ಪ್ರಜಾಪ್ರಭುತ್ವ ಹೈಜಾಕ್‌ ತಡೆಗೆ ಪರ್ಯಾಯ ಶಕ್ತಿ


Team Udayavani, Apr 24, 2017, 1:19 PM IST

dvg2.jpg

ದಾವಣಗೆರೆ: ಜಾತ್ಯತೀತ ಜನತಾದಳ, ಕಾಂಗ್ರೆಸ್‌ ಮತ್ತು ಬಿಜೆಪಿಯ ಜನ, ಸಂವಿಧಾನ ವಿರೋಧಿ, ದುಷ್ಟ ರಾಜಕಾರಣದ ವಿರುದ್ಧ ಸೂಕ್ತ ಪರ್ಯಾಯ ರಾಜಕೀಯ ವ್ಯವಸ್ಥೆ ಕಂಡುಕೊಳ್ಳಬೇಕಿದೆ ಎಂದು ಜನ ಸಂಗ್ರಾಮ ಪರಿಷತ್‌ ರಾಜ್ಯ ಗೌರವ ಅಧ್ಯಕ್ಷ ಎಸ್‌.ಆರ್‌. ಹಿರೇಮಠ್ ಪ್ರತಿಪಾದಿಸಿದ್ದಾರೆ. 

ಭಾನುವಾರ ನಿವೃತ್ತ ನೌಕರರ ಸಮುದಾಯ ಭವನದಲ್ಲಿ ನಡೆದ ಜನ ಪರ್ಯಾಯ ಕಟ್ಟೋಣ ಜಾಥಾ…ಸಭೆಯಲ್ಲಿ ಮಾತನಾಡಿದ ಅವರು, ಮೂರು ಪಕ್ಷಗಳು ಬಂಡವಾಳಶಾಹಿ ವ್ಯವಸ್ಥೆ ಪರ ಕೆಲಸ ಮಾಡುತ್ತವೆ. ಜನ ಮತ್ತು ಸಂವಿಧಾನ ವಿರೋಧಿ, ದುಷ್ಟ ರಾಜಕಾರಣದ ವಿರುದ್ಧ ಜನ ಸಾಮಾನ್ಯರು ಪರ್ಯಾಯ ರಾಜಕೀಯ ವ್ಯವಸ್ಥೆ ಕಂಡುಕೊಳ್ಳಬೇಕು.

ಪ್ರಜಾಪ್ರಭುತ್ವ, ಸಂವಿಧಾನದ ಹೈಜಾಕ್‌ ವಿರುದ್ಧ ಮತ್ತೂಂದು ಸ್ವಾತಂತ್ರ ಸಂಗ್ರಾಮ ನಡೆಸಬೇಕು ಎಂದು ತಿಳಿಸಿದರು. ದೇಶಕ್ಕೆ ಸ್ವಾತಂತ್ರ ಲಭಿಸಿ 70 ವರ್ಷ ನಂತವರೂ ಶೋಷಣೆ, ಅಸಮಾನತೆ ಜೀವಂತವಾಗಿವೆ. 200 ವರ್ಷಗಳ ಕಾಲ ಆಡಳಿತ ನಡೆಸಿದ ಬ್ರಿಟಿಷರಗಿಂತಲೂ ನಮ್ಮವರೇ ಕೆಟ್ಟ ಆಡಳಿತ ನೀಡಿದ್ದಾರೆ. 

ಶೇ.70ರಷ್ಟು ಜನರು ಅವಲಂಬಿಸಿರುವ ಕೃಷಿಗೆ ಈ ಕ್ಷಣಕ್ಕೂ ಸಂಕಷ್ಟ ತಪ್ಪಿಲ್ಲ. ಒಳ್ಳೆಯ ವಿದ್ಯೆ ಪಡೆದವರೂ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿದ್ದಾರೆ. ರೈತರ ಭೂಮಿಯನ್ನು ಬಲವಂತವಾಗಿ ಕಿತ್ತುಕೊಂಡು ಬಹು ರಾಷ್ಟ್ರೀಯ ಕಂಪನಿಗಳಿಗೆ ಅತಿ ಕಡಿಮೆ ಬೆಲೆಗೆ ನೀಡುವ ಮೂಲಕ ರೈತರ ದುಡಿಮೆಯನ್ನು ಕಸಿದುಕೊಳ್ಳಲಾಗುತ್ತಿದೆ.

ಮತ್ತೆ ಊಳುವವನೆ ಒಡೆಯ ಎಂಬ ಕಾನೂನು ಜಾರಿಗೆ ಬರುವ ಅಗತ್ಯತೆ ಇದೆ ಎಂದು ತಿಳಿಸಿದರು.  ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ನರೇಂದ್ರ ಮೋದಿ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಮಾತುಗಳಾಡಿದ್ದರು. ಈವರೆಗೆ 2 ಲಕ್ಷ ಹುದ್ದೆಗಳನ್ನೂ ಸೃಷ್ಟಿಸಿಲ್ಲ.  10-15 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡಿರುವ ಕಡೆಯಲ್ಲೂ ಯುವ ಜನಾಂಗಕ್ಕೆ ಉದ್ಯೋಗವಕಾಶ ಇಲ್ಲ. 

ಅಧಿಕಾರಕ್ಕೆ ಬರಲು ನೆರವಾಗಿರುವ ಬಂಡವಾಳಶಾಹಿಗಳ ಸೇವೆಗಾಗಿ ಕೇಂದ್ರ ಸರ್ಕಾರ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ತರುವ ಮೂಲಕ ಸಂವಿಧಾನಕ್ಕೆ ತದ್ವಿರುದ್ಧವಾಗಿ ನಡೆದುಕೊಂಡಿದೆ ಎಂದು ದೂರಿದರು. ಈಗ ಭ್ರಷ್ಟಾಚಾರ ಎನ್ನುವುದು ಮುಗಿಲು ಮುಟ್ಟಿದೆ. ಶಿಕ್ಷಣ,ಆರೋಗ್ಯ ಕ್ಷೇತ್ರವೂ ವ್ಯಾಪಾರಿ ಕ್ಷೇತ್ರಗಳಾಗಿವೆ.

ಜನ ಸೇವೆ ಮಾಡಬೇಕಾದವರು ರಾಜಕೀಯವನ್ನು ವ್ಯಾಪಾರವನ್ನಾಗಿ ಮಾಡಿಕೊಳ್ಳುತ್ತಿದ್ದಾರೆ. ಇಂತಹ ದುಷ್ಟ ರಾಜಕಾರಣ, ವ್ಯವಸ್ಥೆಯ ವಿರುದ್ಧ ಜನರೇ ಸೂಕ್ತ ಪರ್ಯಾಯ ರಾಜಕೀಯ ವ್ಯವಸ್ಥೆ, ವೇದಿಕೆ ಕಂಡುಕೊಳ್ಳಬೇಕು. ಜನರಲ್ಲಿ ಜಾಗೃತಿ ಮೂಡಿಸುವ ಪ್ರಮುಖ ಉದ್ದೇಶದಿಂದ ಮಂಡ್ಯದಿಂದ ರಾಯಚೂರಿನವರೆಗೆ ಜನ ಪರ್ಯಾಯ ಕಟ್ಟೋಣ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. 

ಸಾಹಿತಿ ಡಾ| ಕಾಳೇಗೌಡ ನಾಗಾವರ ಮಾತನಾಡಿ, ಸಕಲರ ಹಿತ ಬಯಸುವರು ಇತಿಹಾಸದಲ್ಲಿ ಉಳಿಯುವರು ಎನ್ನುವುದಕ್ಕೆ ಬುದ್ಧ, ಬಸವಣ್ಣ, ಅಂಬೇಡ್ಕರ್‌ ಉದಾಹರಣೆಯಾಗಿದ್ದಾರೆ. ಇಂದಿನ ರಾಜಕಾರಣ, ವ್ಯವಸ್ಥೆಯ ವಿರುದ್ಧ ಮತ್ತೂಮ್ಮೆ ಪ್ರಾಮಾಣಿಕ, ಜನಪರ ಚಳವಳಿ ಕಟ್ಟುವ ಅಗತ್ಯತೆ ಇದೆ. ವ್ಯಾಪಾರಿ ಮನೋಭಾವದ ಪ್ರತೀಕವಾಗಿರುವ ಕೇಂದ್ರ, ರಾಜ್ಯ ಸರ್ಕಾರ ಅನ್ನದಾತರಿಗೆ ಏನೂ ಮಾಡುತ್ತಿಲ್ಲ.

ಜ್ವಲಂತ ಸಮಸ್ಯೆಗೆ ಸೂಕ್ತ ಪರಿಹಾರ, ಪರ್ಯಾಯ ವ್ಯವಸ್ಥೆ ಕಂಡುಕೊಳ್ಳಲು ಪ್ರಾರಂಭಿಸಿರುವ ಜಾಥಾ ಯಶಸ್ವಿಯಾಗಲಿಕ್ಕೆ ಜನರಭಾಗವಹಿಸುವಿಕೆ ಮುಖ್ಯ. ಈ ಸತ್ಯದ ಹೋರಾಟಕ್ಕೆ ಜಯ ಸಿಗಲಿದೆ ಎಂಬ ಆಶಯ ವ್ಯಕ್ತಪಡಿಸಿದರು. ರೈತ ಸಂಘದ ರಾಜ್ಯ ಅಧ್ಯಕ್ಷ ಕೆ.ಟಿ. ಗಂಗಾಧರ್‌ ಅಧ್ಯಕ್ಷತೆ ವಹಿಸಿದ್ದರು.

ಶಿವನಕೆರೆ ಬಸವಲಿಂಗಪ್ಪ, ಬಲ್ಲೂರು ರವಿಕುಮಾರ್‌, ಮಂಜುನಾಥ್‌ ಕುಕ್ಕುವಾಡ, ಹೆಗ್ಗೆರೆ ರಂಗಪ್ಪ, ಸತೀಶ್‌ ಅರವಿಂದ್‌, ಗುರುಮೂರ್ತಿ, ಜಬೀನಾಖಾನಂ, ಜ್ಯೋತಿ ಕುಕ್ಕುವಾಡ, ಮೌಲಾನಾಯ್ಕ, ವಾಸನದ ಓಂಕಾರಪ್ಪ, ಆದಿಲ್‌ಖಾನ್‌, ಚಂದ್ರಶೇಖರ ಮೇಟಿ ಇತರರು ಇದ್ದರು. ಹುರುಗುಲವಾಡಿ ರಾಮಯ್ಯ ಜಾಗೃತಿ ಗೀತೆ ಹಾಡಿದರು. ವೇದಿಕೆ ಕಾರ್ಯಕ್ರಮದ ಮುನ್ನ ನಗರದ ವಿವಿಧ ಭಾಗದಲ್ಲಿ ಜಾಥಾ ನಡೆಯಿತು. 

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.