ಪರಿಶಿಷ್ಟರ ಕಲ್ಯಾಣಾಧಿಕಾರಿ ಕಚೇರಿಯಲ್ಲಿ 70 ಹುದ್ದೆ ಖಾಲಿ!


Team Udayavani, Sep 19, 2020, 7:47 PM IST

ಪರಿಶಿಷ್ಟರ ಕಲ್ಯಾಣಾಧಿಕಾರಿ ಕಚೇರಿಯಲ್ಲಿ 70 ಹುದ್ದೆ ಖಾಲಿ!

ದಾವಣಗೆರೆ: ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಲೆಂದೇ ಇರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಸಿಬ್ಬಂದಿ ಸಮಸ್ಯೆಯಿಂದ ಬಳಲುತ್ತಿದೆ. ಇದರಿಂದ ಪರಿಶಿಷ್ಟ ವರ್ಗದವರಿಗೆ ಸಕಾಲಕ್ಕೆ ಸಮರ್ಪಕ ಸೇವೆ, ಸೌಲಭ್ಯ ನೀಡಲು= ತೊಡಕಾಗಿದೆ.

ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಒಟ್ಟು 94 ಮಂಜೂರಾತಿ ಹುದ್ದೆಗಳಿವೆ. ಆದರೆ ಭರ್ತಿಯಾಗಿರುವುದು ಕೇವಲ 24 ಮಾತ್ರ. ಇನ್ನೂ ಬರೋಬ್ಬರಿ 70 ಹುದ್ದೆಗಳು ಖಾಲಿ ಇವೆ. ಇದರಿಂದಾಗಿ ಹಾಲಿ ಅಧಿಕಾರಿ, ಸಿಬ್ಬಂದಿ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ. ಶೇ.30ಕ್ಕಿಂತ ಕಡಿಮೆ ಇರುವ ಸಿಬ್ಬಂದಿಯನ್ನು ಬಳಸಿಕೊಂಡು ಸರಕಾರದ ಯೋಜನೆ ಅನುಷ್ಠಾನ, ನಿರಂತರ ಕಾರ್ಯಕ್ರಮ ನಿರ್ವಹಣೆ ಕಚೇರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ವಿದ್ಯಾರ್ಥಿ ನಿಲಯಗಳ ನಿರ್ವಹಣೆ ಪ್ರಮುಖವಾಗಿದೆ. ನಿಲಯ ಮೇಲ್ವಿಚಾರಕರ, ಶಿಕ್ಷಕರ ಹಾಗೂ ಅಡುಗೆಯವರ ಕೊರತೆ ಹೆಚ್ಚಿನ ಅನಾನುಕೂಲಕ್ಕೆ ಕಾರಣವಾಗಿವೆ. ಕಚೇರಿಯಲ್ಲಿರುವ ಏಕೈಕ ವಾಹನ ಚಾಲಕ ಹುದ್ದೆ, ರಾತ್ರಿ ಕಾವಲುಗಾರ ಹುದ್ದೆಗಳು ಸಹ ಖಾಲಿ ಇದ್ದು, ವಿದ್ಯಾರ್ಥಿ ನಿಲಯಗಳ ಸಮರ್ಪಕ ನಿರ್ವಹಣೆಗೆ ತೊಡಕಾಗಿದೆ.

94 ಹುದ್ದೆ ಮಂಜೂರು: ಒಬ್ಬರು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ಮೂವರು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ನಾಲ್ವರು ಕಚೇರಿ ಅಧೀಕ್ಷಕರು, ಒಬ್ಬರು ತನಿಖಾ ಸಹಾಯಕರು, ಐವರು ಪ್ರಥಮ ಹಾಗೂ ದ್ವಿತೀಯ ದರ್ಜೆ ಸಹಾಯಕರು, ಒಬ್ಬರು ಬುಡಕಟ್ಟು ಕಲ್ಯಾಣ ವಿಸ್ತರಣಾಧಿಕಾರಿ, 11 ನಿಲಯ ಮೇಲ್ವಿಚಾರಕರು, ಎಂಟು ಶಿಕ್ಷಕರು, 32 ಅಡುಗೆಯವರು, 2 ಅಡುಗೆ ಸಹಾಯಕರು, ಒಬ್ಬ ವಾಹನ ಚಾಲಕ, ಒಬ್ಬ ರಾತ್ರಿ ಕಾವಲುಗಾರ ಹಾಗೂ ನಾಲ್ವರು ಗ್ರೂಪ್‌ ಡಿ ದರ್ಜೆ ಸಿಬ್ಬಂದಿ ಸೇರಿ ಒಟ್ಟು 94 ಮಂಜೂರಾತಿ ಹುದ್ದೆಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹೊಂದಿದೆ.

ಆದರೆ ಪ್ರಸ್ತುತ ಕಚೇರಿಯಲ್ಲಿ ಒಬ್ಬರು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ಇಬ್ಬರು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ನಾಲ್ವರು ಕಚೇರಿ ಅಧೀಕ್ಷಕರು, ಒಬ್ಬ ತನಿಖಾ ಸಹಾಯಕ, ನಾಲ್ವರು ಪ್ರಥಮ ಹಾಗೂ ದ್ವಿತೀಯ ದರ್ಜೆ ಸಹಾಯಕರು, ಓರ್ವ ಬುಡಕಟ್ಟು ಕಲ್ಯಾಣ ವಿಸ್ತರಣಾಧಿಕಾರಿ, ನಾಲ್ವರು ನಿಲಯ ಮೇಲ್ವಿಚಾರಕರು, ಒಬ್ಬರು ಶಿಕ್ಷಕರು, ನಾಲ್ವರು ಅಡುಗೆಯವರು, ಒಬ್ಬರು ಅಡುಗೆ ಸಹಾಯಕರು, ಒಬ್ಬರು ರಾತ್ರಿ ಕಾವಲುಗಾರರು ಸೇರಿ ಕೇವಲ 24 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗಿದೆ.

70 ಹುದ್ದೆ ಖಾಲಿ: ಕಚೇರಿಯಲ್ಲಿ ಒಂದು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹುದ್ದೆ, ಒಂದು ಪ್ರಥಮ ದರ್ಜೆ ಸಹಾಯಕರ ಹುದ್ದೆ, ಏಳು ನಿಲಯ ಮೇಲ್ವಿಚಾರಕರ ಹುದ್ದೆ, ಏಳು ಶಿಕ್ಷಕರ ಹುದ್ದೆ, 28 ಅಡುಗೆಯವರ ಹುದ್ದೆ, 21 ಅಡುಗೆ ಸಹಾಯಕರ ಹುದ್ದೆ, ಒಂದು ವಾಹನ ಚಾಲಕರ ಹುದ್ದೆ, ಒಂದು ರಾತ್ರಿ ಕಾವಲುಗಾರರ ಹುದ್ದೆ, ಮೂರು ಗ್ರೂಪ್‌ ಡಿ ಸಿಬ್ಬಂದಿ ಹುದ್ದೆ ಸೇರಿ ಒಟ್ಟು 70 ಹುದ್ದೆಗಳು ಖಾಲಿ ಇವೆ. ಒಟ್ಟಾರೆ ಪರಿಶಿಷ್ಟ ವರ್ಗಗಳ ಏಳ್ಗೆಗಾಗಿಯೇ ಇರುವ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅಗತ್ಯ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನೇಮಕ ಮಾಡುವ ಮೂಲಕ ಸರಕಾರ ಪರಿಶಿಷ್ಟರಿಗೆ ಸಮರ್ಪಕ ಸೌಲಭ್ಯ ದೊರಕಿಸಲು ಮುಂದಾಗಬೇಕಿದೆ.

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.