ಆಂಜನೇಯಸ್ವಾಮಿ ಪ್ರಾಣ ಪ್ರತಿಷ್ಠಾಪನೆ
Team Udayavani, Nov 10, 2018, 4:01 PM IST
ಮಾಯಕೊಂಡ: ದೇವಾಲಯ ಗಳು ಮನುಷ್ಯರ ನಡುವೆ ಭಾವೈಕ್ಯತೆ ಬೆಸೆಯುವ ಕೇಂದ್ರಗಳಾಗಿ ಕೆಲಸ ನಿರ್ವಹಿಸುತ್ತವೆ ಎಂದು ಕೋಲಾರದ ಜ್ಞಾನಾನಂದ ಆಶ್ರಮದ ಶಿವಾತ್ಮಾನಂದ ಸ್ವಾಮೀಜಿ ನುಡಿದರು. ಅವರು ಗ್ರಾಮದಲ್ಲಿ ಆಂಜನೆಯ ಸ್ವಾಮಿ ಮೂರ್ತಿ ಪ್ರಾಣ ಪ್ರತಿಷ್ಠಾಪನಾ
ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.
ಎಲ್ಲಾ ಸತ್ಕಾರ್ಯಗಳಿಗೆ ಭಗವಂತ ಪ್ರೇರಣೆ ಎಂದು ಭಾವಿಸಿ ನಾವು ಕೆಲಸ ಮಾಡಬೇಕು. ನಮಗೆ ಉಪಕಾರ ಮಾಡಿದವರನ್ನು ಎಂದಿಗೂ ಮರೆಯಬಾರದು ಎಂದರು. ಬೆಳಗ್ಗೆ ಗ್ರಾಮದ ಮತ್ತು ಸುತ್ತಮುತ್ತಲಿನ ದೇವತೆಗಳೊಂದಿಗೆ ಮಹಿಳೆಯರ ಪೂರ್ಣ ಕುಂಭ ಮೇಳ ನಡೆಯಿತು. ಹಲಗೆ,
ಡೊಳ್ಳು, ನಾದಸಿರಿ, ನಾಸಿಕುಡೊಳ್ಳು ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.
ಬ್ರಾಹ್ಮಿ ಮುಹೂರ್ತದಲ್ಲಿ ಆಂಜನೇಯ ಸ್ವಾಮಿ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಗ್ರಾಮದ ಮುಖಂಡರು, ದೇವಸ್ಥಾನ ಕಮಿಟಿ ಅಧ್ಯಕ್ಷರು ಸದಸ್ಯರು, ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು, ಸುತ್ತ ಮುತ್ತಲಿನ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಶಿವಾತ್ಮಾನಂದ ಸ್ವಾಮೀಜಿ, ವೀರೇಶ್ ಮತ್ತು ಕಟ್ಟಡ ನಿರ್ಮಾಣ ಉದ್ಯಮಿ ವೆಂಕಟಪ್ಪ ಪುರೋಹಿತ್, ವಿನಯರಾಜ್, ಮಹೇಶ್ ಮರಿಯಾಚಾರ್ ಅವರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ