ಕೆಚ್ಚೇನಹಳ್ಳಿ ಗ್ರಾಪಂಗೆ ಅಜ್ಜಯ್ಯ ಅಧ್ಯಕ್ಷ
Team Udayavani, Jun 23, 2017, 1:16 PM IST
ಜಗಳೂರು: ತಾಲೂಕಿನ ಕೆಚ್ಚೇನಹಳ್ಳಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಅಜ್ಜಯ್ಯ ಆಯ್ಕೆಯಾಗಿದ್ದಾರೆ. ಗ್ರಾಪಂ ಸಭಾಂಗಣದಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ಪ್ರತಿಸ್ಪ ರ್ಧಿ ಗಾದ್ರೆಪ್ಪ ಅವರಿಗಿಂತ 5 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.
ಬೆಳಗ್ಗೆ 10 ಗಂಟೆಯಿಂದ ಆರಂಭವಾದ ಚುನಾವಣೆ ಪ್ರಕ್ರಿಯೆಯಲ್ಲಿ ಅಜ್ಜಯ್ಯ, ಗಾದ್ರೆಪ್ಪ, ವೀರೇಶ್ ಎಂಬುವರು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರಗಳು ಕೂಡಾ ಕ್ರಮವಾಗಿದ್ದವು. ಅಂತೆಯೇ ನಾಮಪತ್ರ ವಾಪಾಸ್ಸು ನಿಗದಿತ ಸಮಯದಲ್ಲಿ ವೀರೇಶ್ ಎಂಬುವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದರು.
ಮಧ್ಯಾಹ್ನ 1 ಗಂಟೆಗೆ ಸರಿಯಾಗಿ ಆರಂಭವಾದ ಚುನಾವಣೆಯಲ್ಲಿ ಅಜ್ಜಯ್ಯಗೆ 13 ಮತಗಳು ಮತ್ತು ಗಾದ್ರೆಪ್ಪ ಅವರಿಗೆ 7 ಮತಗಳನ್ನು ಪಡೆದರು. ಹೀಗಾಗಿ ಹೆಚ್ಚು ಮತಗಳನ್ನು ಪಡೆದ ಅಜ್ಜಯ್ಯ ಅವರನ್ನು ಅಧ್ಯಕ್ಷರೆಂದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ತೋಟಗಾರಿಕೆ ಸಹಾಯಕ ನಿರ್ದೇಶಕ ವೀರಭದ್ರಸ್ವಾಮಿ ಘೋಷಿಸಿದರು. ಈ ಹಿಂದಿನ ಅಧ್ಯಕ್ಷರನ್ನು ವಿಶ್ವಾಸದಿಂದ ಪದಚ್ಯತಿಗೊಳಿಸಲಾಗಿತ್ತು.
ಇದರಿಂದ ಖಾಲಿಯಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆಯ ನಿಗದಿಯಾಗಿತ್ತು. ಚುನಾವಣೆಯಲ್ಲಿ ಪ್ರಕ್ರಿಯೆಯಲ್ಲಿ ಉಪಾಧ್ಯಕ್ಷರಾದ ಹಂಪಮ್ಮ ಸದಸ್ಯರಾದ ರುದ್ರೇಶ್ವರಪ್ಪ, ನಾಸೀರಾಬಾನು, ದುರ್ಗಮ್ಮ, ನಿಂಗಪ್ಪ, ಅಂಜಿನಪ್ಪ, ಶ್ವೇತಾ, ಗಂಗಮ್ಮ, ದ್ಯಾಮಕ್ಕ, ಸುಧಾಮಣಿ, ಸಾಕಮ್ಮ, ಸಿದ್ದಮ್ಮ, ರವಿ, ತಿಪ್ಪೇಸ್ವಾಮಿ, ಮಂಜುನಾಥ್, ರತ್ನಮ್ಮಪ್ರಕಾಶ್, ರತ್ನಮ್ಮತಿಪ್ಪೇಸ್ವಾಮಿ, ಪಿಡಿಒ ವಾಸುದೇವ, ಗ್ರಾಪಂ ಸಿಬ್ಬಂದಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್