50 ದಿನ ಪೂರೈಸಿದ ಭದ್ರಾ ಹೋರಾಟ

•ಜಗಳೂರು ತಾಲೂಕು ನೀರಾವರಿಗೆ ಆಗ್ರಹಿಸಿ ತಾಲೂಕು ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ

Team Udayavani, Aug 6, 2019, 11:05 AM IST

dg-tdy-1

ಜಗಳೂರು: ಪಟ್ಟಣದ ತಾಲೂಕು ಕಚೇರಿಯ ಮುಂಭಾಗದಲ್ಲಿ ಶಿರಸ್ತೇದಾರ್‌ಗೆ ಭದ್ರಾ ಮೇಲ್ದಂಡೆ ಹೋರಾಟ ಸಮಿತಿ ವತಿಯಿಂದ ಜಗಳೂರು ತಾಲೂಕು ಸಮಗ್ರ ನೀರಾವರಿಗೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಜಗಳೂರು: ನಿರಂತರವಾಗಿ ಬರಗಾಲ ಅನುಭವಿಸುತ್ತಾ ಬಂದಿರುವ ತಾಲೂಕಿಗೆ ಭದ್ರೆ ನೀರು ಹರಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದಾಗಿ ವಿಳಂಬವಾಗಿದ್ದು, ನಮ್ಮೆಲ್ಲರ ಹೋರಾಟದ ಫಲವಾಗಿ ಸರಕಾರ ತಾಲೂಕಿಗೆ 2.4 ಟಿಎಂಸಿ ನೀರು ಹಂಚಿಕೆ ಮಾಡಿದೆ ಎಂದು ಭದ್ರಾ ಮೇಲ್ದಂಡೆ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ತೋರಣಗಟ್ಟೆ ತಿಪ್ಪೇಸ್ವಾಮಿ ಹೇಳಿದರು.

ಅನಿರ್ದಿಷ್ಟಾವಧಿ ಧರಣಿ ಹೋರಾಟ 50 ದಿನ ಪೂರೈಸಿದ ಹಿನ್ನೆಲೆಯಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿಯವರೆಗೂ ಸೋಮವಾರ ಭಾರತ ವಿದ್ಯಾರ್ಥಿ ಫೆಡರೇಷನ್‌ ಸಹಯೋಗದಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ಹೊರಡಿಸಿ, ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. ತಾಲೂಕಿಗೆ ಸಮಗ್ರ ನೀರಾವರಿ ಕಲ್ಪಿಸುವಂತೆ ಕಳೆದ 10 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದ ಫಲವಾಗಿ ಇತ್ತೀಚೆಗೆ 2.4 ಟಿಎಂಸಿ ನೀರು ಹರಿಸಲು ಸರಕಾರ ಮುಂದಾಗಿದೆ. ಆದರೆ ಕೆಲವರು ಕಾತ್ರಾಳ್‌ ಮಾರ್ಗದ ಮೂಲಕ ನೀರು ಹರಿಸುವಂತೆ ನೀರಾವರಿ ಇಲಾಖೆಯ ಮೇಲೆ ಒತ್ತಡ ಹೇರುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕಾಲುವೆ ಮಾರ್ಗ ಬದಲಾವಣೆ ಮಾಡದೇ ಮೂಲ ಮಾರ್ಗ ಸಂಗೇನಹಳ್ಳಿ ಕೆರೆಯ ಮೂಲಕವೇ ತಾಲೂಕಿನ ಹಳ್ಳಿಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿದರು.

ಸತತ 70 ವರ್ಷಗಳಿಂದ ಮಳೆಯನ್ನೇ ನಂಬಿ ಜೀವನ ನಡೆಸುವ ತಾಲೂಕಿನ ರೈತರಿಗೆ ಭದ್ರೆ ನೀರನ್ನು ಹರಿಸಿ ಬರಪೀಡಿತ ಬಯಲು ಸೀಮೆಯನ್ನು ಹಸಿರುನಾಡನ್ನಾಗಿ ಪರಿವರ್ತನೆ ಮಾಡದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.

ಮುಸ್ಟೂರು ಹುಚ್ಚನಾಗಲಿಂಗ ದಾಸೋಹ ಮಠದ ಶ್ರೀ ರುದ್ರಮುನಿ ಶಿವಚಾರ್ಯ ಸ್ವಾಮಿಗಳು ಮಾತನಾಡಿ, ಪ್ರತಿ ವರ್ಷ ಮಳೆಯ ಕೊರತೆ ಯಿಂದಾಗಿ ಈ ಭಾಗದ ಜನರು ಮಲೆನಾಡು ಸೀಮೆಗಳತ್ತ ಗುಳೆ ಹೋಗುವಂತಾಗಿದೆ. ಈಗಾಗಲೇ ಆಗಸ್ಟ್‌ ಮಾಹೆ ಆರಂಭವಾಗಿದ್ದರೂ ಸಹ ಮಳೆ ಬಾರದೇ ರೈತರು ಆಕಾಶದತ್ತ ಮುಖ ಮಾಡುವಂತಾಗಿದೆ. ಜನ ಜಾನುವಾರು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದ್ದರೂ ಜನಪ್ರತಿನಿಧಿಗಳು ಮಾತ್ರ ತಾಲೂಕಿನ ಸಮಸ್ಯೆಗಳ ಬಗ್ಗೆ ತಲೆ ಕೆಡಿಸಿಕೊಳ್ಳದೇ ತಮ್ಮ ಬೇಳೆ ಬೇಯಿಸಿಕೊಳ್ಳಲು ಓಡಾಡುತ್ತಿದ್ದಾರೆ. ತಾಲೂಕಿನ ಜನರ ಬವಣೆ ನೀಗಿಸುವಲ್ಲಿ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ಜನತೆ ಇನ್ನಾದರೂ ಎಚ್ಚೆತ್ತುಕೊಂಡು ಸಂಘಟನೆಯ ಮೂಲಕ ಸರಕಾರದ ಮೇಲೆ ಒತ್ತಡ ಹೇರಿ ತಾಲೂಕಿಗೆ ಮೂಲ ಮಾರ್ಗದ ಮೂಲಕ ನೀರು ತರಲು ಕೈಜೋಡಿಸಬೇಕು ಎಂದರು.

ಜೆಡಿಎಸ್‌ ಮುಖಂಡ ಕೆ.ಬಿ.ಕಲ್ಲೇರುದ್ರೇಶ್‌ ಮಾತನಾಡಿ ತಾಲೂಕಿಗೆ 2.4 ಟಿಎಂಸಿ ನೀರು ಹರಿದು ಬಂದರೆ ಸುಮಾರು 18 ಸಾವಿರ ಎಕರೆ ಪ್ರದೇಶವನ್ನು ಹನಿ ನೀರಾವರಿ ಮಾಡಿಕೊಳ್ಳಬಹುದಾಗಿದೆ. ತಾಲೂಕಿನ ಎಲ್ಲಾ ಭಾಗದ ಜಮೀನುಗಳು ಸಹ ಹನಿ ನೀರಾವರಿ ಪ್ರದೇಶವಾಗಲಿದ್ದು ಪ್ರತಿಯೊಬ್ಬರೂ ಹೋರಾಟ ಬೆಂಬಲಿಸಬೇಕು ಎಂದರು.

ಭದ್ರಾ ಮೇಲ್ದಂಡೆ ನೀರಾವರಿ ಹೋರಾಟ ಸಮಿತಿ ಸದಸ್ಯರಾದ ಆರ್‌.ಓಬಳೇಶ್‌, ಎಂ.ಬಿ.ಲಿಂಗರಾಜ್‌, ಪ್ರಕಾಶರೆಡ್ಡಿ, ವೀರಸ್ವಾಮಿ, ಮಹಮದ್‌ ಅನ್ವರ್‌, ಮುಖಂಡರಾದ ವಾಲಿಬಾಲ್ ತಿಮ್ಮಾರೆಡ್ಡಿ, ಯಾದವರೆಡ್ಡಿ, ಎಸ್‌.ಕೆ.ರಾಮರೆಡ್ಡಿ, ಪುಟ್ಟಣ್ಣ, ಸಣ್ಣಸೂರಯ್ಯ, ಸತ್ಯಮೂರ್ತಿ, ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಸಿ.ತಿಪ್ಪೇಸ್ವಾಮಿ, ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಜೆ.ಮಹಾಲಿಂಗಪ್ಪ, ತಾಪಂ ಮಾಜಿ ಸದಸ್ಯ ಓಬಣ್ಣ, ಅನಂತ್‌ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.