ಕಾಗಿನೆಲೆ ಕನಕ ಗುರುಪೀಠ ಶಾಖಾ ಮಠಕ್ಕೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಭೇಟಿ
Team Udayavani, Mar 25, 2024, 10:27 AM IST
ದಾವಣಗೆರೆ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಭಾನುವಾರ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕಾಗಿನೆಲೆ ಮಹಾ ಸಂಸ್ಥಾನದ ಕನಕ ಗುರುಪೀಠ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಕುಂಚಿಟಿಗ ಸಂಸ್ಥಾನದ ಶ್ರೀ ಶಾಂತವೀರ ಸ್ವಾಮೀಜಿ ಅವರಿಗೆ ಗೌರವ ಸಲ್ಲಿಸಿ ಆಶೀರ್ವಾದ ಪಡೆದರು.
ಮುಖಂಡರಾದ ಜಿ.ಎಸ್. ಅನಿತ್ಕುಮಾರ್, ಮಾಜಿ ಮೇಯರ್ ಉಮಾ ಪ್ರಕಾಶ್, ಜಯಮ್ಮ, ಭಾಗ್ಯ ಪಿಸಾಳೆ, ಗ್ಯಾರಳ್ಳಿ ಶಿವಕುಮಾರ್, ಬಸವರಾಜ್, ಪ್ರವೀಣ್ ಮಧುರೈ, ಸಿಂಧು ಇತರರು ಇದ್ದರು.
ಒಂದೇ ಕುಟುಂಬಕ್ಕೆ ಟಿಕೆಟ್ ಸಾಕೇ?: ರಾಜಕೀಯ ಪಕ್ಷಗಳು ಒಂದೇ ಕುಟುಂಬಗಳಿಗೆ ಕೆಂಪು ಹಾಸು ಹಾಕುವುದನ್ನು ವಿರೋಧಿಸುವ ಕಿಡಿಯನ್ನು ಮೊದಲು ಹೊತ್ತಿಸಿದ್ದು ಬಿಜೆಪಿ ನಾಯಕ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ. ಸಂಸದ ಸಿದ್ದೇಶ್ವರ ಕುಟುಂಬದವರಿಗೆ ಏಳು ಬಾರಿ ಟಿಕೆಟ್ ನೀಡಲಾಗಿದ್ದು ಆ ಕುಟುಂಬದವರನ್ನು ಬಿಟ್ಟು ಬೇರೆಯವರಿಗೆ ಟಿಕೆಟ್ ಕೊಡಿ ಎಂಬ ಕೂಗು ಎಬ್ಬಿಸಿದ್ದರು. ಪಕ್ಷ ಅದೇ ಕುಟುಂಬದವರಿಗೆ ಟಿಕೆಟ್ ಘೋಷಿಸಿದ್ದರಿಂದ ಸಿಟ್ಟಿಗೆದ್ದ ಮಾಜಿ ಸಚಿವರು, ಶಾಸಕರು, ಯುವ ಮುಖಂಡರು, ಕಾರ್ಯಕರ್ತರನ್ನು ಒಳಗೊಂಡ ಗುಂಪು ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಪ್ರಯತ್ನ ನಡೆಸಿದೆ. ಒಂದು ವೇಳೆ ಪಕ್ಷದ ವರಿಷ್ಠರು ಬಂಡಾಯ ಶಮನಗೊಳಿಸಿದರೂ ಈ ಬಣದ ಒಳಏಟಿನ ಆತಂಕವಂತೂ ಬಿಜೆಪಿಗೆ ಇದ್ದೇ ಇದೆ
ಒಂದೇ ಮನೆಗೆ ಮೂರು ಅಧಿಕಾರ ನೀಡಲು ಜನ ಒಪ್ಪುವುದಿಲ್ಲ. ಶಾಮನೂರು ಮನೆಯಲ್ಲಿ ಈಗಾಗಲೇ ಇಬ್ಬರು ಅಧಿಕಾರದಲ್ಲಿದ್ದಾರೆ. ಜಿ.ಎಂ. ಕುಟುಂಬದಲ್ಲಿ ಯಾರೂ ಅಧಿಕಾರದಲ್ಲಿಲ್ಲ. ಹೀಗಾಗಿ ಈ ಬಾರಿ ಜನ ಜಿ.ಎಂ. ಸೊಸೆಯಾದ ನನ್ನನ್ನೇ ಗೆಲ್ಲಿಸಲು ನಿರ್ಧರಿಸಿದ್ದಾರೆ. –ಗಾಯತ್ರಿ ಸಿದ್ದೇಶ್ವರ, ಬಿಜೆಪಿ ಅಭ್ಯರ್ಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ