ಬರದನಾಡು ಜಲದ ನಾಡಾಗಿಸಲು ಬದ್ಧ

ಭದ್ರೆ ನೀರಿಗೆ ರೈತರ ಬೆವರು ಸೇರಿದರೆ ಬಂಗಾರದ ಬೆಳೆ

Team Udayavani, Apr 30, 2022, 1:22 PM IST

bhadra

ದಾವಣಗೆರೆ: ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಕೆರೆಗಳನ್ನು ತುಂಬಿಸಿದರೆ ಬರದನಾಡು ಜಲದ ನಾಡಾಗಿ ಪರಿವರ್ತನೆಯಾಗಲಿದೆ. ಭದ್ರೆಯ ನೀರಿಗೆ, ರೈತರ ಬೆವರು ಸೇರಿಸಿದರೆ ಬಂಗಾರದ ಬೆಳೆ ಬೆಳೆಯಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶುಕ್ರವಾರ ಜಿಲ್ಲೆಯ ಜಗಳೂರಿನಲ್ಲಿ ನಡೆದ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಸೇರಿದಂತೆ ವಿಧಾನಸಭೆ ಕ್ಷೇತ್ರದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಭದ್ರಾ ಮೇಲ್ದಂಡೆ ಯೋಜನೆಗಾಗಿ ಸಾಕಷ್ಟು ಹೋರಾಟಗಳು ನಡೆದರೂ ಕಾಮಗಾರಿ ಆಗಿರಲಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದಾಗ ದಿಟ್ಟ ನಿಲುವು ಪ್ರಕಟಿಸಿ, ಯೋಜನೆಗೆ ಹಣಕಾಸು ಕೊಡುವ ತೀರ್ಮಾನ ಮಾಡಿದರು. ಬಳಿಕ ಯೋಜನೆಗಾಗಿ 2.4ಟಿಎಂಸಿ ಅಡಿ ನೀರು ಕೊಡಲು ತೀರ್ಮಾನ ಮಾಡಿದರು. ಈಗ ಬರೋಬರಿ 18 ಸಾವಿರ ಹೆಕ್ಕೇರ್‌ ಪ್ರದೇಶಕ್ಕೆ ಹನಿ ನೀರಾವರಿ ಒದಗಿಸುವ ಅಂದಾಜು 1400 ಕೋಟಿ ರೂ.ಗಳ ಯೋಜನೆಗೆ ಚಾಲನೆ ದೊರಕಿದೆ. ಇದಲ್ಲದೇ 57ಕೆರೆ ತುಂಬಿಸುವ ಯೋಜನೆ ಜಾರಿಯಾಗುತ್ತಿದ್ದು ಇದರಿಂದ ಮಧ್ಯ ಕರ್ನಾಟಕ ಭಾಗದಲ್ಲಿ ಜಲಕ್ರಾಂತಿ ಆಗಲಿದೆ ಎಂದರು.

ರಾಜ್ಯ ಸರ್ಕಾರ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದ್ದು 20ಸಾವಿರ ಕೋಟಿ ರೂ. ನೀರಾವರಿಗಾಗಿ ನೀಡುತ್ತಿದೆ. ಎತ್ತಿನಹೊಳೆ ಯೋಜನೆಗೆ ಕಾಯಕಲ್ಪ ನೀಡಲು ಮೂರು ಸಾವಿರ ಕೋಟಿ ರೂ. ಮೀಸಲಿರಿಸಲಾಗಿದೆ. ಅಪೂರ್ಣವಾಗಿರುವ ಯೋಜನೆಗಳನ್ನು ಗುರುತಿಸಿ ಅವುಗಳಿಗೆ ಕಾಯಕಲ್ಪ ಕೊಡಲು ಆದ್ಯತೆ ನೀಡಲಾಗುತ್ತಿದೆ ಎಂದರು. ಚೈನ್ಯ ಕಾರಿಡಾರ್‌ ಮೂಲಕ ದಾವಣಗೆರೆ ಸೇರಿದಂತೆ ಐದು ಜಿಲ್ಲೆಗಳಲ್ಲಿ ಕೈಗಾರಿಕೆ ಅಭಿವೃದ್ಧಿ ಮೂಲಕ ಉದ್ಯೋಗ ಸೃಷ್ಟಿಗೆ ಕ್ರಮವಹಿಸಲಾಗಿದೆ. ಇದರಿಂದ ಕೃಷಿ ಕ್ರಾಂತಿಯ ಜತೆಗೆ ಕೈಗಾರಿಕಾ ಕ್ರಾಂತಿಯೂ ಆಗಲಿದೆ. ದಾವಣಗೆರೆ ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್‌ ಕಾಲೇಜು ಸ್ಥಾಪಿಸಲಾಗುವುದು. ತುಮಕೂರು- ದಾವಣಗೆರೆ ರೈಲ್ವೆಗೆ ಅಡಿಗಲ್ಲನ್ನು ಕೇಂದ್ರ ಸಚಿವರಿಂದ ಪ್ರಾರಂಭಿಸಲಾಗುವುದು. ಇದರಿಂದ ಆರ್ಥಿಕ ಕ್ರಾಂತಿಯೂ ಆಗಲಿದೆ. ಹೀಗೆ ಸರ್ಕಾರ, ಮಧ್ಯ ಕರ್ನಾಟಕದ ಬಗ್ಗೆ ವಿಶೇಷ ಕಳಕಳಿ ಹೊಂದಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದರು.

ಸರ್ಕಾರ ಪರಿಶಿಷ್ಟ ಜಾತಿ, ಪಂಗಡದವರಿಗೆ 75ಯೂನಿಟ್‌ ವರೆಗೆ ಉಚಿತ ವಿದ್ಯುತ್‌, ಮನೆ ಕಟ್ಟಿಕೊಳ್ಳುವರಿಗೆ ಎರಡು ಲಕ್ಷ ರೂ. ವರೆಗೆ ಸಹಾಯಧನ ನೀಡುತ್ತಿದೆ. ರೈತ ಮಕ್ಕಳಿಗೆ ಸ್ಕಾಲರ್‌ಶಿಪ್‌, ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಾಲ, ಹಾಲು ಉತ್ಪಾದಕರಿಗಾಗಿ ಪ್ರತ್ಯೇಕ ಬ್ಯಾಂಕ್‌, ಮಹಿಳೆಯರ ಸಬಲೀಕರಣಕ್ಕಾಗಿ ಸ್ವಸಹಾಯ ಸಂಘಗಳಿಗೆ ಸಹಾಯ, ಕರಕುಶಲಕರ್ಮಿಗಳಿಗೆ, ಹಿರಿಯ ನಾಗರಿಕರಿಗೆ ಹೀಗೆ ಹಲವು ಸೌಲಭ್ಯಗಳನ್ನು ಬಜೆಟ್‌ ಮೂಲಕ ನೀಡಲಾಗುತ್ತಿದ್ದು ಬಜೆಟ್‌ನ ಎಲ್ಲ ಕಾರ್ಯಕ್ರಮ ಅನುಷ್ಠಾನಕ್ಕೆ ಆಜ್ಞೆ ಮಾಡಲಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದ್ದು ಭಾರತದಲ್ಲಿ ಕರ್ನಾಟಕವನ್ನು ನಂಬರ್‌ ಒನ್‌ ಮಾಡಲು ಸಂಕಲ್ಪ ಮಾಡಿದ್ದೇವೆ. ಸರ್ವಸ್ಪರ್ಶಿ, ಸರ್ವವ್ಯಾಪಿ ಸಂಕಲ್ಪದೊಂದಿಗೆ ನವ ಕರ್ನಾಟಕದಿಂದ ನವಭಾರತ ನಿರ್ಮಿಸಲು ನಾವು ಮುಂದುವರೆಯುತ್ತಿದ್ದೇವೆ ಎಂದರು.

ಬರನಾಡು ಆಗಲಿದೆ ಮಲೆನಾಡು

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಾತನಾಡಿ, ಭದ್ರಾಯೋಜನೆ ಸಾಕಾರದ ಕನಸು ಈಗ ಸಾಕಾರವಾಗಿದೆ. ಕೆರೆಗಳನ್ನು ತುಂಬಿಸುವ ಯೋಜನೆಯಿಂದ ಜಗಳೂರಿಗೆ ಇರುವ ಬರದನಾಡು ಎಂಬ ಹಣೆಪಟ್ಟಿ ಹೋಗಲಿದ್ದು ಮಲೆನಾಡು ರೀತಿಯಲ್ಲಿ ಹಸಿರಾಗಲಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಭದ್ರಾ ಮೇಲ್ದಂಡೆ ಯೋಜನೆಯ ವಿಶೇಷ ಅನುದಾನ ನೀಡಲಾಗಿತ್ತು. ಈಗ ಯೋಜನೆ ಮೂಲಕ ಕೆರೆಗಳನ್ನು ತುಂಬಿಸುವ ಮೂಲಕ ಸಾವಿರಾರು ಎಕರೆ ಕೃಷಿ ಭೂಮಿಗೆ ನೀರಾವರಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದರು.

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವ ಗೋವಿಂದ ಕಾರಜೋಳ, ಆರ್‌. ಅಶೋಕ, ಶೀರಾಮುಲು, ಮುರುಗೇಶ ನಿರಾಣಿ, ಭೈರತಿ ಬಸವರಾಜ, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಸ್‌. ವಿ. ರಾಮಚಂದ್ರ, ರೇಣುಕಾಚಾರ್ಯ, ಮಾಡಾಳ್‌ ವಿರುಪಾಕ್ಷಪ್ಪ, ಪ್ರೊ. ಲಿಂಗಣ್ಣ, ಎನ್‌. ರವಿಕುಮಾರ್‌, ಕೆ.ಎಸ್. ನವೀನ್‌, ನಾರಾಯಣಸ್ವಾಮಿ ಇನ್ನಿತರರು ಕಾರ್ಯಕ್ರಮದಲ್ಲಿದ್ದರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.