ತಂಬಾಕು ಮುಕ್ತ ಜಿಲ್ಲೆಯಾಗಿಸಲು ಅಹರ್ನಿಶಿ ಯತ್ನ

ತಂಬಾಕು ನಿಯಂತ್ರಣ ಅಧಿಕಾರಿಗಳ ತಂಡದಿಂದ ಜನಜಾಗೃತಿ

Team Udayavani, May 31, 2022, 2:30 PM IST

tobacco

ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಧಿಕಾರಿಗಳ ತಂಡ ಅಹರ್ನಿಶಿ ಶ್ರಮಿಸುತ್ತಿದೆ. ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಕೋಟಾ ಕಾಯ್ದೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತರಲಾಗುತ್ತಿರುವ ಹಿನ್ನೆಲೆಯಲ್ಲಿ 2019ರಲ್ಲೇ ದಾವಣಗೆರೆ ನಗರ ತಂಬಾಕು ರಹಿತ ನಗರಿ ಆಗಿದೆ. ದಾವಣಗೆರೆ ನಗರದ ಜೊತೆಗೆ ದಾವಣಗೆರೆ ಮತ್ತು ಹೊನ್ನಾಳಿ ತಾಲೂಕುಗಳನ್ನು ತಂಬಾಕು ರಹಿತ ತಾಲೂಕುಗಳು ಎಂಬುದಾಗಿ ಘೋಷಣೆ ಮಾಡಲಾಗಿದೆ.

2020ರಲ್ಲಿ ದಾವಣಗೆರೆ ಜಿಲ್ಲೆಯನ್ನ ತಂಬಾಕು ರಹಿತ ಜಿಲ್ಲೆಯನ್ನಾಗಿ ಘೋಷಣೆ ಮಾಡಿದ ನಂತರ ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಕೋಟಾ ಕಾಯ್ದೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ನಿಗದಿತ ಕಾಲಾವಧಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿಗಳ ತಂಡ ಅಂಗಡಿ, ಹೋಟೆಲ್‌, ವಾಣಿಜ್ಯ ಸಮುತ್ಛಯ, ಅತಿ ಹೆಚ್ಚಾಗಿ ಜನರು ಸೇರುವ ಬಸ್‌ ನಿಲ್ದಾಣ, ಸಿನಿಮಾ ಮಂದಿರ ಇತರೆ ಜನನಿಬಿಡ ಪ್ರದೇಶಗಳಲ್ಲಿ ಮಿಂಚಿನ ದಾಳಿ ನಡೆಸಿ, ಕೋಟ್ಟಾದ ಕಾಯ್ದೆ ಉಲ್ಲಂಘಿಸಿದವರಿಗೆ ದಂಡ ವಿಧಿಸುವ ಜೊತೆಗೆ ತಂಬಾಕು ಉತ್ಪನ್ನಗಳಿಂದ ಆಗುವಂತಹ ದುಷ್ಪರಿಣಾಮಗಳ ಬಗ್ಗೆ ಜಾಗೃತಿ, ಮನವರಿಕೆ ಮೂಡಿಸುತ್ತಿರುವ ಕಾರಣಕ್ಕೆ ತಂಬಾಕು ಉತ್ಪನ್ನಗಳ ಬಳಕೆ ಪ್ರಮಾಣ ಕಡಿಮೆ ಆಗುತ್ತಿರುವುದು ಕಂಡು ಬರುತ್ತಿದೆ.

2021ರಲ್ಲಿ ಕೋಟ್ಟಾದ 4,5,6 6ಎ, 6ಬಿ ಮತ್ತು 7 ಕಾಯ್ದೆಗಳನ್ನು ಶೇ. 85 ರಷ್ಟು ಜಾರಿಗೊಳಿಸಿರುವ ಹೆಗ್ಗಳಿಕೆ ಜಿಲ್ಲಾ ತಂಬಾಕು ನಿಯಂತ್ರಣ ತಂಡಕ್ಕಿದೆ. ಈ ವರ್ಷ ಇನ್ನೂ ಹೆಚ್ಚು ಪರಿಣಾಮಕಾರಿ ಕೋಟ್ಟಾ ಕಾಯ್ದೆಯ ನಿಯಮಗಳ ಜಾರಿಗೆ ತರುವ ಮೂಲಕ ದಾವಣಗೆರೆ ಜಿಲ್ಲೆಯನ್ನು ವಾಸ್ತವಿಕವಾಗಿ ತಂಬಾಕು ರಹಿತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಅಧಿಕಾರಿಗಳ ತಂಡ ಕೆಲಸ ಮಾಡುತ್ತಿದೆ. ಅತಿ ಮುಖ್ಯವಾಗಿ ಶಾಲಾ-ಕಾಲೇಜುಗಳ ಆವರಣ ಸುತ್ತಮುತ್ತ 100 ಗಜಗಳ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಕೋಟ್ಟಾ ಕಾಯ್ದೆಯಡಿ ನಿಯಂತ್ರಿಸಲಾಗಿದೆ. ಶಾಲಾ-ಕಾಲೇಜುಗಳಲ್ಲಿ ತಂಬಾಕು ಉತ್ಪನ್ನಗಳ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. 14 ವರ್ಷದೊಳಗಿನ ಮಕ್ಕಳ ಮೂಲಕ ತಂಬಾಕು ಉತ್ಪನ್ನ ಗಳಾದ ಬೀಡಿ, ಸಿಗರೇಟು, ಜರ್ದಾ, ಗುಟ್ಕಾ ಇತರೆಯದ್ದನ್ನು ತರಿಸುವುದು, ಮಕ್ಕಳ ಮುಂದೆ ಸೇವನೆ ಮಾಡುವುದು ಕೋಟ್ಟಾ ಕಾಯ್ದೆ ಅನ್ವಯ ಅಪರಾಧ ಎಂಬುದನ್ನು ಮಕ್ಕಳ ಮೂಲಕ ಪೋಷಕರ ತಿಳಿಸುವ ಕೆಲಸ ಮಾಡಲಾಗುತ್ತಿದೆ. ಹಾಗಾಗಿ ಅನೇಕ ಕುಟುಂಬಗಳಲ್ಲಿ ಮಕ್ಕಳಿಂದ ಬೀಡಿ, ಸಿಗರೇಟು, ಗುಟ್ಕಾ ತರಿಸುವುದು ಕಡಿಮೆ ಆಗಿದೆ ಎನ್ನುತ್ತಾರೆ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ| ಜಿ.ಡಿ. ರಾಘವನ್‌.

ಜಿಲ್ಲಾ ತಂಬಾಕು ನಿಯಂತ್ರಣ ತಂಡಕ್ಕೆ ನಗರ ಮತ್ತು ಗ್ರಾಮೀಣ ಭಾಗದಲ್ಲಿ ವರ್ಷಕ್ಕೆ 100 ದಾಳಿ ನಡೆಸಿ, ನಿಯಮಗಳ ಉಲ್ಲಂಘನೆ ಮಾಡಿದವರಿಂದ ದಂಡ ವಸೂಲಿ ಮಾಡುವ ಜೊತೆಗೆ ತಂಬಾಕು ಉತ್ಪನ್ನಗಳ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಜಗಿಯುವ ಮತ್ತು ಸೇದುವ ತಂಬಾಕು ಉತ್ಪನ್ನಗಳ ಬಳಕೆ ನಿಯಂತ್ರಣದ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ತಂಡದ ಕಾರ್ಯಚಟುವಟಿಕೆ ಹಿನ್ನೆಲೆಯಲ್ಲಿ ಈಚೆಗೆ ಬಸ್‌, ಸಾರ್ವಜನಿಕ ವಾಹನಗಳಲ್ಲಿ ಬೀಡಿ, ಸಿಗರೇಟು ಸೇವನೆ ಮಾಡುವುದು ಬಹಳಷ್ಟು ಕಡಿಮೆ ಆಗಿದೆ ಎನ್ನುತ್ತಾರೆ ಅವರು.

ಸಾರಿಗೆ ಸಂಸ್ಥೆ ಒಳಗೊಂಡಂತೆ ಹೆಚ್ಚು ಜನಸಂದಣಿಯ ಕಾರ್ಖಾನೆ, ಹೋಟೆಲ್‌, ಸಿನಿಮಾ ಮಂದಿರಗಳಲ್ಲೂ ನಿಗದಿತ 50 ಜಾಗೆಯಲ್ಲಿ ಸಭೆಗಳ ನಡೆಸಿ, ಕೋಟ್ಟಾ ಕಾಯ್ದೆ, ತಂಬಾಕು ಉತ್ಪನ್ನಗಳ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ಕಾಯ್ದೆ ಜಾರಿಗೆ ತರಲಾಗುವುದು ಎಂದು ಡಾ| ರಾಘವನ್‌ ತಿಳಿಸಿದರು.

ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ಸಾವು, ನೋವು, ಕುಟುಂಬಗಳು ಅನುಭವಿಸುವ ಸಂಕಷ್ಟ ದೂರ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳ ತಂಡದ ಜೊತೆಗೆ ಸಾರ್ವಜನಿಕರ ಸಹಭಾಗಿತ್ವವೂ ಅತಿ ಮುಖ್ಯವಾಗಿದೆ.

-ರಾ. ರವಿಬಾಬು

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.