ಭದ್ರಾ ಕಾಡಾ ಸಮಿತಿ ಸಭೆ ಮುಂದೂಡಿಕೆ


Team Udayavani, Aug 7, 2017, 3:28 PM IST

07-DV-5.jpg

ದಾವಣಗೆರೆ: ಭದ್ರಾ ಜಲಾಶಯದಿಂದ ನೀರು ಹರಿಸುವ ಕುರಿತು ಆ.5ರಂದು(ಶನಿವಾರ) ಕರೆಯಲಾಗಿದ್ದ ಕಾಡಾ ಸಭೆ ಮುಂದೂಡಲ್ಪಡುತ್ತಲೇ ಅಚ್ಚುಕಟ್ಟು ಪ್ರದೇಶದ ರೈತರು ಇದೀಗ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಡಾ ಸಭೆ ನಂತರ ಭದ್ರಾ ನಾಲೆಯಲ್ಲಿ ನೀರು ಬಿಡುವ ಕುರಿತು ನಿರ್ಧಾರ ಹೊರಬೀಳಬಹುದು. ಅದರ ಆಧಾರದಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಬೇಕು ಅಂದುಕೊಂಡಿದ್ದ ರೈತರಿಗೆ ಇದೀಗ ಏನು ಮಾಡಬೇಕು ಎಂಬ ದಿಕ್ಕು ದೋಚದಂತಹ ಸ್ಥಿತಿ ನಿರ್ಮಾಣ ಆಗಿದೆ.

ಭದ್ರಾ ನಾಲೆಯಲ್ಲಿ ನೀರು ಹರಿಸಬಹುದು ಎಂಬ ಆಶಾಭಾವನೆಯೊಂದಿಗೆ ಹಾಲಿ ಕೆಲ ರೈತರು ಕೂರಿಗೆ ಭತ್ತ ಬಿತ್ತಿದ್ದಾರೆ. ಇನ್ನೂ ಕೆಲವರು ನೆಲ ಹಣಿಮಾಡಿಕೊಂಡಿದ್ದಾರೆ. ಆದರೆ, ನೀರು ಸಿಕ್ಕುತ್ತದೆ. ಸಿಕ್ಕರೆ ಭತ್ತದ ನಾಟಿ ಮಾಡಬಹುದು. ಸಿಗದೇ ಹೋದರೆ ಏನು ಬಿತ್ತಬೇಕು ಎಂಬ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ. ನೀರಾವರಿ, ಕೃಷಿ ಇಲಾಖೆ, ಜಿಲ್ಲಾಡಳಿತ ಈ ಬಾರಿಯೂ ಭತ್ತ ಬೆಳೆಯುವುದು ಬೇಡ ಎಂದು ತಿಳಿಸಿದ್ದರೂ ಸಹ ಕೆಲ ರೈತರು ಲಭ್ಯವಿರುವ ಬೋರ್‌ವೆಲ್‌ ನೀರು ಮತ್ತು ನಾಲೆಗೆ ನೀರು ಹರಿಸಿದರೆ ಅದನ್ನೂ ಬಳಸಿಕೊಂಡು ಒಂದು
ಬೆಳೆ ತೆಗೆಯಬಹುದು ಎಂಬ ಗಟ್ಟಿ ಧೈರ್ಯದಿಂದ ಭತ್ತ ಮಡಿ ಮಾಡಿಕೊಂಡಿದ್ದಾರೆ. ಇದೀಗ ಅಚ್ಚುಕಟ್ಟು ಅಭಿವೃದ್ಧಿ ಸಮಿತಿ ಕಾಡಾ(ಕಮ್ಯಾಂಡ್‌ ಏರಿಯಾ ಡೆವಲಪ್‌ಮೆಂಟ್‌ ಅಥಾರಿಟಿ) ಸಭೆ ಮುಂದೂಡಿರುವುದು ರೈತರ ಸ್ಥಿತಿಯನ್ನು ಅಯೋಮಯ ಆಗಿಸಿದೆ.

ಅತೀವ ಮಳೆಯ ಕೊರತೆ, ಜಲಾಶಯದಲ್ಲಿ ನಿರೀಕ್ಷಿತ ಪ್ರಮಾಣದ ನೀರು ಸಂಗ್ರಹವಾಗದ ಹಿನ್ನೆಲೆಯಲ್ಲಿ ಕಾಡಾ ಸಮಿತಿಯವರೂ ಸಹ ಏನೂ ಮಾಡದ ಸ್ಥಿತಿಯಲ್ಲಿದ್ದಾರೆ. ಹಾಲಿ ಯಾವುದೇ ಬೆಳೆಗೂ ನೀರು ಕೊಡಲು ಸಾಧ್ಯವಿಲ್ಲದಂತಹ ಸ್ಥಿತಿ ಇದೆ. ಕಳೆದ ಬಾರಿಗೆ ಹೋಲಿಸಿದರೆ
ಈ ಬಾರಿ ಜಲಾಶಯದಲ್ಲಿನ ನೀರಿನ ಮಟ್ಟ ತುಂಬಾ ಕಡಮೆ ಇದೆ. ಜೊತೆಗೆ ಮಳೆ ಪ್ರಮಾಣ ತೀರಾ ಇಳಿಕೆ ಆಗಿದೆ. ಇಂತಹ ಸ್ಥಿತಿಯಲ್ಲಿ ಸಭೆ ಮಾಡಿದರೆ ಪ್ರಯೋಜನ ಇಲ್ಲ ಎಂಬಂತಹ ಮನೋಸ್ಥಿತಿಗೆ ಕಾಡಾ ಸಮಿತಿ ಬಂದಿದೆ. ಹಾಲಿ ಜಲಾಶಯದ ಮಟ್ಟ 144.8 ಅಡಿ ನೀಡಿದ್ದು, 32.58  ಎಂಸಿ ನೀರಿದೆ. ಇದರಲ್ಲಿ 21.58ಟಿಎಂಸಿ ಮಾತ್ರ ಬಳಕೆಗೆ ಲಭ್ಯ ಇದೆ. ಈ ಪೈಕಿ 6 ಟಿಎಂಸಿ ನೀರನ್ನು ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಗದಗ ಸೇರಿದಂತೆ ವಿವಿಧ ಭಾಗಗಳಿಗೆ ಕುಡಿಯಲು ನೀರು ಪೂರೈಸಲು ಮೀಸಲು ಇಡಲಾಗಿದೆ. ಅಲ್ಲಿಗೆ ಜಲಾಶಯದಲ್ಲಿ ಕೃಷಿ ಬಳಕೆಗೆ ಸಿಗುವ ನೀರಿನ ಪ್ರಮಾಣ 15ಟಿಎಂಸಿ ಮಾತ್ರ. ಕಳೆದ ವರ್ಷ ಇದೇ ಸಮಯದಲ್ಲಿ ಜಲಾಶಯದ ಮಟ್ಟ 150 ಅಡಿ ಇತ್ತು. ಆಗಲೇ ನಾಲೆಗಳಿಗೆ ನೀರು ಸಹ ಹರಿಸಲಾಗಿತ್ತು. ಮಳೆ ಪ್ರಮಾಣ ಸಹ ಚೆನ್ನಾಗಿ ಇದ್ದ ಕಾರಣ ಸಮಿತಿ ನೀರು ಬಿಡಲು ನಿರ್ಧರಿಸಿತ್ತು. ಆದರೆ, ಈ ಬಾರಿಯ ಸ್ಥಿತಿ ನೋಡಿದರೆ ಜಲಾಶಯಕ್ಕೆ ಹರಿದು ಬಂದಿರುವ ಗರಿಷ್ಠ ನೀರಿನ ಪ್ರಮಾಣ 20000 ಕ್ಯುಸೆಕ್‌. ಅದೂ ಸಹ ಒಂದು ದಿನ ಮಾತ್ರ ಈ ಪ್ರಮಾಣದ ಒಳ ಹರಿವು ಕಂಡುಬಂದಿದೆ.

ಕಳೆದ ವರ್ಷ 25000 ಕ್ಯುಸೆಕ್‌ ಒಳ ಹರಿವು ಹಲವು ದಿನಗಳ ಕಾಲ ಇತ್ತು. ಜುಲೈ, ಆಗಸ್ಟ್‌ನಲ್ಲಿ ಉತ್ತಮ ಮಳೆಯಾಗಿತ್ತು. ಈ ಬಾರಿ ಜುಲೈ ಮೊದಲ ವಾರ ಮುಕ್ತಾಯ ಆದರೂ ಒಳ ಹರಿವಿನ ಗರಿಷ್ಠ ಪ್ರಮಾಣ 8000 ಕ್ಯುಸೆಕ್‌ನ ಆಸುಪಾಸಲ್ಲಿಯೇ ಇದೆ. ಈಗ ಆಗುತ್ತಿರುವ ಮಳೆ ಪ್ರಮಾಣ
ಗಮನಿಸಿದರೆ ಮುಂದೆ ಕುಡಿಯುವ ನೀರಿನ ಭೀಕರ ಸಮಸ್ಯೆ ಎದುರಾಗುವ ಸಂಭವ ಇದೆ. ಹಾಲಿ ಚಿತ್ರದುರ್ಗಕ್ಕೆ ಕುಡಿಯುವ ನೀರು ಒದಗಿಸುವ ಮೂಲ ಸಹ ಇದೇ ಜಲಾಶಯ ಆಗಿದೆ. ಚನ್ನಗಿರಿ ತಾಲ್ಲೂಕಿನ ಸೂಳೆಕೆರೆಯಿಂದ ಚಿತ್ರದುರ್ಗ ನಗರ ಸೇರಿದಂತೆ ಜಿಲ್ಲೆಯ ಅನೇಕ ಹಳ್ಳಿಗಳಿಗೆ
ಇಲ್ಲಿಂದಲೇ ನೀರು ಪೂರೈಕೆ ಮಾಡಲಾಗುತ್ತದೆ. ದಾವಣಗೆರೆ ನಗರಕ್ಕೆ ಬೇಸಿಗೆ ಕಾಲದಲ್ಲಿ ನೀರು ಪೂರೈಕೆ ಮಾಡಲು ಇರುವ ಟಿವಿ ಸ್ಟೇಷನ್‌, ಕುಂದುವಾಡ ಕರೆಗಳಿಗೂ ಸಹ ಭದ್ರಾ ಜಲಾಶಯವೇ ನೀರಿನ ಮೂಲವಾಗಿದೆ. ಆದ್ದರಿಂದ ಬೇಸಿಗೆಯಲ್ಲಿ ಎದುರಾಗಬಹುದಾದ ನೀರಿನ
ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡರೆ ನಾಲೆಗೆ ನೀರು ಹರಿಸದೇ ಇರುವುದೇ ಉತ್ತಮ ಎಂಬಂತಹ ಸ್ಥಿತಿ ಇದೆ. 

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.