ಬಿಜೆಪಿ ಮಹಿಳೆಯರಿಗೆ ಗೌರವ ನೀಡುವ ಪಕ್ಷ


Team Udayavani, Mar 26, 2017, 1:09 PM IST

dvg6.jpg

ಹರಿಹರ: ಭಾರತೀಯ ಸಂಸ್ಕೃತಿಯಂತೆ ಮಹಿಳೆಯರನ್ನು ಗೌರವ ಭಾವದಿಂದ ಕಾಣುವುದಲ್ಲದೆ, ಅವರಿಗೆ ಹೆಚ್ಚಿನ ಆದ್ಯತೆ ನೀಡಿರುವ ಏಕೈಕ ಪಕ್ಷ ಬಿಜೆಪಿ ಎಂದು ಪಕ್ಷದ ಜಿಲ್ಲಾಧ್ಯಕ್ಷ ಯಶವಂತರಾವ್‌ ಹೇಳಿದರು. ನಗರದ ಕಾಟೆ ಭವನದಲ್ಲಿ ಶನಿವಾರ ನಡೆದ ನಗರ ಬಿಜೆಪಿ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. 

ಅಟಲ್‌ಬಿಹಾರಿ ವಾಜಪೇಯಿ ಮಹಿಳೆಯರ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮ ರೂಪಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಜಾರಿಗೊಳಿಸಿರುವ ಮಹಿಳಾಪರ ಯೋಜನೆಗಳ ಬಗ್ಗೆ ವಿದೇಶಿಗರೂ ಸಹ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದರು. ಕೇಂದ್ರ ಸರ್ಕಾರ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ರಚಿಸಿರುವ ಬಿಜೆಪಿ ಸರ್ಕಾರದಲ್ಲಿ ಮಹಿಳೆಯರಿಗೆ ಹೆಚ್ಚಿನ ಆಧ್ಯತೆ ನೀಡಲಾಗಿದೆ.

ಉತ್ತರ ಪ್ರದೇಶದ ಚುನಾವಣೆಯಲ್ಲಿ ಪಕ್ಷ ಅಭುತಪೂರ್ವ ಜಯ ಗಳಿಸಲು ಮಹಿಳೆಯರ ಬೆಂಬಲವೂ ಕಾರಣವಾಗಿದೆ ಎಂದರು. ಮಾಜಿ ಶಾಸಕ ಬಿ.ಪಿ.ಹರೀಶ್‌ ಮಾತನಾಡಿ, ಕುಟುಂಬದ ಅಭಿವೃದ್ಧಿಯಲ್ಲಿ ಮಹಿಳೆಯ ಪಾತ್ರ ಎಷ್ಟು ಮುಖ್ಯವೋ ದೇಶದ ಅಭಿವೃದ್ಧಿಯಲ್ಲಿ ಅದಕ್ಕಿಂತ ಮಹತ್ವದ್ದಾಗಿದೆ. ಮಹಿಳೆಯರಿಗೆ ಸೂಕ್ತ ಶಿಕ್ಷಣ, ತರಬೇತಿ ನೀಡಿ, ಅವರನ್ನು ದೇಶದ ಅಭಿವೃದ್ಧಿಯಲ್ಲಿ ತೊಡಗುವಂತೆ ಮಾಡುವುದು ಬಿಜೆಪಿ ಗುರಿಯಾಗಿದೆ.

ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಈ ದಿಸೆಯಲ್ಲಿ ಹೆಚ್ಚಿನ ಮಹಿಳೆಯರನ್ನು ಒಗ್ಗೂಡಿಸಿಕೊಂಡು ಪಕ್ಷ ಬಲಪಡಿಸಲು ಆ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು. ಬಿ.ಎಸ್‌.ಯಡಿಯೂರಪ್ಪ ಸಿಎಂ ಆಗಿದ್ದ ಕಾಲವನ್ನು ಕರ್ನಾಟಕದ ಮಟ್ಟಿಗೆ ಸುವರ್ಣಯುಗ ಎಂದೆ ಕರೆಯಬಹುದು, ರಾಜ್ಯಾದ್ಯಂತ ಅವರು ಸಾಹಸ್ರಾರು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದರು.

ರೈತರು, ಕಾರ್ಮಿಕರು, ನೌಕರರು ಎಲ್ಲಾ ವರ್ಗದ ಜನರು ಅಭಿವೃದ್ಧಿಗೆ ಯೋಜನೆ ರೂಪಿಸಿದ್ದರು. ಆದರೀಗ ರಾಜ್ಯ ಕಾಂಗ್ರೆಸ್‌ ಸರ್ಕಾರದ ಹಳಿ ತಪ್ಪಿದ ಆಡಳಿತದಲ್ಲಿ ಎಲ್ಲಾ ಜನರು ಸಂಕಷ್ಟ ಎದುರಿಸಬೇಕಾಗಿದೆ ಎಂದರು. ನಗರ ಬಿಜೆಪಿ ಮಹಿಳಾ ಮೋರ್ಚದ ನೂತನ ಅಧ್ಯಕ್ಷೆಯಾಗಿ ರೂಪಾ ಕಾಟೆ ಅಧಿಕಾರ ವಹಿಸಿಕೊಂಡರು.

ಪಕ್ಷದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜಯ್ಯಮ್ಮ, ನಗರಸಭೆ ಸದಸ್ಯರಾದ ಮಂಜುಳಮ್ಮ, ಅಂಬುಜಾ ರಾಜೋಳಿ, ರಾಜು ರೋಖಡೆ, ಮುಖಂಡರಾದ ಪ್ರಮಿಳಾ ನಲ್ಲೂರು, ಮೀರಾಭಟ್‌, ಮಾಲತೇಶ್‌ ಭಂಡಾರೆ, ಐರಿಣಿ ನಾಗರಾಜ್‌, ಪೂಜಾರ್‌ ಚಂದ್ರಶೇಖರ್‌, ಸುಮನ್‌ ಖಮಿತ್ಕರ್‌, ತುಳುಜಪ್ಪ ಭೂತೆ ಮತ್ತಿತರಿದ್ದರು.   

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.