ಬಿಜೆಪಿಯಲ್ಲಿ ಶೇ.90 ರಷ್ಟು ಮಂದಿ ಬೇರೆ ಪಕ್ಷಗಳಿಂದ ಬಂದವರೇ ಇರುವುದು: ಸಚಿವ ಬಿ.ಸಿ.ಪಾಟೀಲ್
Team Udayavani, Jun 8, 2021, 2:11 PM IST
ದಾವಣಗೆರೆ: ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರು ಎಂಬ ಯಾವುದೇ ಭಾವನೆಯೇ ಇಲ್ಲ. ಹಾಗೆ ನೋಡಿದರೆ ಬಿಜೆಪಿಯಲ್ಲಿ ಇರುವರಲ್ಲಿ ಶೇ. 90 ರಷ್ಟು ಹಿಂದೆ ಜನತಾದಳ ಹೀಗೆ ಬೇರೆ ಬೇರೆ ಪಕ್ಷದಲ್ಲಿ ಇದ್ದವರೇ. ಬಿಜೆಪಿಗೆ ಬಂದ ಮೇಲೆ ಎಲ್ಲರೂ ಬಿಜೆಪಿಯವರೇ. ನಾವೆಲ್ಲರೂ ಸೊಸೆಯಾಗಿ ಮನೆ ಬಾಗಿಲಿಗೆ ಬಂದು, ಮಗಳಾದವರು. ನಮ್ಮಲ್ಲಿ ಮೂಲ ಮತ್ತು ವಲಸಿಗರು ಎಂಬುದೇ ಇಲ್ಲ ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಕೇಳಿದರೆ ರಾಜೀನಾಮೆ ಕೊಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿಕೆ ನೀಡಿರುವುದಲ್ಲಿ ತಪ್ಪೇನು ಇಲ್ಲ. ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೇಳಿಕೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲವೇ ಇಲ್ಲ ಎಂದರು.
ಕಳೆದ ಮೂರು ತಿಂಗಳನಿಂದ ನಾಯಕತ್ವ ಬದಲಾವಣೆ ಕುರಿತಂತೆ ಕೇಳಿ ಬರುತ್ತಿದ್ದ ಮಾತುಗಳಿಂದ ತಲೆ ರೋಸಿ ಹೋಗಿ ಆ ರೀತಿ ಹೇಳಿಕೆ ನೀಡಿರಬಹುದು. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ ಎಂದು ತಿಳಿಸಿದರು.
ಇದನ್ನೂ ಓದಿ:ಜಾರಕಿಹೊಳಿ ಕೇಸ್ ಗೆ ಹೊಸ ತಿರುವು: ಸರ್ಕಾರ, ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್
ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿರುವಂತಹ 17 ಶಾಸಕರಿಗೆ ಯಾವುದೇ ಅಭದ್ರತೆಯ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಅವರ ನಾಯಕತ್ವ ನಂಬಿಕೊಂಡು ಬಂದಿದ್ದೇವೆ. ನಮ್ಮ ಎಲ್ಲರಿಗೂ ಒಳ್ಳೆಯ ಗೌರವ, ಸ್ಥಾನಮಾನ ನೀಡಲಾಗಿದೆ. ಹಾಗಾಗಿ ಯಾವುದೇ ಅಭದ್ರತೆ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಯಾರ ಕೈಯಲ್ಲಿನ ಐದು ಬೆರಳುಗಳು ಒಂದೇ ಸಮವಾಗಿ ಇರುವುದಿಲ್ಲ. ಒಂದು ಮನೆ ಎಂದರೆ ಆಣ್ಣ-ತಮ್ಮಂದಿರ ನಡುವೆ ವ್ಯತ್ಯಾಸ ಇರುತ್ತದೆ. ಹಿರಿಯರು ಎಲ್ಲವನ್ನೂ ಬಗೆಹರಿಸುತ್ತಾರೆ. ಅದೇ ರೀತಿ ನಮ್ಮ ಪಕ್ಷದ ಹಿರಿಯರು ಸಹ ಎಲ್ಲವನ್ನೂ ನೋಡಿಕೊಳ್ಳುತ್ತಾರೆ. ಪಕ್ಷ ಸುಸ್ಥಿತಿಯಲ್ಲಿದೆ. ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದನ್ನೂ ಓದಿ: ಕೆಲವು ಅಭಿಪ್ರಾಯಗಳು ಎಲ್ಲರ ಅಭಿಪ್ರಾಯವಲ್ಲ,ನಮಗೆ ಪ್ರತ್ಯೇಕ ವ್ಯವಸ್ಥೆ ಮಾಡಿ: ಸುನೀಲ್ ಕುಮಾರ್
ಬಿಜೆಪಿಯ ಆಂತರಿಕ ವಿಷಯದ ಬಗ್ಗೆ ಮಾತನಾಡಲಿಕ್ಕೆ ಡಿ.ಕೆ. ಶಿವಕುಮಾರ್ ಅವರೇನು ಬಿಜೆಪಿಯವರ ಎಂದು ಪ್ರಶ್ನಿಸಿದ ಅವರು ಡಿ.ಕೆ. ಶಿವಕುಮಾರ್ ಏನು ಹೇಳಿದ್ದಾರೋ ಗೊತ್ತಿಲ್ಲ. ಗೊತ್ತಿಲ್ಲದ ವಿಷಯದ ಬಗ್ಗೆ ಮಾತನಾಡುವುದಿಲ್ಲ. ಕೆಲವರು ಟಿವಿಯಲ್ಲಿ, ಪೇಪರ್ನಲ್ಲಿ ಬರುವ ಆಸೆ, ಆಕಾಂಕ್ಷೆಯಿಂದ ಹೇಳಿಕೆ ನೀಡಿರಬಹುದು. ಮುಖ್ಯಮಂತ್ರಿ ಬದಲಾವಣೆ ಎನ್ನುವುದು ಸುಳ್ಳು ವದಂತಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ