ಜಗಳೂರು ಗಡಿಯಲ್ಲಿ ಕರಡಿ ಪ್ರತ್ಯಕ್ಷ
Team Udayavani, Jan 27, 2020, 11:30 AM IST
ಭರಮಸಾಗರ: ಚಿತ್ರದುರ್ಗ ತಾಲೂಕಿನ ಗಡಿ ಗ್ರಾಮ, ಜಗಳೂರು ತಾಲೂಕು ಸಮೀಪದ ಆಜಾದ್ ನಗರದಲ್ಲಿ ಭಾನುವಾರ ಮಧ್ಯಾಹ್ನ ಕರಡಿ ಕಾಣಿಸಿಕೊಂಡಿದ್ದು, ರೇಷ್ಮೆ ಜಮೀನಿನ ಬಳಿಯ ಬೇವಿನ ಮರವೇರಿ ಕುಳಿತು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ಭಾನುವಾರ ಮಧ್ಯಾಹ್ನ ರೇಷ್ಮೆ ಜಮೀನಿನಲ್ಲಿ ನೀರು ಹಾಯಿಸುತ್ತಿದ್ದ ರೈತನಿಗೆ ಮೊದಲು ಕರಡಿ ಕಾಣಿಸಿಕೊಂಡಿದೆ. ಇದನ್ನು ಕಂಡು ಅಕ್ಕಪಕ್ಕದ ಜಮೀನುಗಳಲ್ಲಿ ಇದ್ದ ರೈತರನ್ನು ಕೂಗಿ ಕರೆದು ಕರಡಿಯನ್ನು ಓಡಿಸಲು ಪ್ರಯತ್ನಿಸಿದ್ದಾರೆ. ತಕ್ಷಣ ಕರಡಿ ರೇಷ್ಮೆ ಜಮೀನಿನ ಬಳಿ ಇದ್ದ ಬೇವಿನ ಮರವೇರಿ ಕುಳಿತಿದೆ. ಜನರು ಎಷ್ಟೇ ಪ್ರಯತ್ನಿಸಿದರೂ ಕರಡಿ ಮರದಿಂದ ಕೆಳಗಿಳಿಯಲಿಲ್ಲ. ಅದು ಕೂಡ ಭಯಪಟ್ಟಂತೆ ಕಂಡುಬಂದಿದೆ.
ಕರಡಿ ಮರವೇರಿರುವ ಸುದ್ದಿ ಅಕ್ಕಪಕ್ಕದ ಹಳ್ಳಿಗಳಿಗೂ ಹರಡಿ ನೆಲ್ಲಿಕಟ್ಟೆ, ಕಾಲಗೆರೆ, ಗೊಲ್ಲರಹಳ್ಳಿ, ಇಸಾಮುದ್ರ ಹೊಸಹಟ್ಟಿ ಸೇರಿದಂತೆ ಇತರೆ ಹಳ್ಳಿಗಳ ಯುವಕರು ಬಂದು ನೋಡಿಕೊಂಡು ಹೋಗುತ್ತಿದ್ದಾರೆ. ಆಜಾದ್ ನಗರದ ನೂರಕ್ಕೂ ಹೆಚ್ಚು ಯುವಕರು ಕರಡಿ ಕುಳಿತಿರುವ ಮರದ ಬಳಿ ಜಮಾಯಿಸಿದ್ದಾರೆ. ಕರಡಿ ಕಾಣಿಸಿಕೊಂಡಿದ್ದರಿಂದ ಊರ ಅಂಚಿನಲ್ಲಿ ಮಹಿಳೆಯರು ಮನೆ ಬಿಟ್ಟು ಹೊರ ಬರಲು ಹೆದರುತ್ತಿದ್ದಾರೆ. ಕರಡಿ ಮರವೇರಿದ ವಿಷಯವನ್ನು ಗ್ರಾಮಸ್ಥರು ಅರಣ್ಯ ಇಲಾಖೆಗೆ ತಿಳಿಸಿದರು. ಸಂಜೆ ವೇಳೆಗೆ ಉಪ ವಲಯ ಅರಣ್ಯಾಧಿಕಾರಿ ರುದ್ರಮುನಿ ಸ್ಥಳಕ್ಕೆ ಆಗಮಿಸಿರುವುದನ್ನು ಬಿಟ್ಟರೆ ಯಾವುದೇ ಸಿಬ್ಬಂದಿ ಇತ್ತ ಸುಳಿದಿಲ್ಲ. ಈ ಬಗ್ಗೆ ರುದ್ರಮುನಿಯವರನ್ನು ಪ್ರಶ್ನಿಸಿದಾಗ, ಚಿತ್ರದುರ್ಗದಿಂದ ವಾಚರ್ಗಳು ಬರುತ್ತಿದ್ದಾರೆ. ಮರದ ಸುತ್ತ ಬಲೆಯನ್ನು ಹಾಕಿ ಕರಡಿಯನ್ನು ಜೀವಂತವಾಗಿ ಸೆರೆ ಹಿಡಿದು ಕಾಡಿಗೆ ಬೀಡುವ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.
ಕೊಣಚಕಲ್ಲು ಗುಡ್ಡದಿಂದ ಕರಡಿಗಳು ಬರುತ್ತಿರುತ್ತವೆ. ಕಳೆದ ಎರಡು ತಿಂಗಳಿಂದ ನಿತ್ಯ 8-10 ಕರಡಿಗಳು ರೈತರಿಗೆ ಕಾಣಸಿಗುತ್ತಿವೆ. ಜಮೀನುಗಳಿಗೆ ರಾತ್ರಿ ವೇಳೆ ನೀರು ಹಾಯಿಸಲು ತೆರಳಲು ರೈತರು ಭಯ ಪಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕರಡಿಯನ್ನು ಹೊಡೆದು ಸಾಯಿಸಲು ಬಿಡಲ್ಲ ಎಂದು ಆಜಾದ್ನಗರ ಗ್ರಾಮಸ್ಥ ದಾದಾಪೀರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ