ಅಗತ್ಯ ಸಾಮಗ್ರಿ ವಿತರಣೆಗೆ ವ್ಯವಸ್ಥೆ: ಡಿಸಿ


Team Udayavani, Mar 30, 2020, 11:48 AM IST

ಅಗತ್ಯ ಸಾಮಗ್ರಿ ವಿತರಣೆಗೆ ವ್ಯವಸ್ಥೆ: ಡಿಸಿ

ದಾವಣಗೆರೆ: ಹಳೆ ಪಿಬಿ ರಸ್ತೆಯ ಖಾಲಿ ಜಾಗದಲ್ಲಿ ಬೀಡು ಬಿಟ್ಟಿರುವ ಹುಮನಾಬಾದ್‌ ಮೂಲದ ಕುಟುಂಬಗಳಿಗೆ ಭಾನುವಾರ ದಾವಣಗೆರೆಯ ಜೈನ್‌ ಫ್ರೆಂಡ್ಸ್‌ ಗ್ರೂಪ್‌ನಿಂದ ಪಡಿತರ ವಿತರಣೆ ಮಾಡಲಾಯಿತು. 5

ಕೆಜಿ ಅಕ್ಕಿ, ತಲಾ 1 ಕೆಜಿ ಹಿಟ್ಟು, ಬೇಳೆ, ಸಕ್ಕರೆ, 1 ಲೀಟರ್‌ ಎಣ್ಣೆ, 200 ಗ್ರಾಂ ಟೀಪುಡಿ, ಉಪ್ಪಿನ ಪಾಕೆಟ್‌, ಪೇಸ್ಟ್‌, ಬ್ರಷ್‌, 100 ಗ್ರಾಂ ಖಾರದಪುಡಿ, ಓಆರ್‌ಎಸ್‌ ಪುಡಿ… ಒಳಗೊಂಡಂತೆ 15 ಸಾಮಗ್ರಿಗಳ ಕಿಟ್‌ ಗಳನ್ನು ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ, ಕೊರೊನಾ ವೈರಸ್‌ ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರ ಲಾಕ್‌ ಡೌನ್‌ ಮಾಡಿರುವ ಸಂದರ್ಭದಲ್ಲಿ ಯಾರೂ ಸಹ ಉಪವಾಸದಿಂದ ಇರಬಾರದು ಎಂದು ಜಿಲ್ಲಾಡಳಿತ ಅಗತ್ಯ ಸಾಮಗ್ರಿ ವಿತರಿಸುವ ವ್ಯವಸ್ಥೆ ಮಾಡಿದೆ ಎಂದು ತಿಳಿಸಿದರು.

ದಾವಣಗೆರೆಯ ಜೈನ್‌ ಫ್ರೆಂಡ್ಸ್‌ ಗ್ರೂಪ್‌ನಿಂದ ಒಂದು ಕುಟುಂಬಕ್ಕೆ ಒಂದು ವಾರಕ್ಕೆ ಆಗುವಷ್ಟು ಅಗತ್ಯ ಸಾಮಗ್ರಿ ವಿತರಣೆ ಮಾಡಲಾಗಿದೆ. ಬಡವರು, ನಿರ್ಗತಿಕರು, ಅಸಹಾಯಕರೊಂದಿಗೆ ಸರ್ಕಾರ, ಜಿಲ್ಲಾಡಳಿತ, ದಾವಣಗೆರೆಯ ಜೈನ್‌ ಫ್ರೆಂಡ್ಸ್‌ ಗ್ರೂಪ್‌ನಂತಹ ಸಂಘ-ಸಂಸ್ಥೆಗಳು ಇವೆ. ಮುಂದೆಯೂ ಇದ್ದೇ ಇರುತ್ತವೆ ಎಂದು ಧೈರ್ಯ ತುಂಬಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಮಿಕ ಇಲಾಖೆ ಮಾಹಿತಿ ಪ್ರಕಾರ 200ಕ್ಕೂ ಹೆಚ್ಚು ನಿರ್ಗತಿಕ ಕುಟುಂಬಗಳಿವೆ. ಆ ಎಲ್ಲಾ ಕುಟುಂಬಗಳಿಗೆ ಜಿಲ್ಲಾಡಳಿತ ಅಗತ್ಯ ಸಾಮಗ್ರಿ ವಿತರಣೆಗೆ ವ್ಯವಸ್ಥೆ ಮಾಡಿದೆ. ದಾವಣಗೆರೆಯಲ್ಲಿನ 2 ಸಾವಿರಕ್ಕೂ ಅಧಿಕ ಕೂಲಿ ಕಾರ್ಮಿಕರು, ಅಸಂಘಟಿತ ವಲಯದ ಕಾರ್ಮಿಕರಿಗೂ ಸಹ ಅಗತ್ಯ ಸಾಮಗ್ರಿ ಒದಗಿಸಲಾಗುವುದು ಎಂದು ತಿಳಿಸಿದರು.

ಯಾವುದೇ ಸಂಘ-ಸಂಸ್ಥೆಗಳು ನೆರವಿಗೆ ಮುಂದಾದಲ್ಲಿ ಅರ್ಹರಿಗೆ ಅವುಗಳನ್ನು ತಲುಪಿಸುವ ವ್ಯವಸ್ಥೆಯನ್ನ ಜಿಲ್ಲಾಡಳಿತ ಮಾಡಲಿದೆ. ಹಣಕ್ಕಿಂತಲೂ ಅತೀ ಅಗತ್ಯವಾಗಿರುವ ಅಕ್ಕಿ, ಬೇಳೆ, ಬೆಲ್ಲ ಇತರೆ ಅವಶ್ಯಕ ವಸ್ತುಗಳನ್ನು ದಾನಿಗಳ ನಗರ ದಾವಣಗೆರೆಯ ಜನರು ನೀಡಬೇಕು. ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕೌಂಟರ್‌ನಲ್ಲೂ ನೀಡಬಹುದು. ಇಲ್ಲವೇ ಇಂತಹ ಪ್ರದೇಶದಲ್ಲಿ ವಿತರಣೆ ಮಾಡುತ್ತೇವೆ ಎಂದರೆ ಅಲ್ಲಿಯೂ ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಮೇಯರ್‌ ಬಿ.ಜಿ. ಅಜಯ್‌ ಕುಮಾರ್‌, ಜೈನ್‌ ಫ್ರೆಂಡ್ಸ್‌ ಗ್ರೂಪ್‌ನ ರಮಣ್‌ಲಾಲ್‌ ವಿ. ಸಂಘವಿ, ವಿಕಾಸ್‌ಕುಮಾರ್‌ ಸಂಘವಿ, ಕೆ.ಬಿ. ಪ್ರಕಾಶ್‌, ಧನ್‌ಪಾಲ್‌, ಕುಮಾರ್‌ ಪಾಲ್‌, ರಾಜೇಶ್‌, ಭರತ್‌, ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಘವೇಂದ್ರಸ್ವಾಮಿ, ಉಪ ವಿಭಾಗಾಧಿಕಾರಿ ಡಾ| ಮಮತಾ ಹೊಸಗೌಡರ್‌, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್‌ ಪಿ. ಮುದಜ್ಜಿ, ತಹಶೀಲ್ದಾರ್‌ ಜಿ. ಸಂತೋಷ್‌ಕುಮಾರ್‌, ಪ್ರಭುಸ್ವಾಮಿ, ಕಾರ್ಮಿಕಾಧಿಕಾರಿ ಇಬ್ರಾಹಿಂ ಸಾಬ್‌ ಇದ್ದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.