ಪಪ್ಪಾಯಿ ಬೆಳೆದು ಕೈ ತುಂಬ ಆದಾಯ ಗಳಿಸಿದ ವಕೀಲ!


Team Udayavani, Jul 3, 2021, 9:44 AM IST

ಪಪ್ಪಾಯಿ ಬೆಳೆದು ಕೈ ತುಂಬ ಆದಾಯ ಗಳಿಸಿದ ವಕೀಲ!

ಹೊನ್ನಾಳಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಪಟ್ಟಣದಿಂದ ತಮ್ಮ ಗ್ರಾಮ ಹಿರೇಗೋಣಿಗೆರೆಗೆ ಬಂದು ಕೃಷಿಯತ್ತ ಮುಖ ಮಾಡಿದ ವಕೀಲರೊಬ್ಬರು ಮೂರು ಎಕರೆ ಜಮೀನಿನಲ್ಲಿ ಪಪ್ಪಾಯಿ ಹಣ್ಣು ಬೆಳದು ಸಾವಿರಾರು ರೂ. ಆದಾಯ ಗಳಿಸಿ ಕೃಷಿ ನಂಬಿ ಕೆಲಸ ಮಾಡಿದರೆ ಯಾರೂ ನಷ್ಟ ಅನುಭವಿಸುವುದಿಲ್ಲ ಎಂಬುದನ್ನು ವಕೀಲ ಮಂಜುನಾಥ ಸಾಧಿಸಿ ತೋರಿಸಿದ್ದಾರೆ.

ಕಳೆದ ವರ್ಷ ಲಾಕ್‌ಡೌನ್‌ ಆಗಿದ್ದರಿಂದ ನ್ಯಾಯಾಲಯದಲ್ಲಿ ಸರಿಯಾದ ಕಲಾಪಗಳು ನಡೆಯದೆ ಇದ್ದುದರಿಂದ ಗ್ರಾಮಕ್ಕೆ ಬಂದ ವಕೀಲ ಮಂಜುನಾಥ ಅವರು ಏಕಕಾಲಕ್ಕೆ 1500 ಪಪ್ಪಾಯಿ ಗಿಡ ಹಾಗೂ 1500 ಅಡಕೆ ಸಸಿ ನೆಟ್ಟು ಅದಕ್ಕೆ ಸಮರ್ಪಕ ಕೃಷಿ ಆರಂಭಿಸಿದರು. ಸಸಿ ನೆಟ್ಟು 9 ತಿಂಗಳಿಗೆ 1500 ಗಿಡಗಳಲ್ಲಿ ಪಪ್ಪಾಯಿ ಕಾಯಿ ಬರಲಾರಂಭಿಸಿತು. ನಂತರ ಕಾಯಿ ಮಾಗಿ ಹಳದಿ ಬಣ್ಣಕ್ಕೆ ತಿರುಗಿ ಹಣ್ಣುಗಳಾದವು. ಹದಿನೈದು ದಿನಗೊಳಿಗೊಮ್ಮೆ 4 ಟನ್‌ನಂತೆ ಒಂದು ತಿಂಗಳಿಗೆ 8 ಟನ್‌ಗೆ ರೂ.80 ಸಾವಿರ ಆದಾಯ ತೆಗೆದರು. ಇದರ ನಡುವೆ ಪಪ್ಪಾಯಿ ಜತೆಯಲ್ಲೇ 1500 ಅಡಿಕೆ ಸಸಿಗಳನ್ನು ಸಹ ನೆಟ್ಟಿದ್ದಾರೆ.

ಸಾವಯವ ಗೊಬ್ಬರ ಬಳಕೆ: ವಕೀಲ ಮಂಜುನಾಥ ಅವರು ಸುಲಭದಲ್ಲಿ ಹಾಗೂ ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಗಳಿಸಬಲ್ಲ ಯಾವ ಬೆಳೆ ಬೆಳೆಯಬಹುದು ಎಂಬುದನ್ನು ಕುಟುಂಬದವರ ಜತೆ ಚರ್ಚಿಸಿದಾಗ ಪಪ್ಪಾಯಿ ಬೆಳೆ ಬೆಳೆಯಲು ತೀರ್ಮಾನಿಸಿದರು. ಅದರಂತೆ ಸಾವಯವ ಗೊಬ್ಬರ ಹಾಕಿ ಬೆಳೆಯಬಹುದು ಎಂದು ಸಾವಯವ ಆರ್ಗ್ಯಾನಿಕ್ ಗೊಬ್ಬರ ಹಾಕಿದರೆ ಉತ್ತಮ ಇಳುವರಿ ಪಡೆಯುವುದು ಮತ್ತು ರೈತಮಿತ್ರ ಎರೆಹುಳ ಉತ್ಪಾದನೆ ಆಗುವುದಲ್ಲದೆ ಭೂಮಿ ಫಲವತ್ತೆ ಆಗಲಿದೆ ಎಂದು ಬಗ್ಗೆ ಚರ್ಚಿಸಿದ ನಂತರ ಪಪ್ಪಾಯಿ ಬೆಳದು ಇಂದು ತಿಂಗಳಿಗೆ 80 ಸಾವಿರ ಲಾಭ ಪಡೆಯುತ್ತಿದ್ದಾರೆ.

ಪಪ್ಪಾಯಿ ಹಾಗೂ ಅಡಕ್ಕೆ ಸಸಿ ನೆಡಲು ರೂ.3 ಲಕ್ಷ ಖರ್ಚು ಮಾಡಿದ್ದಾರೆ. ಈಗಾಗಲೆ ರೂ.1.50 ಲಕ್ಷ ಪಪ್ಪಾಯಿಯಲ್ಲಿ ಪಡೆದುಕೊಂಡಿದ್ದಾರೆ. ಇನ್ನೂ ಒಂದುವರೆ ವರ್ಷ ಪಪ್ಪಾಯಿ ಬೆಳೆ ಬೆಳೆಯಲಿದ್ದಾರೆ ಹಾಗೂ ಲಾಭದ ನಿರೀಕ್ಷೆಯಲ್ಲಿದ್ದಾರೆ. ಅಡಿಕೆ ಫಲ ಕೊಡಲು ಕನಿಷ್ಠ 6 ವರ್ಷಗಳು ಬೇಕು ಇದರ ಮಧ್ಯ ಪಪ್ಪಾಯಿ ಬೆಳೆದು ಲಾಬ ಗಳಿಸುವತ್ತ ಮಂಜುನಾಥ ದಾಪುಗಾಲು ಹಾಕಿದ್ದಾರೆ.

ಕಡಿಮೆ ಖರ್ಚಿನಲ್ಲಿ ಹೆಚ್ಚು ಬೆಳೆಯನ್ನು ಬೆಳೆದು ಭೂಮಿಯ ಫಲವತ್ತತೆ ಕಾಪಾಡಿಕೊಳ್ಳುವ ಬಗ್ಗೆ ಸ್ನೇಹಿತರು ಸಾವಯವ ಗೊಬ್ಬರ ಹಾಕುವಂತೆ ಸಲಹೆ ನೀಡಿದ್ದರು. ತಕ್ಷಣನಾನು ಪಪ್ಪಾಯಿ ಗಿಡಗಳನ್ನು ಹಾಕಿ ಸಾವಯವ ಗೊಬ್ಬರ ಹಾಕಿದ್ದರಿಂದ ಹೆಚ್ಚು ಇಳುವರಿ ಫಸಲು ಬಂದಿದೆ. ಇದರಿಂದ ಹೆಚ್ಚು ಲಾಭ ಗಳಿಸಲು ಸಾಧ್ಯವಾಯಿತು.

ಲಾಕ್‌ಡೌನ್‌ ಎಂದು ನಾನು ಮನೆಯಲ್ಲೇ ಕುಳಿತಿದ್ದರೆ ಲಾಭ ಗಳಿಸುತ್ತಿರಲಿಲ್ಲ. ಭೂಮಿ ಫಲವತ್ತತೆಯನ್ನು ಕಳೆದುಕೊಳ್ಳಬೇಕಾಗಿತ್ತು. ಒಟ್ಟಾರೆ ಕೃಷಿ ನಂಬಿ ಕೆಲಸ ಮಾಡಿದರೆ ಯಾರೂ ಸಹ ನಷ್ಟ ಅನುಭವಿಸುವುದಿಲ್ಲ. ಮಿಶ್ರ ಬೆಳೆ ಬೆಳೆದರೆ ಹೆಚ್ಚು ಲಾಭವಾಗಲಿದೆ.ಮಂಜುನಾಥ, ವಕೀಲರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.