ಕನ್ನಡ ಕಾಯಕ ವರ್ಷಕ್ಕೆ 19 ಅಂಶಗಳ ಸೂತ್ರ

ಆಡಳಿತದಲ್ಲಿನ್ನು ಕಾಯಕ ವರ್ಷ ಲಾಂಛನ,ಗುತ್ತಿಗೆ, ಹೊರಗುತ್ತಿಗೆಯಲ್ಲಿ ಕನ್ನಡಿಗರಿಗೆ ಕೆಲಸ ಕಡ್ಡಾಯ

Team Udayavani, Nov 30, 2020, 4:04 PM IST

ಕನ್ನಡ ಕಾಯಕ ವರ್ಷಕ್ಕೆ 19 ಅಂಶಗಳ ಸೂತ್ರ

ದಾವಣಗೆರೆ: ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ನೇಮಕಾತಿಯಲ್ಲಿ ಕಡ್ಡಾಯವಾಗಿಕನ್ನಡಿಗರನ್ನೇ ಒದಗಿಸುವಂತೆ ಮಾನವಸಂಪನ್ಮೂಲ ಸೇವೆ ಒದಗಿಸುವ ಸಂಸ್ಥೆಗಳಿಗೆ ಷರತ್ತುಗಳನ್ನು ವಿಧಿಸಿರುವ ರಾಜ್ಯ ಸರ್ಕಾರ,ಅನುಪಾಲನೆ ಮಾಡಲು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಎಲ್ಲ ಇಲಾಖಾ ಮುಖ್ಯಸ್ಥರಿಗೆ ಸುತ್ತೋಲೆ ಹೊರಡಿಸಿದೆ.

ಪ್ರಸಕ್ತ ನ.1ರಿಂದ ಮುಂದಿನ ಅ.31ರವರೆಗೆ ಒಂದು ವರ್ಷದ ಕಾಲ “ಕನ್ನಡ ಕಾಯಕ ವರ್ಷ’ಆಚರಿಸುತ್ತಿರುವ ರಾಜ್ಯ ಸರ್ಕಾರ, ಕನ್ನಡಭಾಷೆ ಬಳಕೆ ಹಾಗೂ ಕನ್ನಡ ಭಾಷೆ ಉಳಿಸಲು ಕೈಗೊಂಡ 19 ಪ್ರಮುಖ ಅಂಶಗಳನ್ನೊಳಗೊಂಡ ಸುತ್ತೋಲೆಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ಹೊರಡಿಸಿದ್ದಾರೆ.

ಸರ್ಕಾರಿ, ಖಾಸಗಿ ಆಸ್ಪತ್ರೆಗಳು, ನರ್ಸಿಂಗ್‌ ಹೋಂಗಳು, ಅರೆ ವೈದ್ಯಕೀಯ ಸಂಸ್ಥೆಗಳುರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ನೀಡುವ ಎಲ್ಲ ಸೇವೆ ಹಾಗೂ ದಾಖಲೆಗಳು ಕನ್ನಡದಲ್ಲಿಯೇ ಇರಬೇಕು. ಜಿಲ್ಲೆಗಳಲ್ಲಿರುವ ಪ್ರಮುಖ ರಸ್ತೆ,ವೃತ್ತ, ಉದ್ಯಾನವನಗಳಿಗೆ ನಾಡಿನ,ಜಿಲ್ಲೆಯ ಪ್ರಸಿದ್ಧ ಸಾಹಿತಿಗಳು, ಹಿರಿಯ ಹೋರಾಟಗಾರರು ಹಾಗೂ ಸಾಧಕರ ಹೆಸರಿಡಲು ಸರ್ಕಾರ ಸೂಚಿಸಿದೆ.

ಕನ್ನಡ ಉಳಿಸಿ ಬೆಳೆಸುವ ದೃಷ್ಟಿಯಿಂದ ಆಡಳಿತದ ಎಲ್ಲ ವಲಯಗಳಲ್ಲಿ ಕನ್ನಡಪರಆದೇಶಗಳನ್ನು ಸಮರ್ಪಕವಾಗಿ ಕಾರ್ಯಗತಗೊಳಿಸಬೇಕು.ತಂತ್ರಜ್ಞಾನದಲ್ಲಿ ಕನ್ನಡವನ್ನು ಸಮರ್ಪಕವಾಗಿ ಬಳಸಲು ಕಾರ್ಯಕ್ರಮ ರೂಪಿಸಬೇಕು. ಇಲಾಖೆಗಳು ರೂಪಿಸುವ ನೀತಿಗಳ ಕರಡುಗಳನ್ನು ಕನ್ನಡದಲ್ಲಿಯೇ ಸಿದ್ಧಪಡಿಸಬೇಕು. ಅನುಮೋದಿತ ಅಂತಿಮ ನೀತಿಗಳು ಸಹ ಕನ್ನಡದಲ್ಲೇ ಇರಬೇಕು. ತಂತ್ರಜ್ಞಾನ ಆಧಾರಿತ ಆಡಳಿತ ವ್ಯವಸ್ಥೆಯ ಮೂಲಕ ಅರ್ಜಿದಾರರಿಗೆ, ಫಲಾನುಭವಿಗಳಿಗೆ, ಸಾರ್ವಜನಿಕರಿಗೆ ಕಳುಹಿಸುವ ಸಂದೇಶ, ಇಮೇಲ್‌ ಸೇರಿದಂತೆ ಇನ್ನಿತರೆ ಸ್ವೀಕೃತಿ ಸಂದೇಶಗಳು ಕನ್ನಡದಲ್ಲಿ ದೊರೆಯುವಂತೆ ಮಾಡಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಊರ ಹೆಸರು ಕನ್ನಡದಲ್ಲೇ ಇರಲಿ: ರಾಜ್ಯದಲ್ಲಿರುವ ಕೆಲ ನಗರ, ಪಟ್ಟಣಗಳ ಹೆಸರುಗಳನ್ನು ಬದಲಾವಣೆ ಮಾಡಿ ಅಧಿಸೂಚನೆ ಹೊರಡಿಸಲಾಗಿದ್ದು, ಬದಲಾವಣೆ ಆಗಿರುವ ಹೆಸರುಗಳನ್ನೇ ಕಚೇರಿಯನಾಮಫಲಕ ಹಾಗೂ ಕಚೇರಿಯ ಪ್ರಕಟಣೆ ಮತ್ತು ಆದೇಶಗಳಲ್ಲಿ ಸೇರಿದಂತೆ ಎಲ್ಲೆಡೆಕಡ್ಡಾಯವಾಗಿ ಬಳಸಬೇಕು. ಉದಾಹರಣೆಗೆ ಬೆಂಗಳೂರನ್ನು “ಬೆಂಗಳೂರು’ ಎಂದು ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ಬಳಸಬೇಕು. ಸರ್ಕಾರದ ವತಿಯಿಂದ ಆಯೋಜಿಸುವದಸರಾ, ಹಂಪಿ, ಕದಂಬ, ಜಿಲ್ಲಾ ಉತ್ಸವಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ರಸ್ತೆ ಮೆರವಣಿಗೆ ಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳಲ್ಲಿ ಕನ್ನಡ ನಾಡು-ನುಡಿ, ನೆಲ-ಜಲ, ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ, ಕನ್ನಡ ಕಲಾವಿದರಿಗೆ ಆದ್ಯತೆ ನೀಡಬೇಕು.

ಸರ್ಕಾರಿ ಮುದ್ರಣಾಲಯ ಹಾಗೂ ಸರ್ಕಾರಿಇಲಾಖೆಗಳು ಮುದ್ರಿಸುವ ತಲೆಬರಹಗಳು, ನಮೂನೆಗಳು, ಪೂರಕ ಸಾಮಗ್ರಿಗಳು, ಪ್ರಕಟಣೆಗಳು, ಜಾಹೀರಾತುಗಳಲ್ಲಿ “ಕನ್ನಡ ಕಾಯಕ ವರ್ಷ’ ಹಾಗೂ ವರ್ಷಾಚರಣೆಯ ಲಾಂಛನ ಬಳಸಬೇಕು. ಸಮಗ್ರ ಕನ್ನಡ ಅನುಷ್ಠಾನ ಹಾಗೂ ಬಳಕೆ ಪ್ರೋತ್ಸಾಹಿಸಲು ಆಯಾ ಇಲಾಖೆಗಳು ಕನ್ನಡಕ್ಕೆ ಸಂಬಂಧಿಸಿದ ಮಹತ್ವದ ಮತ್ತು ವಿವಿಧ ವಿಷಯಗಳ ಪದಕೋಶಸಂಗ್ರಹ ಮಾಡಿ ಡಿಜಿಟಲ್‌ ಮಾದರಿಯಲ್ಲಿ ತಮ್ಮ ಅಧಿಕೃತ ಜಾಲತಾಣಗಳಲ್ಲಿ ಪ್ರಕಟಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಪುಟದಲ್ಲಿ ಕನ್ನಡ ರಾರಾಜಿಸಲಿ: ರಾಜ್ಯ

ಸರ್ಕಾರಕ್ಕೆ ಸಂಬಂಧಿಸಿದ ಎಲ್ಲ ಇಲಾಖೆಗಳ ಜಾಲತಾಣಗಳು ಹಾಗೂ ಸಾಮಾಜಿಕ ತಾಣಗಳ ಪ್ರಧಾನ ಪುಟಗಳನ್ನು ಕನ್ನಡದಲ್ಲಿಯೇ

ರೂಪಿಸಬೇಕು. ಒಳಪುಟಗಳ ಮಾಹಿತಿಗಳೆಲ್ಲವೂ ಕನ್ನಡದಲ್ಲಿಯೇ ಇರಬೇಕು. ನಾಮಫಲಕ, ಹೆದ್ದಾರಿ ಫಲಕ, ರಸ್ತೆ ಮಾರ್ಗಸೂಚಿ ಹಾಗೂ ಮೈಲಿಗಲ್ಲುಗಳಲ್ಲಿ ಕಡ್ಡಾಯವಾಗಿ ಶುದ್ಧ ಕನ್ನಡವನ್ನು ಪ್ರಧಾನವಾಗಿ ಬಳಸಬೇಕು. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಸ್ಥಳೀಯ ಆಡಳಿತಕ್ರಮ ವಹಿಸಬೇಕು. ಕಾನೂನು, ಶಾಸನಗಳು, ವಿಧೇಯಕಗಳು, ಸಚಿವ ಸಂಪುಟದ ಟಿಪ್ಪಣಿಗಳು, ಅಧಿಸೂಚನೆಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಹೊರಡಿಸಬೇಕು. ರಾಜ್ಯದಲ್ಲಿ ಮಾರಾಟವಾಗುವ ಉತ್ಪನ್ನಗಳು, ಪದಾರ್ಥಗಳಮೇಲೆ ಮಾಹಿತಿ, ವಿವರಗಳನ್ನು ಕನ್ನಡದಲ್ಲಿಯೇ ಮುದ್ರಿಸುವಂತೆ ಸೂಚಿಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿದೆ.

ಕನ್ನಡ ಕಾಯಕ ವರ್ಷದಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸರಕಾರದ ಮುಖ್ಯ ಕಾರ್ಯದರ್ಶಿಗಳು ಎಲ್ಲ ಇಲಾಖೆಗಳಿಗೂ ಸುತ್ತೋಲೆ ಹೊರಡಿಸಿದ್ದಾರೆ.ಇದರ ಯಶಸ್ಸಿಗೆ ಎಲ್ಲರ ಸಹಭಾಗಿತ್ವ ಮುಖ್ಯವಾಗಿದೆ. ಇಲಾಖಾಧಿಕಾರಿಗಳು ಯಾವುದೇ ನೆಪ ಹೇಳದೆ ಶೇ.100ಅನುಷ್ಠಾನಗೊಳಿಸಬೇಕು.ಟಿ.ಎಸ್‌.ನಾಗಾಭರಣ, ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.