ಸೈನಿಕ ಹುಳು ಕಾಟಕ್ಕೆ ರೈತ ಕಂಗಾಲು

ದರ ಕುಸಿತ-ಮಳೆ ಅನಿಶ್ಚಿತತೆ ಜತೆಗೆ ಈಗ ಮೆಕ್ಕೆಜೋಳಕ್ಕೆ ರೋಗದ ಕಾಟ

Team Udayavani, Jun 15, 2020, 5:18 PM IST

1-June-23

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಭರಮಸಾಗರ: ಮುಂಗಾರು ಅವ ಗೆ ಬಿತ್ತನೆ ಮಾಡಿದ ಮೆಕ್ಕೆಜೋಳಕ್ಕೆ ಎಲೆ ಸುಳಿ ಸೈನಿಕ ಹುಳುವಿನ ಕಾಟ ಶುರುವಾಗಿ ಸಸಿ ಹಂತದಲ್ಲೇ ಎಲೆಗಳನ್ನು ತಿಂದುಹಾಕುತ್ತಿರುವ ಬೆಳವಣಿಗೆಯಿಂದ ಚಿತ್ರದುರ್ಗ ತಾಲೂಕಿನ ರೈತರು ಅಕ್ಷರಶಃ ಕಂಗಾಲಾಗಿದ್ದಾರೆ.

ತಾಲೂಕಿನಲ್ಲಿ 39 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗುತ್ತದೆ. ಈಗಾಗಲೇ 12 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆ ಕಾರ್ಯ ಮುಗಿದಿದೆ. ಮೇ ಅಂತ್ಯಕ್ಕೆ ಬಿತ್ತನೆ ಮಾಡಿದ್ದ ಮೆಕ್ಕೆಜೋಳದಲ್ಲಿ ಎಲೆ ಸುಳಿ ರೋಗ ಕಾಣಿಸಿಕೊಂಡಿದೆ. ಬೆಳೆಯ ಪ್ರಾರಂಭಿಕ ಹಂತದ ಸುಳಿಯಲ್ಲಿ ಅವಿತು ಬೆಳೆಯುವ ಕುಡಿಯನ್ನು ಈ ಹುಳು ತಿಂದು ಹಾಕುತ್ತಿದೆ. ಎಲೆಯ ಮೇಲೆ ಬಿಳಿ ಬಣ್ಣದ ಮಚ್ಚೆಗಳ ಲಕ್ಷಣಗಳಿವೆ. ಸ್ವಲ್ಪ ಬಲಿತ ಹುಳುಗಳಿರುವ ಗರಿಗಳಲ್ಲಿ ಎಲೆಯು ಹರಿದ ರೀತಿಯಲ್ಲಿ ಕಾಣಿಸುತ್ತದೆ. ಎಲೆಯ ಮೇಲ್ಭಾಗದಲ್ಲಿ ಕಟ್ಟಿಗೆ ಹಿಟ್ಟಿನ ತರಹದ ಹಸಿ ಹಿಕ್ಕೆಗಳಿವೆ. ಇಂಥಹ ಹುಳು ಭಾದೆಯನ್ನು ಆರಂಭದಲ್ಲೇ ನಿಯಂತ್ರಿಸದೆ ಹೋದರೆ ತೆನೆಗಳನ್ನು ಕೊರೆದು ಬೆಳವಣಿಗೆಯಾಗುವ ಕಾಳುಗಳನ್ನು ತಿನ್ನುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ಎಲೆ ಸುಳಿ ರೋಗ ಬೀಳದೆ ಇರುವಂಥಹ ಬಿತ್ತನೆ ಬೀಜಗಳನ್ನು ತಯಾರಿಸಲಾಗಿದೆ ಎಂಬ ಕೆಲ ಬಿತ್ತನೆ ಬೀಜ ಕಂಪನಿಗಳ ಪ್ರಚಾರದ ಮೊರೆ ಹೋದ ರೈತರು ಅಂಥಹ ದುಬಾರಿ ಬೀಜಗಳನ್ನೇ ಖರಿದೀಸಿ ಬಿತ್ತನೆ ಮಾಡಿದ್ದರೂ ರೋಗ ಭಾದೆ ನಿಂತಿಲ್ಲ ಎಂಬುದಾಗಿ ಬೆಳೆಗಾರರು ಹೇಳುತ್ತಾರೆ. ಮೋಡದ ವಾತಾವರಣ, ಹೆಚ್ಚಿನ ಮಳೆ, ಹೆಚ್ಚಿನ ತೇವಾಂಶ ಮತ್ತು ಕಡಿಮೆ ಉಷ್ಣಾಂಶಗಳಿರುವ ಭಾಗಗಳಲ್ಲಿ ಈ ಕೀಟಗಳ ಹಾವಳಿ ಹೆಚ್ಚಾಗಿದೆ. ಈ ಕೀಟಗಳು ವರ್ಷವೀಡಿ ಬೆಳೆಗಳಿಗೆ ಕಾಟ ನೀಡುವ ವಿಲಕ್ಷಣ ಗುಣವನ್ನು ಹೊಂದಿವೆ.

ಎಲೆ ಸುಳಿ ಸೈನಿಕ ಹುಳುವಿನ ನಿಯಂತ್ರಣಕ್ಕಾಗಿ ರೈತರು ಆಳವಾದ ಉಳುಮೆ ಮಾಡುವುದರಿಂದ ಕೋಶಗಳನ್ನು ಹೊರಹಾಕಿ ಇತರೆ ಪರಭಕ್ಷಕ ಕೀಟಗಳಿಂದ ಮತ್ತು ಸೂರ್ಯನ ಶಾಖದಿಂದ ನಾಶಪಡಿಸಬಹುದು. ಮುಂಗಾರು ಮೊದಲ ಮಳೆಗೆ ಏಕಕಾಲಕ್ಕೆ ಬಿತ್ತನೆ ಮಾಡಿದರೆ ಕೀಟಗಳ ಸಂಖ್ಯೆಯನ್ನು ನಿಯಂತ್ರಿಸಿ ಕೀಟಗಳ ಸಂತತಿ ಅಭಿವೃದ್ಧಿಯನ್ನು ತಡೆಯಬಹುದು. ಅಂತರ, ಮಿಶ್ರ ಬೆಳೆ ಬೆಳೆಯುವುದರಿಂದ ಎಲೆ ಸುಳಿ ರೋಗ ಸಾಧ್ಯವಿದೆ. ಶಿಪಾರಸು ಮಾಡಿದ ಪ್ರಮಾಣದ ಗೊಬ್ಬರ ಮತ್ತು ರಸಗೊಬ್ಬರಗಳನ್ನು ಬಳಸಿ ಬೆಳೆಯನ್ನು ನಿರ್ವಹಣೆ ಮಾಡುವದರಿಂದಲೂ ರೋಗಭಾದೆಯನ್ನು ತಡೆಯಬಹುದು ಎಂಬುದಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಶ್ರೀನಿವಾಸ್‌ ಹೇಳುತ್ತಾರೆ.

ಕೀಟ ನಿಯಂತ್ರಣ ಕ್ರಮಗಳ ಯಾವುದೇ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಭೇಟಿ ಮಾಡಿ ಸಲಹೆ ಪಡೆಯಬಹುದು ಎಂದು ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ಮಲ್ಲನಗೌಡ ತಿಳಿಸಿದ್ದಾರೆ.  ಒಟ್ಟಾರೆ ದರ ಕುಸಿತ, ಮಳೆಯ ಅನಿಶ್ಚಿತತೆ, ಅನಾವೃಷ್ಟಿ ಸೇರಿದಂತೆ ನಾನಾ ಸಂಕಷ್ಟಗಳ ಸುಳಿಗೆ ಸಿಲುಕಿದ ಮೆಕ್ಕೆಜೋಳ ಬೆಳೆಗಾರರು ಇದೀಗ ಕೀಟ ಭಾದೆಯಿಂದ ಬೆಳೆಯನ್ನು ಆರಂಭದಲ್ಲೇ ಕಾಪಾಡಿಕೊಳ್ಳಲು ಹರಸಾಹಸಪಡಬೇಕಾಗಿದೆ.

ಎಚ್‌.ಬಿ. ನಿರಂಜನ ಮೂರ್ತಿ

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.