ಅಥಣಿ ಶಿವಯೋಗಿಗಳು ಅಧ್ಯಾತ್ಮ ಕ್ಷೇತ್ರದ ಮೇರು ಪರ್ವತ


Team Udayavani, Jun 26, 2017, 12:38 PM IST

dvg3.jpg

ದಾವಣಗೆರೆ: ಬಸವಾದಿ ಶರಣರ ತತ್ವಗಳನ್ನ ಆಚರಿಸಿ, ತೋರಿಸಿದ ಅಥಣಿ ಶಿವಯೋಗಿಗಳು ಆಧ್ಯಾತ್ಮ ಕ್ಷೇತ್ರದ ಮೇರು ಪರ್ವತ ಎಂದು ದಾವಣಗೆರೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಬಣ್ಣಿಸಿದ್ದಾರೆ. ಭಾನುವಾರ ಶ್ರೀ ಶಿವಯೋಗಿ ಮಂದಿರದಲ್ಲಿ ಲಿ| ಶ್ರೀ ಅಥಣಿ ಮುರುಘೇಂದ್ರ ಮಹಾಶಿವಯೋಗಿಗಳವರ 182ನೇ ಜಯಂತಿ, ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಅಥಣಿ ಶಿವಯೋಗಿಗಳು ಪ್ರತಿಯೊಬ್ಬರಲ್ಲೂ ದೇವರನ್ನ ಕಂಡವರು. ಅಥಣಿ ಮಠವನ್ನು ಕಾಯಕ-ದಾಸೋಹ- ಸಮಾನತೆಯ ಮಠವನ್ನಾಗಿ ಪರಿವರ್ತಿಸಿದ ಮಹಾನ್‌ ಪರಿವರ್ತನೆಯ ಹರಿಕಾರರು ಎಂದು ತಿಳಿಸಿದರು. ಅಥಣಿ ಮುರುಘೇಂದ್ರ ಮಹಾಶಿವಯೋಗಿಗಳು ಪ್ರತಿ ದಿನ ಶಿವಯೋಗ ಮಾಡುವ ಮೂಲಕ ಮಹಾನ್‌ ಶಿವಯೋಗಿಗಳಾದವರು. ಅವರಲ್ಲಿ ಬೇಡಿ ಬಂದವರ ಸಮಸ್ಯೆಗೆ ಪರಿಹಾರ ನೀಡಿದವರು.

ಅಂತವರು ಸಾಗಿ ಬಂದ ಶಿವಯೋಗದ ಹಾದಿಯಲ್ಲಿ ಮುನ್ನಡೆದರೆ ಮನಸ್ಸಿಗೆ ಶಾಂತಿ ದೊರಕುತ್ತದೆ. ವಿಶೇಷವಾಗಿ ಏಕಾಗ್ರತೆ ಲಭಿಸುತ್ತದೆ ಎಂದು ತಿಳಿಸಿದರು. ಪ್ರತಿಭೆ ಎನ್ನುವುದು ಸಾಧಕರ ಸ್ವತ್ತು. ಪ್ರತಿಯೊಬ್ಬರೂ ಪ್ರತಿಭಾವಂತರು. ಅದನ್ನು ನಾವೇ ಗುರುತಿಸಿಕೊಂಡು ನಮಗೆ ಆಸಕ್ತಿ ಇರುವ ಕಡೆ ಅಧ್ಯಯನದಲ್ಲಿ ತೊಡಗುವ ಮೂಲಕ ಬೆಳೆಯಬೇಕು.

ದರಿದ್ರತನ ದೂರ ಮಾಡಿ ಸತತ ಅಧ್ಯಯನ ನಡೆಸುವುದರಿಂದ ಜೀವನದ ಗುರಿ ತಲುಪಬಹುದು ಎನ್ನುವುದಕ್ಕೆ ಕೆಎಎಸ್‌ನಲ್ಲಿ 7ನೇ ರ್‍ಯಾಂಕ್‌ ಪಡೆದಿರುವ ಪ್ರಿಯದರ್ಶಿನಿ ಸಾಣಿಕೊಪ್ಪಅವರೇ ಸಾಕ್ಷಿ. ಎಲ್ಲಾ ಮಕ್ಕಳು ಉನ್ನತ ಸಾಧನೆ ಮಾಡಲಿಕ್ಕೆ ಸಾಧ್ಯ ಎಂದು ತಿಳಿಸಿದರು. ವಿಧಾನ ಪರಿಷತ್‌ ಸದಸ್ಯ ಕೆ. ಅಬ್ದುಲ್‌ ಜಬ್ಟಾರ್‌ ಮಾತನಾಡಿ, ಡಾ| ಶಿವಮೂರ್ತಿ ಮುರುಘಾ  ಶರಣರು ಪ್ರಗತಿಪರ ಚಿಂತನೆಯವರು ನುಡಿದಂತೆನಡೆಯುತ್ತಿರುವರು.

ಇಂದಿನ ವಾತಾವರಣದಲ್ಲಿ ವಿದ್ಯಾರ್ಥಿ ನಿಯರು ಚೆನ್ನಾಗಿ ಓದುತ್ತಿದ್ದಾರೆ. ಎಲ್ಲಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ದೇಶದಲ್ಲಿ ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚಾಗುತ್ತಿರುವುದು ನಿಜಕ್ಕೂ ದುಖಃಕರ ವಿಚಾರ. ಒಂದರ್ಥದಲ್ಲಿ ಮಹಿಳೆಯರು ಕಾರಣವಾಗುತ್ತಿದ್ದಾರೆ. ಸೊಸೆ ಅತ್ತೆ-ಮಾವನನ್ನು ತಂದೆ-ತಾಯಿ ಎಂದು ಭಾವಿಸದೇ ಇರುವುದು. ಅತ್ತೆ-ಮಾವ ಸೊಸೆಯನ್ನು ಮಗಳಂತೆ ನೋಡಿಕೊಳ್ಳದೇ ಇರುವಂತಹ ಭಾವನೆಯಿಂದ ಸಾಕಷ್ಟು ಜಗಳ ಆಗುತ್ತಿವೆ.

ತಂದೆ-ತಾಯಂದಿರು ಹೆಣ್ಣು ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿ, ಹಿರಿಯರ ಬಗ್ಗೆ ಗೌರವ ಭಾವನೆ ಬೆಳೆಸಬೇಕು ಎಂದು ತಿಳಿಸಿದರು. ಸನ್ಮಾನ ಸೀÌಕರಿಸಿದ 2014ನೇ ಸಾಲಿನ 7ನೇ ರ್‍ಯಾಂಕ್‌ ವಿಜೇತ ಪ್ರಿಯದರ್ಶಿನಿ ಸಾಣಿಕೊಪ್ಪ ಮಾತನಾಡಿ, ದಾವಣಗೆರೆಯ ಶಿವಯೋಗಿ ಮಂದಿರದಲ್ಲಿ ಪಡೆಯುತ್ತಿರುವ 42ನೇ ಸನ್ಮಾನ ತಮಗೆ ತುಂಬಾ ಖುಷಿ ತಂದಿದೆ. ನಾನು 9ನೇ ತರಗತಿಯಿಂದಲೇ ಶಿವಯೋಗದಲ್ಲಿ ತೊಡಗಿಸಿಕೊಂಡಿದ್ದರಿಂದ ಇಷ್ಟೆಲ್ಲಾ ಸಾಧನೆಗೆ ಕಾರಣವಾಯಿತು.

ಶಿವಯೋಗ ಎನ್ನುವುದು ಯಾವುದೇ ಜಾತಿ, ಧರ್ಮಕ್ಕೆ ಸಂಬಂಧಪಟ್ಟಿದ್ದಲ್ಲ. ಅದೊಂದು ವೈಜ್ಞಾನಿಕ ಮಾರ್ಗ. ಪ್ರತಿ ದಿನ ಶಿವಯೋಗ ಮಾಡಿದ್ದರ ಫಲವಾಗಿಯೇ ದಿನಕ್ಕೆ 16-18 ಗಂಟೆ ನಿರಂತರವಾಗಿ ಓದಲಿಕ್ಕೆ ಸಾಧ್ಯವಾಯಿತು. ತಮ್ಮ ಸಾಧನೆಗೆ ಬಸವತತ್ವವೇ ಕಾರಣ ಎಂದು ತಿಳಿಸಿದರು. 

ಇಂಜಿನಿಯರ್‌, ಡಾಕ್ಟರ್‌, ಐಎಎಸ್‌, ಐಪಿಎಸ್‌, ಕೆಎಎಸ್‌ ಅಧಿಕಾರಿ ಏನೇ ಆಗಿರಲಿ ಮೊದಲು ಮಾನವೀಯತೆಯುಳ್ಳವರಾಗಿರಬೇಕು. 2016ರ ಸಮೀಕ್ಷೆ ಪ್ರಕಾರ ದೇಶದಲ್ಲಿ 68 ಸಾವಿರ ವೃದ್ಧಾಶ್ರಮ ಇವೆ. ಅವುಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಇರುವಂತಹವರು ಉನ್ನತ ಹುದ್ದೆ, ಅಧಿಕಾರದಲ್ಲಿದ್ದಂತಹವರ ತಂದೆ-ತಾಯಿ ಎಂಬುದು ನಿಜಕ್ಕೂ ಆತಂಕ ಪಡಬೇಕಾದ ವಿಚಾರ. ಏನೇ ಆಗಲಿ ಮಾನವೀಯತೆ ಮರೆಯಬಾರದು ಎಂದರು.

ಶ್ರೀ ಹಾಲಸ್ವಾಮಿ, ಶ್ರೀ ಬಸವ ಕೇತೇಶ್ವರ ಸ್ವಾಮೀಜಿ, ಡಾ| ಜಿ.ಸಿ. ಬಸವರಾಜ್‌, ಪಲ್ಲಾಗಟ್ಟೆ ಕೊಟ್ರೇಶ್‌, ಜೆ. ಸೋಮನಾಥ್‌ ಇತರರು ಇದ್ದರು. ಬಸವ ಕಲಾ ಲೋಕದ ಕಲಾವಿದರು ಪ್ರಾರ್ಥಿಸಿದರು. ದಮಯಂತಿಗೌಡ ಸ್ವಾಗತಿಸಿದರು. ಶಿವಕುಮಾರ್‌ ನಿರೂಪಿಸಿದರು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 

ಟಾಪ್ ನ್ಯೂಸ್

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.