ಎಲ್ಲ ಪಕ್ಷದವರಿಂದ ಅಂಬೇಡ್ಕರ್‌ ಸ್ಮರಣೆ


Team Udayavani, Apr 15, 2018, 5:38 PM IST

dvg.jpg

ದಾವಣಗೆರೆ: ಕಾಂಗ್ರೆಸ್‌ ಪಾಳಯದ ನಾಯಕರಿಗೆ ಹೈ ಕಮಾಂಡ್‌ ಯಾವಾಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೋ ಎಂಬ ಕಾತುರ, ಬಿಜೆಪಿಯವರಿಂದ ಮತಬೇಟೆ, ಜೆಡಿಎಸ್‌ ನಾಯಕರದ್ದು ಮನೆ ಮನೆಗೆ ತೆರಳಿ ಮತದಾರನ ಮನವೊಲಿಸುವ ಕಾರ್ಯ…. ಜತೆಗೆ ಎಲ್ಲಾ ರಾಜಕೀಯ ಪಕ್ಷಗಳ ಕಚೇರಿಯಲ್ಲಿ ಡಾ|ಬಿ.ಆರ್‌. ಅಂಬೇಡ್ಕರ್‌ ಅವರ 127ನೇ ಜಯಂತಿ ಆಚರಣೆ…. ಇವು ಶನಿವಾರ ಜಿಲ್ಲೆಯಲ್ಲಿ ನಡೆದ ಪ್ರಮುಖ ಬೆಳವಣಿಗೆ.

ವಿಧಾನಸಭಾ ಚುನಾವಣೆಗೆ ಶುಕ್ರವಾರ ರಾತ್ರಿ ಕಾಂಗ್ರೆಸ್‌ ಹುರಿಯಾಳುಗಳ ಮೊದಲ ಪಟ್ಟಿ ಬಿಡುಗಡೆ ಆಗಿದೆ ಎಂಬ ಸುದ್ದಿ ವಿದ್ಯುನ್ಮಾನ ಮಾಧ್ಯಮದಲ್ಲಿ ಪ್ರಸಾರವಾದ ಹಿನ್ನೆಲೆಯಲ್ಲಿ ಮಾಯಕೊಂಡ ಕಾಂಗ್ರೆಸ್‌ನಲ್ಲಿ ಇದ್ದಕ್ಕಿದ್ದಂತೆ ಚಟುವಟಿಕೆ ಗರಿಗೆದರಿದವು. ಮಾಯಕೊಂಡದಿಂದ ಜಿಲ್ಲಾ ಪಂಚಾಯತ್‌ ಸದಸ್ಯ ಕೆ.ಎಸ್‌. ಬಸವಂತಪ್ಪ ಕಾಂಗ್ರೆಸ್‌ ಅಭ್ಯರ್ಥಿ ಆಗಲಿದ್ದಾರಂತೆ. 

ಪಟ್ಟಿಯಲ್ಲಿ ಅವರ ಹೆಸರು ಮಾತ್ರ ಫೈನಲ್‌ ಆಗಿದೆಯಂತೆ ಎಂಬ ವದಂತಿ ಕ್ಷಣಮಾತ್ರದಲ್ಲಿ ಹರಿದಾಡಿತು. ಇದಕ್ಕೆ ಪುಷ್ಠಿ ನೀಡುವಂತೆ ಆಕಾಂಕ್ಷಿಗಳಾಗಿದ್ದ ಕೆಲ ಮುಖಂಡರು ಹ್ಯಾಪ್‌ ಮೋರೆ ಹಾಕಿಕೊಂಡು ಬೆಂಗಳೂರು, ದೆಹಲಿಯಿಂದ ವಾಪಸ್‌ ಆಗಿದ್ದರು. ಇದು ಶನಿವಾರ ಇಡೀ ದಿನ ಚರ್ಚೆಗೆ ಕಾರಣ ಆಯಿತು. ಮೂಲಗಳ ಪ್ರಕಾರ ಕಾಂಗ್ರೆಸ್‌ನ ಎಂಟು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದೆ. ಹಾಲಿ ಶಾಸಕರ ಪೈಕಿ ಓರ್ವರನ್ನು ಹೊರತುಪಡಿಸಿ, ಉಳಿದ ಎಲ್ಲಾ ಶಾಸಕರಿಗೆ ಟಿಕೆಟ್‌ ದೊರೆಯವುದು ಬಹುತೇಕ
ಖಚಿತ. 2 ಕಡೆ ಹೊಸ ಮುಖ ಕಣಕ್ಕಿಳಿಸಲು ನಿರ್ಧರಿಸಿದ್ದು, ಅಲ್ಲಿ ಉಂಟಾಗಬಹುದಾದ ಅಸಮಾಧಾನ ಸರಿಪಡಿಸಲು ಹೈ ಕಮಾಂಡ್‌ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಜವಾಬ್ದಾರಿ ನೀಡಿದೆ ಎಂದು ತಿಳಿದುಬಂದಿದೆ.

ಹಾಗಾಗಿಯೇ ಕೆಲ ದಿನಗಳಿಂದ ಬೆಂಗಳೂರು, ದೆಹಲಿಯಲ್ಲಿ ಬೀಡುಬಿಟ್ಟಿದ್ದ ಹಲವು ನಾಯಕರು ಶುಕ್ರವಾರ ರಾತ್ರಿ ವೇಳೆಗೆ
ಜಿಲ್ಲೆಗೆ ಆಗಮಿಸಿದ್ದಾರೆ. ಶನಿವಾರ ಬೆಳಗ್ಗೆಯಿಂದ ಮಲ್ಲಿಕಾರ್ಜುನ್‌, ಶಿವಶಂಕರಪ್ಪ ನಿವಾಸಕ್ಕೆ ಆಗಮಿಸಿ, ಟಿಕೆಟ್‌ಗಾಗಿ ಲಾಬಿ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನು ಬಿಜೆಪಿ ಪಾಳಯದಲ್ಲಿ ಅಭ್ಯರ್ಥಿ ಆಯ್ಕೆ ವಿಷಯಕ್ಕಿಂತ ಪ್ರಚಾರಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಬೆಳ್ಳಂಬೆಳಗ್ಗೆ ಪಕ್ಷದ ಜಿಲ್ಲಾಧ್ಯಕ್ಷ ಯಶವಂತರಾವ್‌ ಜಾಧವ್‌ ನೇತೃತ್ವದಲ್ಲಿ ಗಾಂಧಿನಗರದ ಅಂಬೇಡ್ಕರ್‌ ಪ್ರತಿಮೆ ಇರುವ ಸುತ್ತ ಮುತ್ತ ಸ್ವತ್ಛತಾ ಕಾರ್ಯದಲ್ಲಿ ಪಾಲ್ಗೊಂಡು, ನಂತರ ಮನೆ ಮನೆಗೆ ತೆರಳಿ ಮತಯಾಚಿಸಿದರು. ಸಂಜೆ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್‌ ಜಯಂತಿ ಆಚರಿಸಲಾಯಿತು. ಸಂಸದ ಜಿ.ಎಂ. ಸಿದ್ದೇಶ್ವರ್‌, ಇತರರು ಭಾಗಿಯಾಗಿದ್ದರು. ಜೆಡಿಎಸ್‌ ನಾಯಕರು, ಕಾರ್ಯಕರ್ತರು ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮದಲ್ಲಿ ನಿರತವಾಗಿದ್ದರು. ಇದರ ಜೊತೆಗೆ ಪಿ.ಜೆ. ಬಡಾವಣೆಯ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಅಂಬೇಡ್ಕರ್‌ ಜಯಂತಿ ಆಚರಿಸಿದರು.

ಹರಪನಹಳ್ಳಿಯಲ್ಲಿ ಮಾಜಿ ಸಚಿವ ಜಿ. ಕರುಣಾಕರ ರೆಡ್ಡಿ ಪ್ರಚಾರದ ಜೊತೆಗೆ ಅಂಬೇಡ್ಕರ್‌ ಜಯಂತಿ ಆಚರಿಸಿ, ಬಳ್ಳಾರಿಗೆ ಪ್ರಯಾಣ ಬೆಳೆಸಿದರು. ಶಾಸಕ ಎಂ.ಪಿ. ರವೀಂದ್ರ, ಬಿಜೆಪಿ ಟಿಕೆಟ್‌ ಆಕಾಂಕ್ಷಿ ಕೊಟ್ರೇಶ್‌ ಬೆಂಗಳೂರಲ್ಲೇ ಠಿಕಾಣಿ ಹೂಡಿದ್ದಾರೆನ್ನಲಾಗಿದೆ. ಹೊನ್ನಾಳಿಯಲ್ಲಿ ಶಾಸಕ ಡಿ.ಜಿ. ಶಾಂತನಗೌಡ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಪ್ರಚಾರ ಕೈಗೊಂಡರು. ಇದೇ ರೀತಿ ಚನ್ನಗಿರಿ, ಜಗಳೂರು, ಮಾಯಕೊಂಡದಲ್ಲೂ ಸಹ ಪ್ರಚಾರ ಭರಾಟೆ ಜೋರಾಗಿ ಇತ್ತು.

ಚುನಾವಣಾ ಕಾರ್ಯಕ್ಕೆ ನಿಯೊಜನೆಗೊಂಡಿರುವ ಅಧಿಕಾರಿಗಳು ಸಹ ಹಲವು ಕಾರ್ಯಗಳಲ್ಲಿ ತೊಡಗಿದ್ದರು. ಬೆಳ್ಳಂಬೆಳಗ್ಗೆ ಜಿಪಂ ಸಿಇಒ ಪ್ಯಾರಾಗ್ಲೆ$çಡಿಂಗ್‌ ಮೂಲಕ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮ ಚಾಲನೆ ನೀಡಿದರು. ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌. ರಾಜು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.