನುದಾನ, 30 ಲಕ್ಷದಿಂದ 100 ಲ್ಷದವರೆಗಿನ ಕಾಮಗಾರಿಗಳಿಗೆ ಅಂದಾಜಿನ ಶೇ.75 ರಷ್ಟು ಹಾಗೂ 100 ಲಕ್ಷ ಮೀರಿದ ಕಾಮಗಾರಿಗಳಿಗೆ ಅಂದಾಜಿನ ಶೇ.60ರಷ್ಟು ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

ಜಗಳೂರು ಶಾಸಕ ಎಸ್‌.ವಿ. ರಾಮಚಂದ್ರ ಮಾತನಾಡಿ, ಜಗಳೂರು ತಾಲೂಕಿನಲ್ಲಿ ತೀವ್ರ ಬರಗಾಲವಿದೆ. ಮುಂದುವರೆದ ಕಾಮಗಾರಿಗೆ ಹೆಚ್ಚು ಅನುದಾನ ವ್ಯಯಿಸುವುದಕ್ಕಿಂತ ಹೊಸ ಕಾಮಗಾರಿಗೆ ಹೆಚ್ಚು ಅನುದಾನ ಮೀಸಲಿಡಬೇಕು. ಬೋರ್‌ ಕೊರೆಸಿದ ಬಾಕಿ ಇರುವ ಪಾವತಿ ಶೀಘ್ರವಾಗಬೇಕು. 2014-15 ರಲ್ಲಿ ಆದ ಅವಧಿಯಲ್ಲಿನ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಂಜಿನಿಯರ್‌ಗಳ ವಿರುದ್ಧ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಕಾರ್ಯಪಾಲಕ ಅಭಿಯಂತರರು, ಬಾಕಿ ಪಾವತಿ ಬಗ್ಗೆ ಪಿಡಿಒಗಳಿಂದ ಮಾಹಿತಿ ಕೇಳಲಾಗಿದೆ ಎಂದರು. ಅಧ್ಯಕ್ಷರು ಹಾಗೂ ಸಿಇಓ ಬಾಕಿ ಇರುವ ಬಗ್ಗೆ ಮಾಹಿತಿ ನೀಡಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಸಕ ಎಸ್‌.ಎ.ರವೀಂದ್ರನಾಥ ಮಾತನಾಡಿ, ಮುಂದುವರೆದ ಕಾಮಗಾರಿಗಳಡಿ ಕಾಮಗಾರಿ ಯಶಸ್ವಿಯಾಗದಿದ್ದರೂ ಮಾಡಿದ್ದ ಕೆಲಸಕ್ಕೆ ಹಣ ಪಾವತಿಸಲೇಬೇಕು. ಈ ಬಗ್ಗೆ ಆಗ್ಗಿಂದಾಗ್ಗೆ ಕ್ರಮ ವಹಿಸಬೇಕು. ಗುಡಾಳ್‌ ಹಾಗೂ ಸುತ್ತ ಮುತ್ತ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜಾದ ಹಣವನ್ನು ಸಿಆರ್‌ಎಫ್‌ ಮೂಲಕ ಪಾವತಿಸುವಂತೆ ತಿಳಿಸಿದರು.

ಸಿಇಓ ಮಾತನಾಡಿ, ಹರಿಹರದ ಬಹುಗ್ರಾಮ ಯೋಜನೆಗಳು ಯಶಸ್ವಿಯಾಗಿದ್ದು, ಚನ್ನಗಿರಿಯಲ್ಲಿ ನೀರು ಸರಬರಾಜಿನ ಕುರಿತಾದ ಬಾಕಿ ಇರುವ ಹಣವನ್ನು ಶೀಘ್ರವಾಗಿ ಪಾವತಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.