ನಡೆದಾಡುವ ದೇವರಿಗೆ ಭಾವಪೂರ್ಣ ಶ್ರದ್ಧಾಂಜಲಿ


Team Udayavani, Jan 22, 2019, 6:51 AM IST

dvg-7.jpg

ಹೊನ್ನಾಳಿ: ತ್ರಿವಿಧ ದಾಸೋಹಿ, ನಡೆದಾಡುವ ದೇವರು ಸಿದ್ಧಗಂಗಾ ಮಠದ ಡಾ| ಶಿವಕುಮಾರ ಸ್ವಾಮೀಜಿ ಶಿವೈಕ್ಯರಾದ ಸುದ್ದಿ ತಿಳಿಯುತ್ತಿದ್ದಂತೆ ಪಟ್ಟಣದ ಜಯಚಾಮರಾಜೇಂದ್ರ ವೃತ್ತದಲ್ಲಿ ಸಾರ್ವಜನಿಕರು, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ಶ್ರೀಗಳಿಗೆ ಶ್ರದ್ಧಾಂಜಲಿ ಅರ್ಪಿಸಿದವು ಶ್ರೀಗಳು ಲಿಂಗೈಕ್ಯರಾದ ಸುದ್ದಿ ಹಬ್ಬುತ್ತಿದ್ದಂತೆ ಇಡೀ ಪಟ್ಟಣದಲ್ಲಿ ನೀರವ ಮೌನ ಆವರಿಸಿತು.

ಸಾರ್ವಜನಿಕರು ಸ್ವಾಮಿಜಿಯವರ ಶಿಕ್ಷಣ, ವಸತಿ ಹಾಗೂ ಅನ್ನದಾಸೋಹದ ಕ್ರಾಂತಿಯನ್ನು ಸ್ಮರಿಸಿದರು. ಪ್ರತಿನಿತ್ಯ ಸಿದ್ದಗಂಗಾ ಮಠದಲ್ಲಿ 10 ಸಾವಿರ ವಿದ್ಯಾರ್ಥಿಗಳ ಅನ್ನ ದಾಸೋಹ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಅನ್ನಪೂರ್ಣೇಶ್ವರಿ ಖಾನಾವಳಿಯಲ್ಲಿ ಸೋಮವಾರ ಇಡೀ ದಿನ ಉಚಿತ ಊಟದ ವ್ಯವಸ್ಥೆಯನ್ನು ಖಾನಾವಳಿ ಮಾಲೀಕ ಕಾಶಿನಾಥ್‌ ಮಾಡಿದ್ದರು.
 
ಸಂತಾಪ: ಹಿರೇಕಲ್ಮಠದ ಡಾ| ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಶಾಸಕ ಎಂ.ಪಿ. ರೇಣುಕಾಚಾರ್ಯ, ತಾ.ಪಂ ಅಧ್ಯಕ್ಷೆ ಚಂದ್ರಮ್ಮ, ಜಿ.ಪಂ ಸದಸ್ಯ ಎಂ.ಆರ್‌. ಮಹೇಶ್‌, ತಹಸೀಲ್ದಾರ್‌ ತುಷಾರ್‌ ಬಿ ಹೊಸೂರ, ತಾ.ಪಂ.ಇಒ ಕೆ.ಸಿ. ಮಲ್ಲಿಕಾರ್ಜುನ್‌, ಪತ್ರಕರ್ತರಾದ ಶ್ರೀನಿವಾಸ್‌, ವಿಜಯಾನಂದಸ್ವಾಮಿ, ಎನ್‌.ಕೆ.ಆಂಜನೇಯ, ಎಚ್‌.ಕೆ.ಮಲ್ಲೇಶ್‌, ಮಾಸಡಿ ಅರುಣ್‌ಕುಮಾರ್‌, ಮುಖಂಡರಾದ ಕಾಯಿ ಬಸವರಾಜು, ಪಲ್ಲವಿ ರಾಜು, ಪ್ರಶಾಂತ ಸಂತಾಪ ಸೂಚಿಸಿದ್ದಾರೆ.

ಕಾಯಕ ಯೋಗಿಗೆ ನುಡಿನಮನ 
ಬಸವಾದಿ ಶರಣರ ತತ್ವಗಳನ್ನು ವಾಸ್ತವದಲ್ಲಿ ಅನುಷ್ಠಾನಗೊಳಿಸಿದವರು, ತ್ರಿವಿಧ ದಾಸೋಹ ಮೂರ್ತಿ, ರಾಜ್ಯ ಕಂಡ ಅಪರೂಪದ ಸ್ವಾಮೀಜಿ. ಶ್ರೀಗಳ ಅಗಲಿಕೆಯಿಂದ ಧಾರ್ಮಿಕ ಕ್ಷೇತ್ರಕ್ಕಷ್ಟೇ ಅಲ್ಲ, ಒಟ್ಟಾರೆ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.
ಸಿದ್ಧರಾಮೇಶ್ವರ ಶಿವಾಚಾರ್ಯ ಶ್ರೀ, ವೃಷಭಪುರಿ ಸಂಸ್ಥಾನ, ನಂದಿಗುಡಿ.

ಜಾತಿ, ಮತ, ಪಂಥ, ಧರ್ಮ, ಪ್ರಾಂತ್ಯದ ಎಲ್ಲೆ ಮೀರಿ ತ್ರಿವಿಧ ದಾಸೋಹ ಮಾಡಿದವರು. ನಾಡಿನ ಲಕ್ಷಾಂತರ ಬಡ ಮಕ್ಕಳು ಅವರಿಂದ ಅಕ್ಷರ, ಅನ್ನ, ಆಶ್ರಯ ಪಡೆದು ಬದುಕನ್ನು ಕಟ್ಟಿಕೊಂಡರು. ಒಬ್ಬ ಧರ್ಮಾಧಿಕಾರಿ ಹೇಗಿರಬೇಕೆಂದು ಸಮಾಜಕ್ಕೆ ತೋರಿಸಿಕೊಟ್ಟ ಡಾ| ಶಿವಕುಮಾರ ಶ್ರೀಗಳು ನಿಜ ಅರ್ಥದಲ್ಲಿ ಬಸವಣ್ಣರ ತತ್ವ ಪಾಲಕರಾಗಿದ್ದರು. 
ಫಾ| ಅಂತೋನಿ ಪೀಟರ್‌, ಆರೋಗ್ಯ ಮಾತೆ ಚರ್ಚ್‌, ಹರಿಹರ.

ಶ್ರೀಗಳು ನಾಡನ್ನು ಬೆಳಗಿದ ಸರ್ವಶ್ರೇಷ್ಠ ಸಂತರಾಗಿದ್ದರು. ಬಸವಣ್ಣರ ತತ್ವ ಪಾಲಕರಾಗಿದ್ದರು. ತ್ರಿವಿಧ ದಾಸೋಹ ಅವರ ಮಹತ್ತರ ಕೊಡುಗೆ. ಅವರ ಅಗಲಿಕೆ ನಾಡಿನ ಧಾರ್ಮಿಕ, ಅಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ನಷ್ಟವನ್ನುಂಟು ಮಾಡಿದೆ. 
ಪ್ರಸನ್ನಾನಂದ ಶ್ರೀ, ಮಹರ್ಷಿ ವಾಲ್ಮೀಕಿ ಗುರುಪೀಠ, ರಾಜನಹಳ್ಳಿ

ಕಾಯಕ ಮತ್ತು ದಾಸೋಹ ತತ್ವಗಳನ್ನು ಅನುಕ್ಷಣವೂ ಬಿಡದೆ ಮರಣದಲ್ಲೂ ಮಾನವೀಯತೆಯ, ಅಂತಃಕರಣದ ಸಂದೇಶ ನೀಡಿ ಭಕ್ತ ಸಮೂಹದಿಂದ ಲೌಕಿಕವಾಗಿ ಅಗಲಿ ಪರಮಾತ್ಮನಲ್ಲಿ ಐಕ್ಯವಾದ ನಡೆದಾಡುವ ದೇವರು ಕಾಯಕಯೋಗಿಗಳು, ತ್ರಿವಿಧ ದಾಸೋಹಿಗಳು. ಅವರ ದೈವ ಚೈತನ್ಯದ ವ್ಯಕ್ತಿತ್ವ ನಮ್ಮ ಜೊತೆ ಸದಾ ಹೆಜ್ಜೆ ಹಾಕುತ್ತಿರುತ್ತದೆ. ಶ್ರೀಗಳ ಜಾತ್ಯತೀತ, ಧರ್ಮಾತೀತ ಸೇವೆಯು, ಭಕ್ತ ಸಮೂಹಕ್ಕೆ ದಾರಿದೀಪವಾಗಿದೆ. ನಿರಂಜನಾನಂದಪುರಿ ಶ್ರೀ, ಕಾಗಿನೆಲೆ ಕನಕ ಗುರುಪೀಠ.

ಶ್ರೀಗಳು ಜನಪರ ಧೋರಣೆ, ಸಮಾಜಮುಖೀ ಚಿಂತನೆ ಉಳ್ಳವರಾಗಿದ್ದರು. ಉಳ್ಳವರಿಂದ ಪಡೆದು ಬಡವರ ಹಸಿವನ್ನು ನೀಗಿಸಿದರು. ಶ್ರೀಗಳು ಇತರೆಲ್ಲಾ ಮಠಗಳಿಗೂ ಆದರ್ಶಪ್ರಾಯವಾಗಿದ್ದರು. ಅವರ ವೈಯಕ್ತಿಕ ಹಾಗೂ ಸಾರ್ವಜನಿಕ ಜೀವನ ಸರ್ವರಿಗೂ ಮಾದರಿಯಾಗಿದೆ. 
 ವೇಮನಾನಂದ ಶ್ರೀ, ವೇಮನಯೋಗಿ ಗುರುಪೀಠ, ಹೊಸಹಳ್ಳಿ. 

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.