ಎಲ್ಲ ದಾನಕ್ಕಿಂತ ರಕ್ತದಾನ ಶ್ರೇಷ್ಠ
Team Udayavani, Sep 21, 2018, 5:34 PM IST
ಹರಪನಹಳ್ಳಿ: ರಕ್ತದಾನ ಎಲ್ಲ ದಾನಕ್ಕಿಂತ ಶ್ರೇಷ್ಠವಾಗಿದ್ದು, ಅಪಘಾತಕ್ಕೀಡಾದ ಸಂದರ್ಭದಲ್ಲಿ ರಕ್ತದ ಅನಿವಾರ್ಯತೆ
ಹೆಚ್ಚಾಗಿರುತ್ತದೆ. ಆಗ ರಕ್ತ ನೀಡುವವನು ನಿಜಕ್ಕೂ ದೇವರಾಗಿ ಕಾಣುತ್ತಾನೆ. ನಾವು ಯಾವುದೇ ದಾನ ಮಾಡದಿದ್ದರೂ ಕಷ್ಟ ಕಾಲದಲ್ಲಿ ರಕ್ತದಾನ ಮಾಡಬೇಕು ಎಂದು ದಾವಣಗೆರೆ ಎಸ್ಎಸ್ ವೈದ್ಯಕೀಯ ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ| ನಂದೀಶ್ ಹೇಳಿದರು.
ಪಟ್ಟಣದ ಎಚ್ಪಿಎಸ್ ಕಾಲೇಜು ಆವರಣದಲ್ಲಿ ಗುರುವಾರ ಎಚ್ಪಿಎಸ್ ಪಪೂ ಮತ್ತು ಪದವಿ ಕಾಲೇಜು ಹಾಗೂ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಸಹಯೋಗದಲ್ಲಿ ತರಳಬಾಳು ಜಗದ್ಗುರು ಲಿಂ| ಶಿವಕುಮಾರ ಸ್ವಾಮೀಜಿಗಳಿಗೆ ಶ್ರದ್ಧಾಂಜಲಿ ಅಂಗವಾಗಿ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಬಹುತೇಕ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ
ಅನೇಕ ಅಭಿಯಾನಗಳನ್ನು ನಡೆಸಿದೆ. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಯುವಸಮೂಹ ರಕ್ತದಾನ ಮಾಡಲು
ಮುಂದೆ ಬರುತ್ತಿಲ್ಲ. ದುಶ್ಚಟಗಳಿಂದ ಯುವಕರು ದೂರ ಉಳಿದು ಇನ್ನೊಬ್ಬರ ಜೀವ ಉಳಿಸಲು ಮುಂದಾಗಬೇಕು
ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ರೆಡ್ಕ್ರಾಸ್ ಅಧ್ಯಕ್ಷ ಡಾ| ರಮೇಶಕುಮಾರ್ ಮಾತನಾಡಿ, ರಕ್ತದಾನ ಒಬ್ಬರ ಜೀವ ಉಳಿಸುತ್ತದೆ. ರಕ್ತದಾನ ಮಾಡಿದಾಗ ನಿಮ್ಮ ದೇಹ ಹೊಸ ರಕ್ತ ಪಡೆಯುವ ಅವಕಾಶ ಸಿಗುತ್ತದೆ. ನಿಮ್ಮ ಆರೋಗ್ಯ ವೃದ್ಧಿಯಾಗುತ್ತದೆ ಎಂದರು.
ಪದವಿ ಕಾಲೇಜ್ ಅಧ್ಯಕ್ಷ ವಕೀಲ ಸಿದ್ದಪ್ಪ ಅಧ್ಯಕ್ಷತೆ ವಹಿಸಿದ್ದರು. ಪಪೂ ಕಾಲೇಜ್ ಪ್ರಾಚಾರ್ಯ ಕೆ.ನೀಲಮ್ಮ, ಪಾಲಿಟೆಟ್ನಿಕ್ ಪ್ರಾಚಾರ್ಯ ಯು.ಜಿ. ಶರಣಪ್ಪ, ಪದವಿ ಪ್ರಾಚಾರ್ಯ ಡಾ| ಬಸವಂತಪ್ಪ, ಸಂಸ್ಥೆಯ ಡಿ.ಸಿ.ಪ್ರದೀಪ್, ಮಂಜುನಾಥ ಮಾಳಗಿ, ರಾಜಪ್ಪ ಶಂಕ್ರಪ್ಪ, ಚಂದ್ರಪ್ಪ, ಎಚ್.ಉಮೇಶ್, ಡಿ.ಎಸ್. ಬಸವರಾಜ್, ಕೆ.ಪಿ.ವೆಂಕಟೇಶ್, ಕೆ.ಎಸ್.ನಾಗರಾಜ್, ಅರುಣಕುಮಾರ್, ಕೆ.ಬಿ.ರವೀಂದ್ರ, ಬಿ.ಟಿ.ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್