ಅಹೋರಾತ್ರಿ ಧರಣಿ ಆರಂಭ


Team Udayavani, Jan 17, 2017, 12:43 PM IST

dvg2.jpg

ದಾವಣಗೆರೆ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘ (ಸಿಐಟಿಯು)ದ ನೇತೃತ್ವದಲ್ಲಿ ಜಿಲ್ಲೆಯ ಗ್ರಾಪಂ ನೌಕರರು ಜಿಲ್ಲಾ ಪಂಚಾಯತ್‌ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. 

ವಿಮಾನಮಟ್ಟಿ ಬಳಿಯ ಗಣೇಶ ದೇವಸ್ಥಾನದಿಂದ ಸೋಮವಾರ ಬೆಳಿಗ್ಗೆ ಮೆರವಣಿಗೆ ಮೂಲಕ ಜಿಪಂ ಕಚೇರಿ ಆವರಣಕ್ಕೆ ಆಗಮಿಸಿ, ಧರಣಿ ಆರಂಭಿಸಿದ ನೌಕರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ತಕ್ಷಣ ತಮ್ಮ ಬೇಡಿಕೆ ಈಡೇರಿಕೆಗೆ ಕ್ರಮ ವಹಿಸುವಂತೆ ಆಗ್ರಹಿಸಿದರು. 

ಧರಣಿನಿರತರನ್ನು ಉದ್ದೇಶಿಸಿ, ಮಾತನಾಡಿದ ಸಂಘಟನೆಯ ಮುಖಂಡ ಕೆ. ಲಕ್ಷ್ಮಿನಾರಾಯಣ ಭಟ್‌, ಸರ್ಕಾರ ಗ್ರಾಮ ಪಂಚಾಯಿತಿ ನೌಕರರನ್ನು ಕಡೆಗಣಿಸುತ್ತಲೇ ಬಂದಿದೆ. ನಾವು ಹಲವು ಬಾರಿ ಹೋರಾಟ ಮಾಡಿ, ಮನವಿ ಸಲ್ಲಿಸಿದರೂ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ದೂರಿದರು. 

ಗ್ರಾಪಂನ ಜಾಡಮಾಲಿಗೆ 12,870, ಜವಾನರಿಗೆ 10,010, ನೀರಗಂಟಿಗಳಿಗೆ 10,588, ಕರ ವಸೂಲಿಗಾರರಿಗೆ 12,122 ರೂ. ವೇತನ ಹಾಗೂ 398 ರೂ. ತುಟ್ಟಿಭತ್ಯೆ ನೀಡಲು ಪದೇ ಪದೇ ಆಗ್ರಹಿಸುತ್ತಿದ್ದರೂ ಸರ್ಕಾರ ನಮ್ಮ ಬೇಡಿಕೆ ಈಡೇರಿಕೆಗೆ ಇದುವರೆಗೆ ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ನೀರಗಂಟಿಗಳಿಗೆ ಖಾಲಿ ಇರುವ ಕರ ವಸೂಲಿಗಾರರ ಹುದ್ದೆಗೆ ಭಡ್ತಿ, ಎಲ್ಲಾ ಗ್ರಾಪಂ ನೌಕರರಿಗೆ ಸೇವಾ ಪುಸ್ತಕ ತೆರೆಯುವುದು, ಸಂಗ್ರಹವಾದ ತೆರಿಗೆ ಹಣದಲ್ಲಿ ಸೇ.40ರಷ್ಟು ಹಣವನ್ನು ಸಿಬ್ಬಂದಿ ವೇತನಕ್ಕೆ ಮೀಸಲಿಡುವುದು, ತೆರಿಗೆ ಪರಿಷ್ಕರಣೆ ಮಾಡಿ, ಆದಾಯ ಮೂಲ ಹೆಚ್ಚಿಸಬೇಕು.

ಜನಶ್ರೀ ವಿಮೆ ಜಾರಿಮಾಡಿ ನೌಕರರಿಗೆ ಆರೋಗ್ಯ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು. ಇನ್ನು ಸಂಬಳ ನೀಡಿಕೆಯಲ್ಲಿ ಸಾಕಷ್ಟು ವಿಳಂಬ ನೀತಿ ಅನುಸರಿಸಲಾಗುತ್ತದೆ. ಕೆಲ ಕಡೆಗಳಲ್ಲಿ 5 ವರ್ಷದ ಕಾಲ ಸಂಬಳವೇ ಬಂದಿಲ್ಲ. ಕೆಲ ಕಡೆಗಳಲ್ಲಿ 50 ತಿಂಗಳ ಸಂಬಳ ಬಾಕಿ ಉಳಿಸಿಕೊಳ್ಳಲಾಗಿದೆ.

ಇದರಿಂದ ಈ ಜನ ಉಪವಾಸ ಇರಬೇಕಾದ ಸ್ಥಿತಿ ನಿರ್ಮಾಣ ಆಗುತ್ತಿದೆ ಎಂದು ಬೇಸರಿಸಿದರು. ಸಂಘಟದ ಜಿಲ್ಲಾಧ್ಯಕ್ಷ ಕೆ.ಎಂ. ಉಮೇಶ್‌, ಕಾರ್ಯದರ್ಶಿ ಎಸ್‌.ಸಿ. ಶ್ರೀನಿವಾಸಾಚಾರ್‌, ಕೃಷ್ಣಮೂರ್ತಿ, ಓಂಕಾರಪ್ಪ, ಎಂ. ಚೇತನ್‌, ಚಂದ್ರಪ್ಪ, ಬಾಡಾ ನಾಗರಾಜ, ಕೆಂಚಪ್ಪ, ತಿಪ್ಪಣ್ಣ, ನರಸಿಂಹಪ್ಪ, ವೆಂಕಟೇಶ್‌, ಶೇಖರಪ್ಪ, ಹನುಮಂತಪ್ಪ, ರೇವಣ್ಣ, ಮಹಾಂತೇಶ್‌, ಪರಶುರಾಮ ಧರಣಿ ನೇತೃತ್ವ ವಹಿಸಿದ್ದಾರೆ.  

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.