ನಂಬಿದವರ ವಂಚಿಸುವುದಿಲ್ಲ ಭೂ ತಾಯಿ


Team Udayavani, Jun 11, 2018, 12:12 PM IST

dvg-1.jpg

ದಾವಣಗೆರೆ: ಭೂಮಿಯನ್ನು ನಂಬಿ ಬೆವರು ಹರಿಸಿದವರನ್ನು ಭೂಮಿ ತಾಯಿ ಎಂದೆಂದಿಗೂ ವಂಚನೆ ಮಾಡುವುದೇ ಇಲ್ಲ ಎಂದು ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಬಲವಾಗಿ ಪ್ರತಿಪಾದಿಸಿದರು.

ಭಾನುವಾರ ದಾವಣಗೆರೆಯ ಸಮಾನ ಮನಸ್ಕರ ಒಕ್ಕೂಟ, ಮೈಕ್ರೋಬಿ ಆಗ್ರೋಟೆಕ್‌, ಕೋಲಾರ್‌ ಆರ್ಗ್ಯಾನಿಕ್ಸ್‌ ಸಂಯುಕ್ತಾಶ್ರಯದಲ್ಲಿ ಕುವೆಂಪು ಕನ್ನಡ ಭವನದಲ್ಲಿ ಏರ್ಪಡಿಸಿದ್ದ ಉಚಿತ ಸಮಗ್ರ ಸುಸ್ಥಿರ ವೈಜ್ಞಾನಿಕ ಸಾವಯವ ಕೃಷಿ… ಕುರಿತಂತೆ ಒಂದು ದಿನದ ಕಾರ್ಯಾಗಾರದ ಸಮಾರೋಪ, ಸಾವಯವ ಕೃಷಿ ತಜ್ಞ ಡಾ| ಕೆ.ಆರ್‌. ಹುಲ್ಲುನಾಚೇಗೌಡ ಅವರಿಗೆ ನಡೆದಾಡುವ ಕೃಷಿ ವಿಶ್ವಕೋಶ… ಬಿರುದು ಪ್ರದಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ನಾವೆಲ್ಲರೂ ಭೂಮಿಯನ್ನು ಸಂಪೂರ್ಣವಾಗಿ ನಂಬಿ ಬೆವರು ಹರಿಸಿ ದುಡಿಮೆ ಮಾಡಿದಾಗ ಭೂಮಿ ತಾಯಿ ವಂಚನೆ ಮಾಡುವುದೇ ಇಲ್ಲ. ಆದರೆ, ಯಾರು ಸಹ ಭೂಮಿಯನ್ನು ಸಂಪೂರ್ಣವಾಗಿ ನಂಬುವುದೇ
ಇಲ್ಲ ಎಂದು ವಿಷಾದಿಸಿದರು.

ರೈತಾಪಿ ಜನರು ಭೂಮಿಯನ್ನು ಸಂಪೂರ್ಣವಾಗಿ ನಂಬಬೇಕು. ಬೆವರು ಹರಿಸಿ ಸಂತೃಪ್ತ ಜೀವನಕ್ಕೆ ಅಗತ್ಯವಾದಷ್ಟನ್ನು ಬೆಳೆಯಬೇಕು. ಆಗ ಕೃಷಿಯಲ್ಲಿ ನಷ್ಟ ಕಾಣಲಿಕ್ಕೆ ಸಾಧ್ಯವೇ ಇಲ್ಲ. ಆದರೆ, ಅದನ್ನು ಯಾರೂ ಮಾಡುವುದೇ ಇಲ್ಲ. ಹಾಸಿಗೆ ಇದ್ದಷ್ಟು ಕಾಲು ಚಾಚಬೇಕು ಎಂಬುದನ್ನು ಮೀರುತ್ತಾರೆ. ಒಂದು ಬೆಳೆ ಬೆಳೆಯಲು ಎಷ್ಟು ಖರ್ಚು ಮಾಡಲಾಗಿದೆ ಎಂಬುದರ ದಾಖಲೀಕರಣವೂ ಮುಖ್ಯ. ಬೆಳೆಗೆ ಮಾಡಿದ ಖರ್ಚು ಗೊತ್ತಾಗುತ್ತದೆ. ಪರ್ಯಾಯ ಬೆಳೆಯ ಯೋಚನೆಗೆ ಕಾರಣವಾಗುತ್ತದೆ. ಹಾಗಾಗಿ ಈಗಿನಿಂದ ಎಲ್ಲ ರೈತರು ದಾಖಲೀಕರಣಕ್ಕೆ ಒತ್ತು ನೀಡಬೇಕು ಎಂದು ತಿಳಿಸಿದರು. 

ಈಗಿನ ಕಾಲದಲ್ಲಿ ಯಾರೂ ಸಹ ಕೃಷಿಕರು ಆಗಬೇಕು ಎಂಬುದನ್ನು ಬಯಸುವುದೇ ಇಲ್ಲ. ರೈತರಾಗುವುದೇ ಬೇಡ ಎನ್ನುವರು ಇದ್ದಾರೆ. ಹಳ್ಳಿಯ ಪಟೇಲರ ಮಕ್ಕಳು ದೊಡ್ಡ ದೊಡ್ಡ ನಗರದಲ್ಲಿ ಹಂದಿಗೂಡಿನಂತಹ ಕೊಠಡಿಯಲ್ಲಿ
ಇದ್ದುಕೊಂಡು, ಅಲ್ಲಿಯೇ ಅಡುಗೆ ಮಾಡಿಕೊಂಡು, ಕೆಲಸಕ್ಕೆ ಹೋಗಿ ಬಂದು, ಕೊನೆಗೆ ಅನಾರೋಗ್ಯಕ್ಕೆ ತುತ್ತಾಗಿ, ಮತ್ತೆ ಊರಿಗೆ ಬರುವ ವಾತಾವರಣ ಇದೆ. ಹೊತ್ತು ಬಂದಂತೆ ಕೊಡೆ ಹಿಡಿದು ಬದುಕುವ ಬದಲಿಗೆ ಬದ್ಧತೆಯಿಂದ ಜೀವನ ನಡೆಸಬೇಕು ಎಂದು ಮಾರ್ಮಿಕವಾಗಿ ಎಚ್ಚರಿಸಿದರು.

ಇಂದಿನ ವಾತಾವರಣದಲ್ಲಿ ಮಾತುಗಾರರಿಗೆ ಕೊರತೆಯೇ ಇಲ್ಲ. ಮಾತುಗಳನ್ನು ಕೃತಿಗೆ ತರುವಂತಹವರ ಸಂಖ್ಯೆ ಕಡಿಮೆ ಆಗುತ್ತಿದೆ. ಪ್ರತಿಯೊಬ್ಬರು ಲೆಕ್ಕ ಹಾಕುವುದರಲ್ಲಿ ಭಾರೀ ಪ್ರಾವಿಣ್ಯರು. ಬರೀ ಲೆಕ್ಕ ಹಾಕಿದ ಮಾತ್ರಕ್ಕೆ ಹಣ
ಕೈಗೆ ಬರುವುದಿಲ್ಲ. ಆಸಕ್ತಿ, ಶ್ರದ್ಧೆಯಿಂದ ಕೃಷಿ ಕೆಲಸ ಮಾಡಿದಾಗ ನಾವು ಹಾಕಿರುವ ಲೆಕ್ಕ ಸರಿ ಹೋಗುತ್ತದೆ ಎಂದು ತಿಳಿಸಿದರು. 

ನಮ್ಮ ಮಠ ಹಿಂದಿನಿಂದಲೂ ಕೃಷಿ ಮಾಡಿಕೊಂಡೇ ಬರುತ್ತಿದೆ. ಕೃಷಿಯನ್ನು ಉದ್ಯಮವನ್ನಾಗಿ ಸ್ವೀಕರಿಸಿದೆ. ಹಿರಿಯ ಗುರುಗಳು ಸದಾ ಹೊಲ-ತೋಟದ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದರು. 

ಅದು ಏಕೆ ಎಂಬುದು ತಮಗೆ ಈಗ ಗೊತ್ತಾಗುತ್ತಿದೆ. ನಾವು ವರ್ಷಕ್ಕೆ 20 ಲಕ್ಷದಷ್ಟು ತೆಂಗು, 30-35 ಲಕ್ಷದಷ್ಟು ಅಡಕೆ, ಬಾಳೆ ಬೆಳೆಯುತ್ತೇವೆ. ಜೋಳ, ರಾಗಿ ಒಳಗೊಂಡಂತೆ ವೈವಿಧ್ಯಮಯ ಬೆಳೆ ಬೆಳೆಯುತ್ತೇವೆ. ಮುಂದಿನ ದಿನಗಳಲ್ಲಿ 7 ಎಕರೆ ಪ್ರದೇಶದಲ್ಲಿ ಅರಣೀಕರಣ ಮಾಡುವ ಉದ್ದೇಶವೂ ಇದೆ. ಸಾಣೇಹಳ್ಳಿಯಲ್ಲಿ ಸಾವಯವ ಕೃಷಿ ತಜ್ಞ ಡಾ| ಕೆ.ಆರ್‌. ಹುಲ್ಲುನಾಚೇಗೌಡರಿಂದಲೇ ಒಂದು ದಿನದ ಕಾರ್ಯಾಗಾರವನ್ನೂ ಏರ್ಪಡಿಸಲಾಗುವುದು ಎಂದು ತಿಳಿಸಿದರು.

ಮಕ್ಕಳ ಮದುವೆ, ವಿದ್ಯಾಭ್ಯಾಸಕ್ಕೆ ಹೊಲ-ಗದ್ದೆ ಮಾರುವುದು ಕಂಡು ಬರುತ್ತದೆ. ಈಗ 25 ಲಕ್ಷ ಸಿಗಬಹುದು. ಮುಂದೆ ಅದೇ 25 ಲಕ್ಷ ಕೊಟ್ಟರೂ ಅದೇ ಜಮೀನು ಸಿಕ್ಕುವುದೇ ಇಲ್ಲ. ಏನೇ ಆಗಲಿ ಹೊಲ- ಗದ್ದೆ ಮಾರಾಟ ಮಾಡಬಾರದು ಎಂದು ಸಲಹೆ ನೀಡಿದ ಶ್ರೀಗಳು, ನಮ್ಮ ಮಠದ ಒಂದೇ ಒಂದು ಇಂಚು ಜಮೀನು ಮಾರಾಟ ಮಾಡಿಲ್ಲ ಎಂದು ತಿಳಿಸಿದರು.

ರೈತರಿಂದ ಮಾತ್ರವೇ ಪರಿಸರ ಸಮತೋಲನ ಮಾಡಲಿಕ್ಕೆ ಸಾಧ್ಯ. ಹಾಗಾಗಿ ಹೊಲದ ಬದುಗಳಲ್ಲಿ ವೈವಿಧ್ಯಮಯ ಗಿಡ-ಮರ ಬೆಳೆಯುವಂತಾಗಬೇಕು. ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ತಿಳಿಸಿದರು. 

ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದ ನಿರ್ದೇಶಕ ಪ್ರೊ| ವೈ. ವೃಷಭೇಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಮಳೆನೀರು ಕೊಯ್ಲು ತಜ್ಞ ಡಾ| ದೇವರಾಜ ರೆಡ್ಡಿ, ಸಾವಯವ ಕೃಷಿ ತಜ್ಞ ಡಾ| ಕೆ.ಆರ್‌. ಹುಲ್ಲುನಾಚೇಗೌಡ, ಸಮಾನ ಮನಸ್ಕರ
ಒಕ್ಕೂಟದ ಕೆ.ಬಿ. ಮಹದೇವಪ್ಪ, ಬಿ.ಸಿ. ವಿಶ್ವನಾಥ್‌ ಇತರರು ಇದ್ದರು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.