ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ


Team Udayavani, Dec 5, 2021, 8:00 AM IST

ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ

ದಾವಣಗೆರೆ: ಭಿಕ್ಷೆಗಾಗಿ ಅಂಗಲಾಚುತ್ತಿದ್ದ ಕೈಗಳು ಈಗ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿವೆ! ಇಂಥದ್ದೊಂದು ಮಾದರಿ ಬದಲಾವಣೆ ಮೂಲಕ ಬದುಕು ಕಟ್ಟಿಕೊಳ್ಳಲು ಶ್ರಮಿಸುತ್ತಿರುವವರು ದಾವಣಗೆರೆ ಸಮೀಪದ ತುರ್ಚಘಟ್ಟ ಗ್ರಾಮದ ನಿರಾಶ್ರಿತರ  ಕೇಂದ್ರದ ನಿವಾಸಿಗಳು.  ಇಲ್ಲಿರುವ ಬಹುತೇಕರು  ಕೇಂದ್ರಕ್ಕೆ ಬರುವ ಮೊದಲು ಭಿಕ್ಷೆ ಬೇಡುತ್ತಿದ್ದರು. ಕೇಂದ್ರದಲ್ಲಿ ಆಶ್ರಯ ಪಡೆದ ಬಳಿಕ ಅವರೆಲ್ಲರೂ ಕೃಷಿಯಲ್ಲಿ ತೊಡಗಿಸಿಕೊಂಡು ಸ್ವಾವಲಂಬಿ ಪಾಠ ಕಲಿಯುತ್ತಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ತುರ್ಚ ಘಟ್ಟದ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಪ್ರಸ್ತುತ  ಮಹಿಳೆಯರಿ ಸಹಿತ 226 ಮಂದಿಯಿದ್ದಾರೆ. ರಾಜ್ಯದವರಲ್ಲದೆ ತಮಿಳುನಾಡು, ಆಂಧ್ರ, ಕೇರಳ, ಉತ್ತರ ಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಲ, ಪಂಜಾಬ್‌ ಸಹಿತ  ವಿವಿಧ ಭಾಗಗಳಿಂದ ಆಗಮಿಸಿದ ನಿರಾಶ್ರಿತರೂ ಇದ್ದಾರೆ.  ಭಿಕ್ಷಾಟನೆ ನಿರ್ಮೂಲ ಹಾಗೂ ನಿರ್ಗತಿಕರಿಗೆ ಆಶ್ರಯ ನೀಡುವ ಉದ್ದೇಶದಿಂದ ತೆರೆಯಲಾಗಿರುವ ಈ ಕೇಂದ್ರ ಅನಾಥರ ಪಾಲಿಗೆ ಅನ್ನಾರೋಗ್ಯ ಧಾಮವಾಗಿದೆ.

ಕೃಷಿ ಕೈಂಕರ್ಯ :

ಈ ಕೇಂದ್ರಕ್ಕೆ ಸೇರಿ ವಾಪಸ್‌ ಹೋಗುವಾಗ ಸ್ವಾವಲಂಬಿ ಬದುಕಿಗೆ ಇವರನ್ನು ಸಿದ್ಧಪಡಿಸಲಾಗುತ್ತದೆ. ಇವರನ್ನು ಕೇಂದ್ರದ 10 ಎಕರೆ ಪ್ರದೇಶದಲ್ಲಿ  ಕೃಷಿ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ. ಕೃಷಿ- ಹೈನುಗಾರಿಕೆ ಕೆಲಸ ಮಾಡಲು ದೈಹಿಕವಾಗಿ ಸಮರ್ಥರಿದ್ದವರು ಹಾಗೂ ಆಸಕ್ತರನ್ನು ಗುರುತಿಸಿ ಅವರನ್ನು ಮಾತ್ರ  ಇದರ‌ಲ್ಲಿ ತೊಡ ಗಿಸಿಕೊಳ್ಳಲಾಗುತ್ತಿದೆ. ಕೇಂದ್ರದ 50ಕ್ಕೂ ಹೆಚ್ಚು ನಿರಾಶ್ರಿತರು ಕೃಷಿ- ಹೈನುಗಾರಿಕೆ ಕೆಲಸದಲ್ಲಿ  ತೊಡಗಿಸಿಕೊಂಡಿದ್ದಾರೆ. ಪರಿಣಾಮವಾಗಿ ಕೇಂದ್ರದ ಸುತ್ತ ಇರುವ ಕೃಷಿ ಭೂಮಿಯಲ್ಲಿ ಟೊಮೆಟೋ, ಮೂಲಂಗಿ, ಹುರುಳಿ, ಸೌತೆಕಾಯಿ, ಬೆಂಡೆಕಾಯಿಯಂಥ ವಿವಿಧ ತರಕಾರಿ ಜತೆಗೆ ಬಾಳೆ, ಸೀತಾಫಲ, ಮಾವು, ಅಡಿಕೆ, ಗುಲಾಬಿ, ಮಾವು, ತೊಗರಿ, ಮೆಣಸು ಬೆಳೆಯಲಾಗುತ್ತಿದೆ. ಇಲ್ಲಿ ಬೆಳೆದ ತರಕಾರಿ, ಹಣ್ಣುಗಳನ್ನೇ ಕೇಂದ್ರದ ಆಶ್ರಿತರ ಊಟಕ್ಕೆ ನೀಡಲಾಗುತ್ತಿದೆ. ಕೇಂದ್ರದಲ್ಲಿ ಏಳೆಂಟು ಹಸುಗಳನ್ನು ಸಾಕಲಾಗುತ್ತಿದೆ.

ಕೇಂದ್ರದ ಕೆಲವು ಸಶಕ್ತರನ್ನು ಮಾತ್ರ ಕೃಷಿಯಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ. ಆಶ್ರಯ ಪಡೆದವರಲ್ಲಿ ಹಲವರು ಕೃಷಿ ಕೆಲಸದಲ್ಲಿ ತಮಗೆ ಎಷ್ಟು ಸಾಧ್ಯವೋ ಅಷ್ಟು ತೊಡಗಿಸಿಕೊಳ್ಳುತ್ತಾರೆ. ಭಿಕ್ಷುಕರೇ ಹೆಚ್ಚಾಗಿ ಕೇಂದ್ರದಲ್ಲಿ ಆಶ್ರಯ ಪಡೆಯುವುದರಿಂದ ಅವರಲ್ಲಿ ಸ್ವಾವಲಂಬಿ ಜೀವನ ನಡೆಸಲು ಇದು ಪ್ರೇರಣೆಯೂ ಆಗಿದೆ. ಕೇಂದ್ರದಲ್ಲಿ ಅಗರಬತ್ತಿ ತಯಾರಿ ಘಟಕ ಸ್ಥಾಪಿಸುವ ಯೋಚನೆಯೂ ಇದೆ.ನಳಿನಿ ಬಿ., ಪ್ರಭಾರಿ ಅಧೀಕ್ಷಕರು, ನಿರಾಶ್ರಿತರ ಪರಿಹಾರ ಕೇಂದ್ರ, ತುರ್ಚಘಟ್ಟ, ದಾವಣಗೆರೆ

 

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.