ದೇವನಗರಿಯಲ್ಲೂಅಸಾನ್‌ ಅಬ್ಬರ

ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಸಮಸ್ಯೆ

Team Udayavani, May 12, 2022, 12:30 PM IST

asan

ದಾವಣಗೆರೆ: ಅಸಾನ್‌ ಚಂಡಮಾರುತದ ಪರಿಣಾಮ ಜಿಲ್ಲಾ ಕೇಂದ್ರ ದಾವಣಗೆರೆಯಲ್ಲಿ ಬುಧವಾರ ಭಾರೀ ಮಳೆ ಸುರಿಯಿತು.

ಕಳೆದ ಎರಡು ದಿನಗಳಿಂದ ಮೋಡ ಮುಸುಕಿದ ವಾತಾವರಣ ಇತ್ತು. ಮಂಗಳವಾರ ರಾತ್ರಿ ಭರ್ಜರಿ ಮಳೆ ಸುರಿಯಿತು. ಬುಧವಾರ ಬೆಳಗ್ಗೆಯಿಂದಲೇ ತುಂತುರು ಮಳೆಯಾಗುತ್ತಿತ್ತು. ಜಯನಗರ, ನಿಟುವಳ್ಳಿ ಇತರೆ ಭಾಗದಲ್ಲಿ ಬಿರುಸಾಗಿ ಮಳೆ ಸುರಿದರೆ, ಇತರೆ ಭಾಗದಲ್ಲಿ ಆಗಾಗ ಮಳೆ ಬಂದಿತು.

ಮಧ್ಯಾಹ್ನ 2 ಗಂಟೆ ನಂತರ ಜೋರಾಗಿ ಮಳೆ ಸುರಿಯಲಾರಂಭಿಸಿತು. ಕೆಲವೇ ಹೊತ್ತಿನಲ್ಲಿ ರಸ್ತೆಗಳು ಸಂಪೂರ್ಣ ಮಳೆ ನೀರಿನಿಂದ ಮುಳುಗಿ ಹೋದವು. ವಿನೋಬನಗರ ಎರಡನೇ ಮುಖ್ಯ ರಸ್ತೆ, ಮೊದಲ ಮುಖ್ಯ ರಸ್ತೆ, ತೋಟಗಾರಿಕಾ ಇಲಾಖೆ, ಹಳೆ ಪಿ.ಬಿ. ರಸ್ತೆ, ಕೆ.ಬಿ. ಬಡಾವಣೆ, ನಿಟುವಳ್ಳಿ, ಹೊಂಡದ ವೃತ್ತ ಇತರೆ ಭಾಗದಲ್ಲಿ ಮಳೆ ನೀರು ನುಗ್ಗಿ ಬರುತ್ತಿದ್ದರಿಂದ ವಾಹನ ಸವಾರರು ಮುಂದೆ ಸಾಗಲು ಪರದಾಡಬೇಕಾಯಿತು.

ಮಹಾನಗರ ಪಾಲಿಕೆಯ ಮುಂದಿನ ರೈಲ್ವೆ ಕೆಳ ಸೇತುವೆಯಲ್ಲಿ ಭಾರೀ ಪ್ರಮಾಣದ ನೀರು ತುಂಬಿದ್ದರಿಂದ ಸಂಚಾರ ಸ್ಥಗಿತವಾಗಿತ್ತು. ರೇಣುಕ ಮಂದಿರದ ಪಕ್ಕ, ಶಿವಾಲಿ ಚಿತ್ರಮಂದಿರ, ಶೇಖರಪ್ಪ ನಗರ, ಡಿಸಿಎಂ ಟೌನ್‌ಶಿಪ್‌ ಬಳಿಯ ರೈಲ್ವೆ ಕೆಳ ಸೇತುವೆಯಲ್ಲೂ ಜನರು ಪ್ರಯಾಸಪಟ್ಟರು. ಸಾಕಷ್ಟು ಸಮಯ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

ದಾವಣಗೆರೆಯ ಕೆಲ ಭಾಗದಲ್ಲಿ ಜಲಸಿರಿ ಕಾಮಗಾರಿಗೆ ತೆಗೆದಿರುವ ಗುಂಡಿಗಳಲ್ಲಿ ಕಾರು, ಇತರೆ ವಾಹನ ಸಿಲುಕಿಕೊಂಡು ವಾಹನಗಳಲ್ಲಿದ್ದವರು ಹೊರ ಬರುವುದಕ್ಕೆ ತೀವ್ರ ತೊಂದರೆ ಅನುಭವಿಸುವಂತಾಯಿತು. ವಿನೋಬನಗರದ ಎರಡನೇ ಮುಖ್ಯ ರಸ್ತೆಯಲ್ಲಿ ಗುಂಡಿಯಲ್ಲಿ ಕಾರು ಸಿಕ್ಕಿಹಾಕಿಕೊಂಡಿದ್ದರಿಂದ ಕಾರಿನಲ್ಲಿದ್ದವರು ಅರ್ಧ ಗಂಟೆಗೂ ಹೆಚ್ಚು ಕಾಲ ಕಾರಿನಲ್ಲೇ ಉಳಿಯಬೇಕಾಯಿತು. ವಿಜಯನಗರ ಜಿಲ್ಲೆಯ ಕೊಟ್ಟೂರಿನ ಈಶ್ವರ ಗೌಡ ಎಂಬುವವರ ಕಾರು ಸಹ ಗುಂಡಿಯಲ್ಲಿ ಸಿಕ್ಕಿಕೊಂಡು ಕುಟುಂಬದವರು ತೀವ್ರ ಸಮಸ್ಯೆಗೀಡಾದರು. ಮಹಾನಗರ ಪಾಲಿಕೆ ಸದಸ್ಯ ಕೆ. ಪ್ರಸನ್ನಕುಮಾರ್‌ ಸ್ಥಳಕ್ಕೆ ಆಗಮಿಸಿ ಗುಂಡಿ ಮುಚ್ಚಿಸಿ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದರು. ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ನಂತರ ಬಿಡುವು ನೀಡಿತು.

ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು

ಎಸ್‌.ಎಂ. ಕೃಷ್ಣ ನಗರ, ಎಸ್‌.ಎಸ್. ಮಲ್ಲಿಕಾರ್ಜುನ ನಗರ, ಚೌಡೇಶ್ವರಿ ನಗರ, ಶಿವನಗರ, ಬೂದಾಳ್‌ ರಸ್ತೆ ಇತರೆ ಭಾಗದ ತಗ್ಗು ಪ್ರದೇಶದ ಜನರು ತೊಂದರೆ ಅನುಭವಿಸುವಂತಾಯಿತು. ಮಳೆ ನೀರು ಜೊತೆಗೆ ಚರಂಡಿ ನೀರು ಹರಿದು ಬಂದಿದ್ದರಿಂದ ಜನರು ಪರದಾಡುವಂತಾಯಿತು. ಅಲ್ಲಲ್ಲಿ ಮರದ ಕೊಂಬೆಗಳು ಸಹ ಬಿದ್ದ ಪರಿಣಾಮ ದಾರಿಹೋಕರು, ವಾಹನ ಸವಾರರಿಗೆ ತೊಂದರೆ ಎದುರಾಗಿತ್ತು.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.