ತುಂಬಿದ ಭದ್ರೆಗೆ ಶಾಸಕರಿಂದ ಬಾಗಿನ


Team Udayavani, Jul 30, 2018, 3:39 PM IST

dvg-4.jpg

ಭದ್ರಾವತಿ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉತ್ತಮ ಮಳೆಯಾಗುತ್ತಿದ್ದು ಎಲ್ಲಾ ಜಲಾಶಯಗಳು ಭರ್ತಿಯಾಗಿವೆ ಎಂದು ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು. ಅವರು ಭಾನುವಾರ ಭದ್ರಾ ಜಲಾಶಯದ ಅತಿಥಿ ಗೃಹದ ಮುಂಭಾಗದಲ್ಲಿ ನಡೆದ ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ
ಭಾಗವಹಿಸಿ ಮಾತನಾಡಿದರು.

 ಸತತ ಮೂರು ವರ್ಷಗಳ ಮಳೆ ಕೊರತೆಯಿಂದಾಗಿ ಜಲಾಶಯಗಳು ಭರ್ತಿಯಾಗಿರಲಿಲ್ಲ. ಆದರೆ ಈ ಬಾರಿ
ಉತ್ತಮ ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿದ್ದು ರೈತರ ಮುಖದಲ್ಲಿ ಸಂತಸ ಕಾಣುವಂತಾಗಿದೆ. ಬೆಂಗಳೂರಿನಲ್ಲಿ ಜಲ ಸಂಪನ್ಮೂಲ ಸಚಿವರೊಂದಿಗೆ ನಡೆದ ಸಭೆಯಲ್ಲಿ ಇಲ್ಲಿನ ಶಾಸಕ ಬಿ.ಕೆ. ಸಂಗಮೇಶ್‌ ಸಹ ಪಾಲ್ಗೊಂಡಿದ್ದು ಭದ್ರಾ ಜಲಾಶಯದಿಂದ ನಿರಂತರವಾಗಿ ಕಾಲುವೆಗಳಿಗೆ ನೀರು ಹರಿಸಲು ಸರ್ಕಾರ ಸಮ್ಮತಿ ನೀಡಿದೆ. ಪ್ರತೀ ವರ್ಷ ಇದೇ ರೀತಿ ಉತ್ತಮ ಮಳೆಯಾಗಿ ನಾವೆಲ್ಲರೂ ಜಂಟಿಯಾಗಿ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸುವಂತಾಗಲಿ ಎಂದರು.

ಹರಿಹರದ ಶಾಸಕ ರಾಮಪ್ಪ ಮಾತನಾಡಿ, ಈ ಜಲಾಶಯದಲ್ಲಿ ಅಪಾರ ಪ್ರಮಾಣದ ನೀರನ್ನು ನೋಡಲು ಬರುವ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆಯನ್ನು ಮಾಡಿಲ್ಲ. ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣುತ್ತದೆ. ಈ ಸಮಸ್ಯೆಯನ್ನು ಶೀಘ್ರ ಪರಿಹರಿಸಬೇಕು ಎಂದರು.

ಜಲಾಶಯದ ಪರಿಸರವನ್ನು ಇನ್ನಷ್ಟು ಆಧುನೀಕರಣಗೊಳಿಸಿ ವಿಶ್ವೇಶ್ವರಯ್ಯನವರ ನೆನಪಿಗಾಗಿ ಅವರ ಪುತ್ಥಳಿಯನ್ನು ಇಲ್ಲಿ ಪ್ರತಿಷ್ಠಾಪಿಸಬೇಕು ಎಂದರು. ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ ಕ್ಷೇತ್ರದ ಜೀವನದಿ ಭದ್ರೆಗೆ ಕ್ಷೇತ್ರದ ನಾಗರಿಕರು, ಬೆಂಬಲಿಗರು ಹಾಗೂ ಕುಟುಂಬ ಸದಸ್ಯರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು.

 ಬಾಗಿನ ಸಮರ್ಪಿಸಿ ಮಾತನಾಡಿದ ಅವರು, ನನ್ನನ್ನು ಕ್ಷೇತ್ರದ ಜನತೆ ಶಾಸಕನಾಗಿ ಆರಿಸಿದಾಗಲೆಲ್ಲ ಮಳೆ ಉತ್ತಮವಾಗಿ ಆಗಿ ಭದ್ರಾ ಜಲಾಶಯ ತುಂಬಿದೆ. ನಾನು ಸೋತಾಗ ಜಲಾಶಯ ತುಂಬಿಲ್ಲ. ನಾನು 3ಬಾರಿ ಶಾಸಕನಾದಾಗಾಲೂ ಸಹ ತುಂಬಿದೆ ಎಂದರು.

ತಾವು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿಲ್ಲ. ಆದರೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಮನವಿ ಮಾಡಿದ್ದೇನೆ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಕ್ಷೇತ್ರದ ಜನತೆಯ ಆಶೀರ್ವಾದದಿಂದ ನಾನು ಮಂತ್ರಿಯಾಗುವ ನಂಬಿಕೆ ಇದೆ. ಕಾಂಗ್ರೆಸ್‌ ಹೈಕಮಾಂಡ್‌ಗೆ ತಮಗೆ ಸಚಿವ ಸ್ಥಾನ ನೀಡುವ ಸಂಬಂಧ ಈಗಾಗಲೇ ಮನವರಿಕೆ ಮಾಡಲಾಗಿದೆ. ಶ್ರಾವಣ ಮಾಸದಲ್ಲಿ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಇದ್ದು, ತಮಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಶಾಸಕ ಬಿ.ಕೆ. ಸಂಗಮೇಶ್‌ ದೋಣಿಯಲ್ಲಿ ಭದ್ರಾ ಜಲಾಶಯದ ಮಧ್ಯಭಾಗಕ್ಕೆ ತೆರಳಿ ಬಾಗಿನ ಅರ್ಪಿಸಿದರು. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಅಶೋಕ ನಾಯ್ಕ ಮಾತನಾಡಿ, ಭದ್ರಾ ಜಲಾಶಯ ದಾವಣಗೆರೆ, ಶಿವಮೊಗ್ಗ ಕ್ಷೇತ್ರದ ಜನರ ಜೀವನದ ಅವಿಭಾಜ್ಯ ಅಂಗದಂತಾಗಿದ್ದು ಈ ಜಲಾಶಯ ತುಂಬಿರುವುದು ಕ್ಷೇತ್ರದ ಜನತೆ ಹಾಗೂ ರೈತರಿಗೆ ಬಹಳ ಸಂತಸ ತಂದಿದೆ ಎಂದರು.

ವೇದಿಕೆಯಲ್ಲಿ ಏಕೈಕ ಬಿಜೆಪಿ ಶಾಸಕ: ಕಾಂಗ್ರೆಸ್‌ ಶಾಸಕ ಬಿ.ಕೆ.ಸಂಗಮೇಶ್‌ ಏರ್ಪಡಿಸಿದ್ದ ಬಾಗಿನ ಸಮರ್ಪಣೆಯ
ವೇದಿಕೆ ಕಾರ್ಯಕ್ರಮದಲ್ಲಿ ದಾವಣಗೆರೆ, ಹರಿಹರ ಕ್ಷೇತ್ರದ ಕಾಂಗ್ರೆಸ್‌ ಶಾಸಕರು ಭಾಗವಹಿಸಿದ್ದರು. ಹಾಗಾಗಿ ಭಾಷಣ
ಮಾಡಿದ ಪ್ರತಿಯೊಬ್ಬರೂ ತಮ್ಮ ಭಾಷಣದಲ್ಲಿ ವೇದಿಕೆ ಮೇಲಿರುವ ಕಾಂಗ್ರೆಸ್‌ ಪಕ್ಷದ ಶಾಸಕರೇ, ನಾಯಕರೇ
ಎಂದು ಭಾಷಣ ಮಾಡುತ್ತಿದ್ದರು. 

ಆದರೆ ವೇದಿಕೆಯಲ್ಲಿ ಉಪಸ್ಥಿತರಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಅಶೋಕ ನಾಯ್ಕ ಅವರು ಯಾವಾಗ
ಕಾಂಗ್ರೆಸ್‌ ಸೇರಿದರೆಂದು ಜನರ ಮಾತನಾಡಿಕೊಳ್ಳುತ್ತಿದ್ದರು. ಸ್ವಾಮೀಜಿಗಳಾದ ಸಿದ್ಧರಾಮೇಶ್ವರ, ಲಕ್ಷ್ಮಣಾರ್ಯ ಹಾಗೂ ಕೃಷ್ಣ ಮೂರ್ತಿ ಸೋಮಯಾಜಿ, ಮೌಲಾನಾ ಸಿದ್ದಿಕ್‌, ಡೆವಿಡಾನ್‌, ಮಾಜಿ ಶಾಸಕ ರಾಜೇಶ್‌, ಹೊನ್ನಾಳಿ ಮಾಜಿ ಶಾಸಕ ಶಾಂತನಗೌಡ, ದಾವಣಗೆರೆ ಮೇಯರ್‌ ಪಲ್ಲಾಗಟ್ಟಿ, ಭದ್ರಾವತಿ ಕಾಂಗ್ರೆಸ್‌ ನಗರಾಧ್ಯಕ್ಷ ಚಂದ್ರೇಗೌಡ, ಗ್ರಾಮಾಂತರ ಘಟಕದ ಅಧ್ಯಕ್ಷ ಷಡಾಕ್ಷರಿ,ತಹೀಲ್ದಾರ್‌ ನಾಗರಾಜ್‌, ಮುಖಂಡರಾದ ಬಿ.ಟಿ. ನಾಗರಾಜ್‌, ಮಾಜಿ ಉಪಮೇಯರ್‌ ಮಹಮದ್‌ ಸನಾವುಲ್ಲಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.