ನಿಮ್ಮೊಂದಿಗೆ ಸದಾ ಇರುವೆ


Team Udayavani, May 22, 2018, 3:32 PM IST

dvg-1.jpg

ದಾವಣಗೆರೆ: ಬಿ.ಎಸ್‌. ಯಡಿಯೂರಪ್ಪ ಶನಿವಾರ ವಿಶ್ವಾಸ ಮತಯಾಚನೆಗೆ ಮುನ್ನವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಮನನೊಂದು ತೀವ್ರ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟಿದ್ದ ಚನ್ನಗಿರಿ ತಾಲೂಕು ಸಂತೇಬೆನ್ನೂರು ಗ್ರಾಮದ ಹುಣಸೆಮರದ ಚನ್ನಬಸಪ್ಪ ಮನೆಗೆ ಸೋಮವಾರ ಬಿ.ಎಸ್‌. ಯಡಿಯೂರಪ್ಪ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಇಳಕಲ್‌ನ ಡಾ| ಮಹಾಂತಶ್ರೀಗಳ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿ, ಹೆಲಿಕಾಪ್ಟರ್‌ನಲ್ಲಿ ಸಂತೇಬೆನ್ನೂರಿಗೆ ಆಗಮಿಸಿ
ಚನ್ನಬಸಪ್ಪ ಮನೆಗೆ ತೆರಳಿ ಪತ್ನಿ ರತ್ನಮ್ಮ, ಮಕ್ಕಳಾದ ನಾಗರಾಜ್‌ ಇತರರಿಗೆ ಅವರು ಸಾಂತ್ವನ ಹೇಳುವಾಗ ತೀವ್ರ ಭಾವುಕರಾದರು.

ಕೆಲ ಕಾಲ ಸಾವರಿಸಿಕೊಂಡ ನಂತರ ಅವರು, ನಿಮ್ಮೊಂದಿಗೆ ಸದಾ ಇರುವೆ ಎಂದು ಭರವಸೆ ತುಂಬಿದರು. ಅರ್ಧ ಗಂಟೆಗೂ ಹೆಚ್ಚು ಕಾಲ ಮನೆಯ ಸದಸ್ಯರೊಂದಿಗೆ ಚರ್ಚಿಸಿದರು.

ಮನೆಗೆ ತೆರಳುವ ಮುನ್ನ ಹೆಲಿಪ್ಯಾಡ್‌ನ‌ಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯರಾದ ಚನ್ನಬಸಪ್ಪನವರು ನನಗೆ ಅಧಿಕಾರ ಸಿಗಲಿಲ್ಲ ಅಂತ ಸುದ್ದಿ ಕೇಳಿ ಅಲ್ಲೇ ಸ್ಥಳದಲ್ಲೇ ಕುಸಿದು ದೈವಾಧೀನರಾಗಿದ್ದರು.
 
ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ದಾಗಿ ತಿಳಿಸಿದರು. ಯಡಿಯೂರಪ್ಪ ತೆರಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚನ್ನಬಸಪ್ಪ ಪತ್ನಿ ರತ್ನಮ್ಮ, ನಮ್ಮ ಮನೆಯವರು(ಚನ್ನಬಸಪ್ಪ) ಶನಿವಾರ ಟಿವಿ
ನೋಡುತ್ತಲೇ ಇದ್ದರು. ಯಡಿಯೂರಪ್ಪರಿಗೆ ಅಧಿಕಾರ ಸಿಗಲಿಲ್ಲ ಎಂದು ಬಹಳ ಬೇಜಾರು ಮಾಡಿಕೊಂಡಿದ್ದರು. ಹತ್ತು ನಿಮಿಷದಲ್ಲಿ ಇಷ್ಟೆಲ್ಲ ಆಗಿ ಹೋಯಿತು ಎಂದರು.

ಚನ್ನಬಸಪ್ಪ ಪುತ್ರ ಎಚ್‌.ಸಿ. ನಾಗರಾಜ್‌ ಮಾತನಾಡಿ, ನಮ್ಮ ಅಪ್ಪಾಜಿ ಶನಿವಾರ ಪೂರ್ತಿ ಟಿವಿ ಮುಂದೆಯೇ ಇದ್ದರು.
ಮಧ್ಯಾಹ್ನದವರೆಗೂ ಯಡಿಯೂರಪ್ಪ ಸರ್ಕಾರ ಇರುತ್ತದೆ ಎನ್ನುತ್ತಲೇ ಇದ್ದರು.

ಯಾವಾಗ ವಿಶ್ವಾಸಮತ ಸಿಗುವುದಿಲ್ಲ ಎಂಬುದು ಕೇಳಿ ಬಂದಿತೋ ಅವಾಗಿನಿಂದ ಒಂಥರ ಆಗಿದ್ದರು. ಯಡಿಯೂರಪ್ಪ ನವರು ಭಾಷಣ ಮಾಡುವಾಗ ಇದ್ದಕ್ಕಿದ್ದಂತೆ ಕೆಳಕ್ಕೆ ಬಿದ್ದರು. ಬರೀ 10 ನಿಮಿಷದಲ್ಲೇ ಅವರು ಮೃತಪಟ್ಟರು ಎಂದು ಆ ಕ್ಷಣ ಸ್ಮರಿಸಿದರು. ಚನ್ನಬಸಪ್ಪ ಪುತ್ರಿ ಸುಧಾ ಮಾತನಾಡಿ, ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆದಾಗಲೇ ನಮ್ಮ ಅಪ್ಪ(ಚನ್ನಬಸಪ್ಪ)ನ ಆತ್ಮಕ್ಕೆ ಶಾಂತಿ ಸಿಕ್ಕುತ್ತದೆ ಎಂದರು.

ಎಚ್‌ಡಿಕೆಗೆ ಧಿಕ್ಕಾರ…
ಹಂಗಾಮಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೆಲಿಕಾಪ್ಟರ್‌ನಿಂದ ಇಳಿಯುತ್ತಿದ್ದಂತೆ ನೂರಾರು ಜನರು
ಯಡಿಯೂರಪ್ಪಗೆ ಜೈ… ಏನೇ ಆಗಲಿ ನಾಲ್ಕನೇ ಟೈಮ್‌ ನೀವೇ ಮುಖ್ಯಮಂತ್ರಿ…. ಎಂಬ ಘೋಷಣೆ ಕೂಗಿದರು. ಕುಮಾರಸ್ವಾಮಿಗೆ ಧಿಕ್ಕಾರ… ಧಿಕ್ಕಾರ ಎಂದು ಜೋರಾಗಿ ಕೂಗಾಟ ಪ್ರಾರಂಭಿಸುತ್ತಿದ್ದಂತೆ ಖುದ್ದು ಯಡಿಯೂರಪ್ಪ ಅವರೇ ಸುಮ್ಮನಿರುವಂತೆ ಸನ್ನೆ ಮಾಡಿದರು. ಆದರೂ, ಕುಮಾರಸ್ವಾಮಿಗೆ ಧಿಕ್ಕಾರ ಎಂಬ ಘೋಷಣೆ ಮೊಳಗಿತು.
ಹಾಗೆಲ್ಲ ಕೂಗದಂತೆ ಯಡಿಯೂರಪ್ಪ, ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಸಂಜ್ಞೆ ಮಾಡಿದ ನಂತರ ಘೋಷಣೆ ನಿಂತವು.
 
ಕಿಕ್ಕಿರಿದ ಜನ…
ಚನ್ನಗಿರಿ ರಸ್ತೆಯಲ್ಲಿರುವ ಮೃತ ಚನ್ನಬಸಪ್ಪನವರ ಮನೆಗೆ ಯಡಿಯೂರಪ್ಪ ಸಾಂತ್ವನ ಹೇಳಲಿಕ್ಕೆ ಬಂದ ಮತ್ತು ಹೋಗುವ ಸಂದರ್ಭದಲ್ಲಿ ಜನ ಕಿಕ್ಕಿರಿದು ಜಮಾಯಿಸಿದ್ದರು. ಮುಗಿಲು ಮುಟ್ಟುವಂತೆ ಯಡಿಯೂರಪ್ಪ ಪರ ಘೋಷಣೆ ಕೂಗಿದರು. ಮೂರು ದಿನದಲ್ಲಿ ಅಧಿಕಾರ ಕಳೆದುಕೊಂಡಿರುವ ಯಡಿಯೂರಪ್ಪ ಪರ ಅನೇಕರು ಸಹಾನುಭೂತಿ ವ್ಯಕ್ತಪಡಿಸಿದರು. ಅಭಿಮಾನಿಯೊಬ್ಬರು, ನೀವೇ ಮತ್ತೆ ಮುಖ್ಯಮಂತ್ರಿ ಆಗಬೇಕು ಎಂದು ಕೈ ಮುಗಿದು ಬೇಡಿಕೊಂಡರು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. 

ಪ್ರತ್ಯೇಕ ರಾಜ್ಯದ ಕೂಗು…
ಮೃತ ಚನ್ನಬಸಪ್ಪ ನಿವಾಸದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಚನ್ನಗಿರಿ ಶಾಸಕ ಕೆ. ಮಾಡಾಳ್‌ ವಿರುಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ್‌ ಮಾಡಾಳ್‌, ಎಲ್ಲ ಅವಕಾಶಗಳು ಚಿತ್ರದುರ್ಗದ ಆಚೆ ಕಡೆ ಇರುವರಿಗೆ ಮಾತ್ರವೇ ಸಿಗುತ್ತಿವೆ. ಈ ಭಾಗದವರಿಗೆ ಅವಕಾಶ ಸಿಕ್ಕುತ್ತಿಲ್ಲ. ಸಿಕ್ಕರೂ ಬಿಡುತ್ತಿಲ್ಲ. ಏನೇ ಇದ್ದರೂ ದೇವೇಗೌಡ, ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್‌ ಅವರಿಗೇ ಆಗಬೇಕು. ಹಾಗಾಗಿ ಕೂಡಲೇ ದಾವಣಗೆರೆಗೆ ರಾಜಧಾನಿ ಬದಲಾವಣೆ ಮಾಡಬೇಕು. ಇಲ್ಲವೇ ಪ್ರತ್ಯೇಕ ರಾಜ್ಯವನ್ನೇ ಮಾಡಬೇಕು ಎಂದು ಒತ್ತಾಯಿಸಿ  ನಾಳೆ (ಮಂಗಳವಾರ) ಯಿಂದಲೇ ಹೋರಾಟ ಪ್ರಾರಂಭಿಸುತ್ತೇವೆ. ಚನ್ನಬಸಪ್ಪನವರ ಸಾವೇ ನಮ್ಮ ಹೋರಾಟಕ್ಕೆ ಮುನ್ನುಡಿ ಎಂದು ಆಕ್ರೋಶಭರಿತರಾಗಿ ಹೇಳಿದರು. 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.