ಹಣೆಗೆ ಸಿಂಧೂರ-ಮತದಾನಕ್ಕೆ ಆಹ್ವಾನ ಪತ್ರ


Team Udayavani, Apr 8, 2018, 10:46 AM IST

dav-3.jpg

ಹೊಸಪೇಟೆ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಲವು ರೀತಿಯಲ್ಲಿ ಮತದಾನ ಜಾಗೃತಿ ಮೂಡಿಸುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯ ವಿಜಯನಗರ ಕ್ಷೇತ್ರದಲ್ಲಿ ಶನಿವಾರ ವಿನೂತನವಾಗಿ ಮತ ಜಾಗೃತಿ ಮಾಡಲಾಗಿದೆ. ಮತದಾರರಲ್ಲಿ ಮತದಾನ ಜಾಗೃತಿ ಮೂಡಿಸಲು ಮಹಿಳೆಯರ ಹಣೆಗೆ ಸಿಂಧೂರವನ್ನಿಟ್ಟು, ಮತದಾನದ ಕರೆಯೋಲೆ ನೀಡುವ ಮೂಲಕ ಮತದಾನದ ಮಹತ್ವ ತಿಳಿಸಲಾಗಿದೆ. ಈ ವಿನೂತನ ಕಾರ್ಯಕ್ರಮಕ್ಕೆ ಉಪವಿಭಾಗಾಧಿಕಾರಿ ಗಾರ್ಗಿ ಜೈನ್‌ ಅವರು ಶನಿವಾರ ಚಾಲನೆ ನೀಡಿ ತಪ್ಪದೆ ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ.

ನಗರದ ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನದ ಎದುರು ಮಹಿಳೆಯರ ಹಣೆಗೆ ತಿಲಕವಿಟ್ಟು ಮತದಾನದ ಮಮತೆಯ ಕರೆಯೋಲೆಯನ್ನು ಅವರು ವಿತರಿಸಿದ್ದಾರೆ. ನಂತರ ಮಾತನಾಡಿದ ಅವರು, ಎಲ್ಲಿ ಮತದಾನ ಕಡಿಮೆಯಾಗುತ್ತಿದೆ. ಆ ಮತಗಟ್ಟೆಯ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. 

ಪ್ರಜಾಪ್ರಭುತ್ವಕ್ಕೆ ನಿಮ್ಮ ಅಮೂಲ್ಯವಾದ ಮತ ಚಲಾಯಿಸಿ. ಯಾವುದೇ ಆಮಿಷಕ್ಕೆ ಒಳಗಾಗದೆ ಯೋಗ್ಯರನ್ನು ಆಯ್ಕೆ ಮಾಡಬೇಕು ಎಂದರು. ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ 18 ಸೆಕ್ಟರ್‌ಗಳಿದ್ದು, ಇದರಲ್ಲಿ 11 ಸೆಕ್ಟರ್‌ಗಳಲ್ಲಿ ಕ್ಷೇತ್ರಾದ್ಯಂತ 800 ಮಹಿಳೆಯರು ಮತದಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಪ್ರತಿ
ಸೆಕ್ಟರ್‌ಗೆ 50 ಜನ ಮಹಿಳೆಯರು ಕರೆಯೋಲೆ ಕರಪತ್ರಗಳೊಂದಿಗೆ ಸಿಹಿ ಹಂಚಿ, ಕುಂಕುಮ ಮತ್ತು ಹೂ ನೀಡಿ ಮೇ 12 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಮತಚಲಾಯಿಸಲು ಕೋರುತ್ತಿದ್ದಾರೆ ಎಂದರು.

18 ವರ್ಷದ ತುಂಬಿದ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ನಿಮ್ಮ ಮತ ಚಲಾಯಿಸುವ ಅಧಿಕಾರವನ್ನು ವ್ಯರ್ಥ ಮಾಡದೇ, ಯಾವುದೇ ಆಮಿಷಕ್ಕೆ ಒಳಗಾಗದೇ ತಪ್ಪದೇ ಹಾಗೂ ಹೆಮ್ಮೆಯಿಂದ ಮತ ಚಲಾಯಿಸಿಸಬೇಕು ಎಂದು ಹೇಳಿದರು. 

ಪೂರ್ಣಕುಂಭದೊಂದಿಗೆ ಕುಂಕುಮ, ಸಿಹಿ ಮತ್ತು ಹೂವುಗಳನ್ನು ಹೊತ್ತುಕೊಂಡು ನಾರಿಯರು ಮನೆಮನೆಗೆ ತೆರಳಿ ಮತದಾನದ ಮಮತೆಯ ಕರೆಯೋಲೆ ನೀಡುವುದರ ಮೂಲಕ ಮತದಾನದ ಜಾಗೃತಿ ಮೂಡಿಸಿದರು.
 
ತಹಶೀಲ್ದಾರ್‌ ಗಂಗಪ್ಪ, ತಾ.ಪಂ. ಇಒ ವೆಂಕೋಬಪ್ಪ, ಅಧಿಕಾರಿಗಳಾದ ಎಲ್‌.ಡಿ. ಜೋಷಿ, ಪ್ರಭಾಕರ್‌, ಕಿಶೋರ್‌, ರಾಜೇಂದ್ರ, ಮಂಜುನಾಥ್‌ ಇತರರಿದ್ದರು. 

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.