‌ಫಲಿತಾಂಶದಿಂದ ಕಾಂಗ್ರೆಸ್‌ಗೆ ಮರ್ಮಾಘಾತ ­

ತೀವ್ರ ಪೈಪೋಟಿ ನಡುವೆಯೂ ಬಿಜೆಪಿಗೆ ಗೆಲುವು

Team Udayavani, May 23, 2022, 2:14 PM IST

result

ದಾವಣಗೆರೆ: ಕಾಂಗ್ರೆಸ್‌ನ ಘಟಾನುಘಟಿಗಳ ಅಬ್ಬರದ ಪ್ರಚಾರ, ಅಲ್ಪಸಂಖ್ಯಾತ ಸಮುದಾಯದ ಮತಗಳ ವಿಭಜನೆ, ಹೊಸಬರಿಗೆ ಅವಕಾಶ ನೀಡಬಹುದು ಎಂಬ ರಾಜಕೀಯದ ಲೆಕ್ಕಾಚಾರ, ತೀವ್ರ ಪೈಪೋಟಿಯ ನಡುವೆಯೂ ಮಹಾನಗರ ಪಾಲಿಕೆಯ 28 ಮತ್ತು 37ನೇ ವಾರ್ಡ್‌ ಉಪಚುನಾವಣೆಯಲ್ಲಿ ಅನಾಯಾಸವಾಗಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ತನ್ನ ಶಕ್ತಿ ವೃದ್ಧಿಸಿಕೊಂಡಿದೆ.

2019ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಜೆ.ಎನ್. ಶ್ರೀನಿವಾಸ್‌ ದಂಪತಿ ತಮ್ಮನ್ನು ಸರಿಯಾಗಿ ಕಾಣುತ್ತಿಲ್ಲ ಎಂಬ ಬೇಗುದಿಯಿಂದ ಕೈ ಬಿಟ್ಟು ಕಮಲ ಪಾಳೆಯ ಸೇರಿದ ಕೆಲವೇ ದಿನಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಪೈಪೋಟಿಯ ನಡುವೆಯೂ ನಿರೀಕ್ಷೆಯಂತೆ ಗೆಲ್ಲುವ ಮೂಲಕ ಕಾಂಗ್ರೆಸ್‌ ಗೆ ಮರ್ಮಾಘಾತ ಉಂಟು ಮಾಡಿದರೆ, ಬಿಜೆಪಿಯ ಕಮಲ ಉತ್ತರದಲ್ಲಿ ಇನ್ನೂ ಆಳವಾಗಿ ಬೇರೂರುವಂತೆ ಮಾಡಿದ್ದಾರೆ.

ಉಪ ಚುನಾವಣೆ ಘೋಷಣೆ ಆದ ನಂತರದ ಭಾರೀ ರಾಜಕೀಯ ಲೆಕ್ಕಾಚಾರ ನಡೆದವು. ಕಾಂಗ್ರೆಸ್‌ ಅಚ್ಚರಿ ಎನ್ನುವಂತೆ 37ನೇ ವಾರ್ಡ್‌ನಲ್ಲಿ ಶಿಕ್ಷಕಿಯಾಗಿರುವ ರೇಖಾರಾಣಿ ಅಖಾಡಕ್ಕಿಳಿಸುವ ಮೂಲಕ ಬಿಜೆಪಿಗೆ ಸೆಡ್ಡು ಹೊಡೆಯಿತು. ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌, ಶಾಸಕ ಡಾ| ಶಾಮನೂರು ಶಿವಶಂಕರಪ್ಪ, ಡಾ| ಪ್ರಭಾ ಮಲ್ಲಿಕಾರ್ಜುನ್‌ ಬಿರುಸಿನ ಪ್ರಚಾರವನ್ನೂ ನಡೆಸಿದರು. ಬಿಜೆಪಿಯ ಈ ವಾರ್ಡ್‌ ಕಳೆದುಕೊಳ್ಳಬಹುದು ಎಂಬ ಮಾತುಗಳು ಪ್ರಬಲವಾಗಿ ಕೇಳಿ ಬಂದವು. ಆದರೂ ಅಂತಿಮವಾಗಿ ಬಿಜೆಪಿ ಗೆಲ್ಲುವ ಮೂಲಕ ಕಾಂಗ್ರೆಸ್‌ ತೆಕ್ಕೆಯಲ್ಲಿದ್ದ ವಾರ್ಡ್‌ ಗಳಿಸಿಕೊಂಡಿತು. ಎಸ್‌. ಶ್ವೇತಾ 793 ಮತಗಳ ಭರ್ಜರಿ ಜಯ ಸಾಧಿಸಿರುವುದು ಮುಂದಿನ ಚುನಾವಣಾ ಲೆಕ್ಕಾಚಾರಕ್ಕೆ ಬಿಜೆಪಿಗೆ ಭಾರೀ ಬೂಸ್ಟ್‌ ನೀಡಿದೆ.

ತೀವ್ರ ಕುತೂಹಲ ಕೆರಳಿಸಿದ್ದ 28ನೇ ವಾರ್ಡ್‌ನಲ್ಲಿ ಬಿಜೆಪಿಯ ಜೆ.ಎನ್. ಶ್ರೀನಿವಾಸ್‌ ಅವರನ್ನು ಸೋಲಿಸಲೇಬೇಕು ಎಂದು ಪಕ್ಕದ ವಾರ್ಡ್‌ನ ಹುಲ್ಮನಿ ಗಣೇಶ್‌ ಅವರನ್ನ ಕಣಕ್ಕಿಳಿಸಲಾಯಿತು. ಜೆಡಿಎಸ್‌ ಅಭ್ಯರ್ಥಿಯನ್ನು ಕಾಂಗ್ರೆಸ್‌ ಗೆ ಸೇರಿಸಿಕೊಳ್ಳಲಾಯಿತು. ಸ್ವತಃ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌ ಒಂದು ಕಾಲದ ತಮ್ಮ ಶಿಷ್ಯನ ಸೋಲಿಸಲು ಪ್ರಚಾರವನ್ನೂ ನಡೆಸಿದರು. ಅಲ್ಪಸಂಖ್ಯಾತ ಸಮುದಾಯದ ಮತಗಳು ಬಿಜೆಪಿಗೆ ದಕ್ಕಲಾರವು, ವಿಭಜನೆ ಆಗಿ ಕಾಂಗ್ರೆಸ್‌ ಗೆಲ್ಲಲಿದೆ ಎಂಬ ಲೆಕ್ಕಾಚಾರವೂ ಇತ್ತು. ಆದರೆ ಬಿಜೆಪಿಯ ನಡೆಸಿದ ಪ್ರಚಾರ, ಹೆಣೆದ ಗೆಲುವಿನ ತಂತ್ರ ಮತ್ತು ಜೆ.ಎನ್. ಶ್ರೀನಿವಾಸ್‌ ಹೊಂದಿರುವ ಬಲಾಡ್ಯ ಮತ ಬ್ಯಾಂಕ್‌ ಕಮಲ ಅರಳಲು ಸಹಕಾರಿಯಾಯಿತು.

ಈಗ ಸಮಬಲ

ಒಟ್ಟಾರೆ 45 ಸದಸ್ಯತ್ವ ಬಲದ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನಾಲ್ವರು ಪಕ್ಷೇತರರು, ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರ ಬೆಂಬಲದೊಂದಿಗೆ ರಾಜಕೀಯ ಚಾಣಾಕ್ಷತೆಯ ಮೂಲಕ ಅಧಿಕಾರ ನಡೆಸುತ್ತಿದೆ. ಎರಡು ವಾರ್ಡ್‌ಗಳಲ್ಲಿನ ಗೆಲುವು ಬಿಜೆಪಿಗೆ ಕಾಂಗ್ರೆಸ್‌ನೊಂದಿಗೆ ಸಮಬಲ ಸಾಧಿಸಲು ನೆರವಾಗಿದೆ. ಈಗ ಪಾಲಿಕೆಯಲ್ಲಿ ಬಿಜೆಪಿ- ಕಾಂಗ್ರೆಸ್‌ ತಲಾ 20 ಸದಸ್ಯರನ್ನು ಹೊಂದಿವೆ. ಕಳೆದ ಚುನಾವಣೆಯಲ್ಲಿ ಬಿಜೆಪಿಗಿಂತಲೂ ಹೆಚ್ಚು ವಾರ್ಡ್‌ ಗೆದ್ದಿದ್ದರೂ ಕಾಂಗ್ರೆಸ್‌ ಮೇಯರ್‌ ಗಾದಿಗೇರುವ ನಿಟ್ಟಿನಲ್ಲಿ ದಿಟ್ಟ ಪ್ರಯತ್ನ ನಡೆಸಲಿಲ್ಲ. ಪ್ರಮುಖವಾಗಿ ತನ್ನದೇ ಸದಸ್ಯರನ್ನು ಹಿಡಿದಿಟ್ಟುಕೊಳ್ಳುವಲ್ಲಿ ವಿಫಲವಾಗಿದೆ. ಈಗ ಎರಡು ವಾರ್ಡ್‌ ಉಪ ಚುನಾವಣೆಯಲ್ಲಿ ಸೋಲುವ ಮೂಲಕ ಕಾಂಗ್ರೆಸ್‌ ಬಲ 23ರಿಂದ 20ಕ್ಕೆ ಕುಸಿದಿದೆ. ಮುಂದಿನ ದಿನಗಳಲ್ಲಿ ಇನ್ನೂ ಇಬ್ಬರು ಕಾಂಗ್ರೆಸ್‌ಗೆ ಕೈ ಕೊಡಬಹುದು ಎಂಬ ಮಾತು ಕೇಳಿ ಬರುತ್ತಿವೆ. ಅದು ನಿಜವಾದಲ್ಲಿ ಕಾಂಗ್ರೆಸ್‌ ಸ್ಥಿತಿ ಇನ್ನೂ ಶೋಚನೀಯವಾಗಲಿದೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿಯೇ ತೀರುವ ಉದ್ದೇಶದಿಂದ ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿಗೆ ಎರಡು ವಾರ್ಡ್‌ಗಳ ಉಪ ಚುನಾವಣೆಯಲ್ಲಿನ ಗೆಲುವು ಟಾನಿಕ್‌. ಇಬ್ಬರು ಸದಸ್ಯರು ತಂದುಕೊಡುವ ಒಂದೊಂದು ಮತ ಗೆಲುವಿನ ಮೆಟ್ಟಿಲುಗಳಾಗಲಿವೆ. ಕಾಂಗ್ರೆಸ್‌ ಈಗಾಲಾದರೂ ಮೈಚಳಿ ಬಿಟ್ಟು ಸನ್ನದ್ಧವಾದರೆ ವಿಧಾನಸಭಾ ಚುನಾವಣೆಯಲ್ಲಿ ಏನಾದರೂ ಆಗಬಹುದು. ಇಲ್ಲದೆ ಹೋದಲ್ಲಿ ಕಮಲ ಪಾಳೆಯದ ಗೆಲುವಿನ ನಾಗಾಲೋಟಕ್ಕೆ ತಡೆ ಇರಲಾರದು ಎಂಬ ಮಾತುಗಳು ಈಗಿನಿಂದಲೇ ಕೇಳಿ ಬರುತ್ತಿವೆ.

-ರಾ. ರವಿಬಾಬು

 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.