ಬಿಎಸ್‌ವೈಯಿಂದ ಲಿಂಗಾಯತರಿಗೆ ಅನ್ಯಾಯ


Team Udayavani, Apr 17, 2017, 1:10 PM IST

dvg2.jpg

ದಾವಣಗೆರೆ: ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರಿಂದಲೇ ರಾಜ್ಯದ ಲಿಂಗಾಯತ ಸಮಾಜಕ್ಕೆ ಅಪಮಾನ, ಅನ್ಯಾಯ ಆಗುತ್ತಿದೆ ಎಂದು ರೇಷ್ಮೆ ಉದ್ಯಮಗಳ ನಿಗಮದ ಮಾಜಿ ಅಧ್ಯಕ್ಷ ಡಿ. ಬಸವರಾಜ್‌ ಹೇಳಿದ್ದಾರೆ. ರಾಜ್ಯದ ಪ್ರಬಲ ಲಿಂಗಾಯತ ಸಮುದಾಯದ 10-12 ಸಂಸದರಲ್ಲಿ ಒಬ್ಬರೇ ಒಬ್ಬರಿಗೆ ಕೇಂದ್ರ ಸಂಪುಟದಲ್ಲಿ ಸಚಿವ  ನ ನೀಡಿಲ್ಲ. ಒಬ್ಬರಿಗೆ ಕೊಟ್ಟಂತೆ ಮಾಡಿ, ಕಿತ್ತು ಹಾಕಿದರು.

ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪನವರ ಕಾರಣದಿಂದಲೇ ಲಿಂಗಾಯತ ಸಮಾಜವನ್ನು ನಿರ್ಲಕ್ಷé ಮಾಡಲಾಗುತ್ತಿದೆ. ಈ ಬಗ್ಗೆ ಒಂದು ಬಾರಿಯೂ ಬಿ.ಎಸ್‌. ಯಡಿಯೂರಪ್ಪ ಪ್ರಧಾನಿ ಮುಂದೆ ಧ್ವನಿ ಎತ್ತಿಲ್ಲ. ಅಂತಹ ನೈತಿಕತೆ, ಶಕ್ತಿ ಅವರಲ್ಲಿ ಇಲ್ಲ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

ಕಡು ಭ್ರಷ್ಟಾಚಾರದ ಕಾರಣಕ್ಕೆ 24 ದಿನ ಜೈಲು ವಾಸ ಅನುಭವಿಸಿರುವ ಯಡಿಯೂರಪ್ಪ ಅವರನ್ನು ಲಿಂಗಾಯತ ಸಮುದಾಯದ ನಾಯಕರು ಎನ್ನಲಾಗುತ್ತಿದೆ. ನಿಜಕ್ಕೂ ಅವರು ಲಿಂಗಾಯತ ನಾಯಕರಲ್ಲ. ಯಾವುದೇ ಭ್ರಷ್ಟಾಚಾರ ಇಲ್ಲದೆ ಜನಸೇವೆ ಮಾಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌, ಶಾಸಕ ಶಾಮನೂರು ಶಿವಶಂಕರಪ್ಪ ನಿಜವಾಗಿಯೂ ಲಿಂಗಾಯತ ನಾಯಕರು ಎಂದು ತಿಳಿಸಿದರು. 

ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆ ಗೆಲುವು ಆಡಳಿತಕ್ಕೆ ಸಿಕ್ಕ ಜನಮನ್ನಣೆ. ಕಾಂಗ್ರೆಸ್‌ ಮುಕ್ತ ಕರ್ನಾಟಕ ಮಾಡುತ್ತೇವೆ ಎಂಬ ಭ್ರಮೆಯಲ್ಲಿದ್ದವರಿಗೆ ತಕ್ಕ ಪಾಠ ಕಲಿಸಿದರು. ಆದರೂ, ಸೋತರು ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ ಬಿಜೆಪಿಯವರು ವರ್ತಿಸುತ್ತಿದ್ದಾರೆ. ನಾನೇ ಅಭ್ಯರ್ಥಿಯೆಂದು ತಿಳಿದುಕೊಂಡು ಮತ ಚಲಾಯಿಸಿ ಎಂದು ಯಡಿಯೂರಪ್ಪ ಹೇಳುತ್ತಿದ್ದರು.

ಅವರು ಯಾವ ಕಾರಣಕ್ಕೂ ಮುಖ್ಯಮಂತ್ರಿ ಆಗಬಾರದು ಎನ್ನುವ ಕಾರಣಕ್ಕಾಗಿಯೇ ಎರಡೂ ಕ್ಷೇತ್ರದಲ್ಲಿ ಮತದಾರರು ಬಿಜೆಪಿಯನ್ನು ಸೋಲಿಸಿದರು ಎಂದರು. ಎರಡು ಕ್ಷೇತ್ರ ಅಭಿವೃದ್ಧಿಪಡಿಸುವ ಬಗ್ಗೆ ರಕ್ತದಲ್ಲಿ ಬರೆದು ಕೊಡುತ್ತೇನೆ ಎಂದು ಯಡಿಯೂರಪ್ಪ ಹೇಳುತ್ತಿದ್ದರು. ಅನೇಕ ಕ್ಷೇತ್ರದಲ್ಲಿ ಇದೇ ಮಾತು ಹೇಳಿರುವ ಅವರು ಒಮ್ಮೆಯೂ ಅತ್ತ ತಿರುಗಿ ನೋಡಿಲ್ಲ.

ಒಬ್ಬ ವ್ಯಕ್ತಿ ಆರೋಗ್ಯವಾಗಿ ಇರಬೇಕಾದರೆ ಕನಿಷ್ಟ ಐದೂವರೆ ಲೀಟರ್‌ ರಕ್ತದ ಅವಶ್ಯಕತೆ ಇದೆ. ಹಾಗಾಗಿ ಯಡಿಯೂರಪ್ಪ ಅವರು ಮತಕ್ಕಾಗಿ ದೇಹದ ರಕ್ತ ಖಾಲಿ ಮಾಡಿಕೊಳ್ಳದಿರಲಿ ಎಂದು ಮನವಿ ಮಾಡಿದರು. ಎರಡು 25 ಸಾವಿರಕ್ಕೂ ಅಧಿಧಿಕ ಮತಗಳಿಂದ ಗೆಲ್ಲುತ್ತೇವೆ. ಒಂದೇ ಒಂದು ಮತದ ಅಂತರ ಕಡಿಮೆಯಾದರೆ ಮುಂದೆ ಯಾವುದೇ ಚುನಾವಣೆಯ ಜವಾಬ್ದಾರಿ ವಹಿಸಿಕೊಳ್ಳುವುದಿಲ್ಲ ಎಂದು ಸಂಸದೆ ಶೋಭಾ ಕರಾಂದ್ಲಾಜೆ ಹೇಳುತ್ತಿದ್ದರು.

25 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಸೋತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಹೇಳಿದಂತೆ  ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಸಬ್‌ ಕ ಸಾತ್‌ ಸಬ್‌ ಕ ವಿಕಾಸ್‌… ಎಂದು ಮೋದಿ ಹೇಳುತ್ತಾರೆ. ಆದರೆ, ಬಿಜೆಪಿಯವರು ಅಲ್ಪಸಂಖ್ಯಾತರಿಗೆ ಸವಿಂಧಾನ ಬದ್ಧವಾಗಿ ಬಜೆಟ್‌ನಲ್ಲಿ ಹಣ ತೆಗೆದರೆ ಕ್ಯಾತೆ ತೆಗೆಯುತ್ತಾರೆ. ಇಂತಹ ದ್ವಂದ್ವ ನೀತಿ ಕೈ ಬಿಡಬೇಕು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯಾನಂದಧಿ ಯೋಗಿಯವರು ಅಲ್ಪಸಂಖ್ಯಾತರಿಗೆ ಶಾದಿಭಾಗ್ಯ ಯೋಜನೆ ಜಾರಿ ಮಾಡುತ್ತಿದ್ದಾರೆ. ಮೀಸಲಾತಿ ರದ್ಧತಿಗೆ ಪ್ರಾಯೋಗಿಕ ವೇದಿಕೆ ನಿರ್ಮಿಸತ್ತಿದ್ದಾರೆ. ಬಿಜೆಪಿಯವರು ಅದನ್ನು ಏಕೆ ವಿರೋಧಿಸುವುದಿಲ್ಲ ಎಂದು ಪ್ರಶ್ನಿಸಿದರು. ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪಿ. ರಾಜ್‌ಕುಮಾರ್‌, ಮುಖಂಡರಾದ ಅಲ್ಲಾವುಲ್ಲಿ ಗಾಜಿಖಾನ್‌, ಅಬ್ದುಲ್‌ ಘನಿ ತಾಹಿರ್‌, ಎಸ್‌.ಎಸ್‌. ಗಿರೀಶ್‌, ಯಾಸಿನ್‌ ಪೀರ್‌ ರಜ್ವಿ, ಡಿ. ಶಿವಕುಮಾರ್‌, ನೂರ್‌ ಅಹ್ಮದ್‌ ಸುದ್ದಿಗೋಷ್ಠಿಯಲ್ಲಿದ್ದರು. 

ಟಾಪ್ ನ್ಯೂಸ್

Kharge 2

Congress ವರಿಷ್ಠರ ಸೂಚನೆಯಂತೆ ವರ್ತಿಸಿ: ಎಂಪಿ ಅಧೀರ್‌ಗೆ ಖರ್ಗೆ ತಾಕೀತು

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kharge 2

Congress ವರಿಷ್ಠರ ಸೂಚನೆಯಂತೆ ವರ್ತಿಸಿ: ಎಂಪಿ ಅಧೀರ್‌ಗೆ ಖರ್ಗೆ ತಾಕೀತು

1-qwewqe

Patanjali ಸೋನ್‌ ಪಾಪಡಿ ಪ್ರಕರಣದಲ್ಲಿ ಮೂವರಿಗೆ ಜೈಲು

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.