ಬಾಣಸಿಗ ನೌಕರಿ ಆಯ್ಕೆಗೆ ಪಿಜಿ-ಪದವೀಧರರಿಂದ ಅರ್ಜಿ!


Team Udayavani, Jul 5, 2017, 3:23 PM IST

DAV-3.jpg

ದಾವಣಗೆರೆ: ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇದ್ದ ಅಡುಗೆಯವರು ಮತ್ತು ಅಡುಗೆ ಸಹಾಯಕಯರ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಕಲೆ, ವಾಣಿಜ್ಯ, ವಿಜ್ಞಾನ ಕಂಪ್ಯೂಟರ್‌ ಸೈನ್ಸ್‌ ಪದವಿ, ಬಿಇಡಿ, ಡಿಇಡಿ, ಐಟಿಐ…ಹೀಗೆ ಉನ್ನತ ವಿದ್ಯಾರ್ಹತೆ ಹೊಂದಿದವರೆಲ್ಲ ಅರ್ಜಿ ಸಲ್ಲಿಸುವ ಮೂಲಕ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಕೆಲಸ ಪಡೆಯುವುದು ಕಷ್ಟು. ಹಾಗಾಗಿ ಯಾವುದೇ ಕೆಲಸವಾಗಲಿ ಆಕಾಂಕ್ಷಿಗಳು ಸಿದ್ಧ ಎಂಬುದಕ್ಕೆ
ಸಾಕ್ಷಿಯಾಗಿದ್ದಾರೆ.

ಒಟ್ಟು 56 ಅಡುಗೆಯವರು ಮತ್ತು 92 ಅಡುಗೆ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಡುಗೆಯರಿಗೆ 2,197, ಅಡುಗೆ  ಸಹಾಯಕರ ಹುದ್ದೆಗೆ 4,688 ಅರ್ಜಿಗಳು ಬಂದಿದ್ದವು.ದಾಖಲಾತಿ ಪರಿಶೀಲನೆಯಲ್ಲಿ ಅರ್ಹರಾದ ಅಭ್ಯರ್ಥಿಗಳಲ್ಲಿ 1:3 ಅಭ್ಯರ್ಥಿಗಳನ್ನ ವಿವಿಧ ಅಡುಗೆ ತಯಾರಿಸುವ ಪ್ರಾಯೋಗಿಕ ಪರೀಕ್ಷೆಗೆ ಆಯ್ಕೆ
ಮಾಡಲಾಗಿತ್ತು. ಅಂತಹ ಪ್ರಾಯೋಗಿಕ ಪರೀಕ್ಷೆಗೆ ಹಾಜರಾದವರಲ್ಲಿ ಕೆಲವರ ವಿದ್ಯಾರ್ಹತೆ ಕೇಳಿದರೆ ಅಚ್ಚರಿಪಡುವಂತಿತ್ತು.  ಆದರೂ, ಸರ್ಕಾರಿ ಕೆಲಸ ಎಂಬ ಕಾರಣಕ್ಕೆ ಪದವಿ ಬದಿಗಿಟ್ಟ ಖುಷಿಯಾಗಿಯೇ ಮಂಗಳವಾರ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಅಡುಗೆ ತಯಾರಿಕೆ ಪ್ರಾಯೋಗಿಕ ಪರೀಕ್ಷೆಗೆ ಬಂದಿದ್ದರು.

ಮಾಧ್ಯಮದ ತಂಡ ಭೇಟಿ ನೀಡಿದಾಗ ಅಲ್ಲಿ ಯುವ ಬಾಣಸಿಗರ ದಂಡೇ ಕಂಡು ಬಂದಿತು. 30 ನಿಮಿಷದಲ್ಲಿ ನಿಗದಿತ ಅಡುಗೆ ತಯಾರಿಸಬೇಕಾದ ಹಿನ್ನೆಲೆಯಲ್ಲಿ ಲಗುಬಗೆಯಿಂದ ಅಡುಗೆ ತಯಾರಿಕೆಯಲ್ಲಿ ತೊಡಗಿದ್ದರು.
ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಚನ್ನಗಿರಿ ತಾಲ್ಲೂಕಿನ ಕೆರೆಕಟ್ಟೆಯ ಕಾಶೀನಾಥ್‌ ಅಡುಗೆಯವರು ಮತ್ತು ಅಡುಗೆ ಸಹಾಯಕರು ಎರಡೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದು ಅಡುಗೆಯವರ ಪ್ರಾಯೋಗಿಕ ಪರೀಕ್ಷೆಯಲ್ಲಿ ಉಪ್ಪಿಟ್ಟು ಸಿದ್ಧಪಡಿಸಿದ್ದರು. ಕೆಮಿಸ್ಟ್ರಿಯಲ್ಲಿ ಎಂಎಸ್ಸಿ ಮಾಡಿರುವ ದಾವಣಗೆರೆ ತಾಲೂಕಿನ ಗೋಪನಾಳ್‌ ಗ್ರಾಮದ ಉಮೇಶ್‌ ತರಕಾರಿ ಪಲ್ಯ ತಯಾರಿಸಿದ್ದರು, ನ್ಯಾಮತಿಯ ಬಿಎ ಪದವೀಧರ ಹನುಮಂತರಾವ್‌ ಅವಲಕ್ಕಿ, ಉಪ್ಪಿಟ್ಟು,
ಉಚ್ಚಂಗಿದುರ್ಗದ, ಕಂಪ್ಯೂಟರ್‌ ಸೈನ್ಸ್‌ ಪದವೀಧರ ಜಿ. ಸಂತೋಷ್‌ ರಾಗಿಮುದ್ದೆ, ಅಗ್ರಿ ಡಿಪ್ಲೋಮ ಪದವೀಧರೆ ಚನ್ನಗಿರಿಯ ಸುಪ್ರೀತಾ ಹಾಗೂ ಹಿರೇಕೋಗಲೂರಿನ ಲೋಹಿತ್‌ ಪಿಳಿಯೋಗರೆ ಮತ್ತು ಕೇಸರಿಬಾತ್‌ ತಯಾರಿಸಿದರು.

ಡಿಇಡಿ ಪೂರೈಸಿರುವ ಹಾವೇರಿಯ ಮಮತ ಮಲಗಾಂವ್‌, ಕಲಾ ಪದವಿಯೊಂದಿಗೆ ಡಿಇಡಿ ಮುಗಿಸಿರುವ ದಾವಣಗೆರೆಯ ಮಂಗಳಾ, ಗೌರಮ್ಮ, ಬಿಕಾಂ ಪದವೀಧರೆ ಎನ್‌.ಆರ್‌. ರಂಜಿತಾ, ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನ್ಸಿಕ್ಸ್‌ ಡಿಪ್ಲೋಮಾ ಮಾಡಿರುವ ರೇಣುಕಾ, ಬಳ್ಳಾರಿ ಜಿಲ್ಲೆಯ ಹುಲಿಕೆರೆಯ ಬಿಎಸ್ಸಿ ಪದವೀಧರೆ ಸ್ವಪ್ನ, ಬಿಎ ಡಿಎಡ್‌ ಪದವೀಧರೆ
ಚಿರಡೋಣಿಯ ಸೌಭಾಗ್ಯ, ಡಿಇಡಿ, ಬಿಎಸ್ಸಿ ಪದವೀದರೆ ಸೌಮ್ಯ… ಹೀಗೆ ಅನೇಕರು ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಿದ್ದರು. 

ಕೆರೆಕಟ್ಟೆಯ ಕಾಶೀನಾಥ್‌ ಮಾತನಾಡಿ, ಅಡುಗೆಯವರು ಮತ್ತು ಅಡುಗೆ ಸಹಾಯಕರ ಎರಡೂ ಹುದ್ದೆಗಳ ಪ್ರಾಯೋಗಿಕ ಪರೀಕ್ಷೆಯಲ್ಲಿ ಪಾಲ್ಗೊಂಡಿರುವುದು ಒಳ್ಳೆಯ ಅನುಭವ ಕೊಟ್ಟಿದೆ. ಎಂಎಸ್ಸಿ ಆದರೂ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ 
ಉದ್ಯೋಗ ಪಡೆಯುವುದು ಅಷ್ಟು ಸುಲಭವಿಲ್ಲ. ಯಾವುದೇ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದರೂ ಲಕ್ಷಾಂತರ ಮಂದಿ ಅರ್ಜಿ ಹಾಕುತ್ತಾರೆ ಮತ್ತು ಸ್ಪರ್ಧೆ ಹೆಚ್ಚಿರುತ್ತದೆ. ಅಡುಗೆ ಅಥವಾ ಅಡುಗೆ ಸಹಾಯಕರ ಹುದ್ದೆ ಯಾವುದರಲ್ಲಿ ಆಯ್ಕೆಯಾದರೂ
ಸಂತೋಷದಿಂದ ಕೆಲಸ ಮಾಡುತ್ತೇನೆ ಎಂದರು. 

ದಾವಣಗೆರೆ ಬಿಕಾಂ ಪದವೀಧರೆ ರಂಜಿತಾ ಮಾತನಾಡಿ, ಈ ಹಿಂದೆ ಪೊಲೀಸ್‌ ಇಲಾಖೆಯಲ್ಲಿ ಕೆಲಸಕ್ಕೆ ಪ್ರಯತ್ನಿಸಿದ್ದೆ. ಮನೆಯಲ್ಲಿ ಅಡುಗೆ ಮಾಡಿ ಅನುಭವವಿದ್ದು, ಈ ಹುದ್ದೆ ಲಭಿಸಿದಲ್ಲಿ ಕಷ್ಟವಾಗುವುದಿಲ್ಲ ಎಂದು ತಿಳಿಸಿದರು.

ಬಿಎಸ್ಸಿ ಜೊತೆಗೆ ಡಿಇಡಿ ಮಾಡಿರುವ ದಾವಣಗೆರೆ ತಾಲೂಕಿನ ಲೋಕಿಕೆರೆಯ ರಮೇಶ್‌ ಮಾತನಾಡಿ, ಪ್ರಸ್ತುತ ಬೆಂಗಳೂರಿನ ಇನ್ಫೋಸಿಸ್‌ನ ಬಿಪಿಒ ಸೆಂಟರ್‌ನಲ್ಲಿ ತಿಂಗಳಿಗೆ 22 ಸಾವಿರದ ಕೆಲಸ ಮಾಡುತ್ತಿದ್ದೇನೆ. ಸಾಕಷ್ಟು ಒತ್ತಡದಲ್ಲೇ ಕೆಲಸ ಮಾಡಬೇಕಾಗುತ್ತದೆ. ಅಡುಗೆ ಇಲ್ಲ ಅಂದರೆ ಅಡುಗೆ ಸಹಾಯಕರ ಕೆಲಸ ಸಿಕ್ಕರೆ ತುಂಬ
ಅನುಕೂಲವಾಗುತ್ತದೆ. ಕುಟುಂಬದವರನ್ನು ನೋಡಿಕೊಂಡು ಒತ್ತಡರಹಿತವಾಗಿ ಕೆಲಸ ಮಾಡುವ ಅವಕಾಶ ದೊರೆತಂತಾಗುತ್ತದೆ ಎಂದು ಹೇಳಿದರು. ಹೀಗೆ ಅನೇಕ ಪರೀಕ್ಷಾರ್ಥಿಗಳು ತಮ್ಮ ಅನಿಸಿಕೆ, ಅನುಭವ ಹಂಚಿಕೊಂಡರು.

ಈ ಹುದ್ದೆಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ನಿಗದಿಪಡಿಸಿದ್ದರೂ, ಅರ್ಜಿ ಹಾಕಿದವರಲ್ಲಿ ಬಹುತೇಕರು ಬಿಎ, ಬಿಎಸ್ಸಿ, ಬಿಕಾಂ, ಎಂಎ, ಎಂಎಸ್ಸಿ, ಬಿಎಡ್‌, ಡಿಎಡ್‌ ಸ್ನಾತಕ, ಸ್ನಾತಕೋತ್ತರ, ಡಿಪ್ಲೊಮಾ, ಐಟಿಐ ಸೇರಿದಂತೆ ಇಂಜಿನಿಯರಿಂಗ್‌
ಪದವೀಧರರೂ ಕೂಡ ಅರ್ಜಿ ಸಲ್ಲಿಸಿ, ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಿದ್ದು ಗಮನ ಸೆಳೆಯಿತು. ಮೂರು 
ಕೊಠಡಿಗಳಲ್ಲಿ ಎರಡು ಸಾಲುಗಳಲ್ಲಿ ತಲಾ ಹತ್ತು ಅಭ್ಯರ್ಥಿಗಳಂತೆ ಒಂದು ಕೊಠಡಿಯಲ್ಲಿ 20 ಜನರಿಗೆ ಅಡುಗೆ ತಯಾರಿಸಲು ಅವಕಾಶ ಕಲ್ಪಿಸಲಾಗಿದ್ದು, ಒಟ್ಟು ಮೂರು ಕೊಠಡಿಗಳಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಯಿತು. ಇಂದಿನ ಅಡುಗೆ ಸಹಾಯಕರ ಪರೀಕ್ಷೆಯಲ್ಲಿ 223 ಅಭ್ಯರ್ಥಿಗಳಲ್ಲಿ 211 ಅಭ್ಯರ್ಥಿಗಳು ಹಾಜರಾಗಿದ್ದರು.

ಪ್ರತಿ ಕೊಠಡಿಗೆ ಒಬ್ಬರು ನೋಡಲ್‌ ಅಧಿಕಾರಿ ಹಾಗೂ ಹೋಮ್‌ಸೈನ್ಸ್‌ ವಿಭಾಗದಿಂದ ಒಬ್ಬರು, ಪ್ರಾಂಶುಪಾಲರು, ವಿಸ್ತರಣಾಧಿ ಕಾರಿ ಮತ್ತು ವಾರ್ಡನ್‌ ಸೇರಿದಂತೆ ನಾಲ್ಕು ಜನ ಮೇಲ್ವಿಚಾರಕರನ್ನು ನೇಮಿಸಲಾಗಿತ್ತು.
ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಜಿಲ್ಲಾ ಮಟ್ಟದಲ್ಲಿ ನೇಮಕಾತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅ ಧಿಕಾರಿ ಮನ್ಸೂರ್‌ ಪಾಷಾ ಹೇಳಿದರು. 

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌. ಅಶ್ವತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿ. ನಜ್ಮಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬೇಬಿ ಸುನೀತಾ ಇತರರು ಇದ್ದರು.

ಟಾಪ್ ನ್ಯೂಸ್

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

1-qeewqewqewe

Naxal ಬೆದರಿಕೆ; ಪದ್ಮಶ್ರೀ ವಾಪಸ್‌: ನಾಟಿ ವೈದ್ಯ ಹೇಳಿಕೆ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ

Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

1-eewqewqeqwe

Davanagere; ಪೊಲೀಸ್ ಕಸ್ಟಡಿಯಲ್ಲಿದ್ದ ಅರೋಪಿ ಸಾವು: ಭಾರೀ ಹಿಂಸಾಚಾರ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

sensex

76,000 ಅಂಕ ತಲುಪಿದ್ದ ಬಿಎಸ್‌ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ

arrested

Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.