ಬಾಬಾಸಾಹೇಬ್‌ ಆಧುನಿಕ ಭಾರತದ ಬುದ್ಧ


Team Udayavani, Apr 15, 2017, 1:06 PM IST

dvg1.jpg

ದಾವಣಗೆರೆ: ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಸಂವಿಧಾನ ನೀಡಿರುವ ಮಹಾನ್‌ ಮಾನವತಾವಾದಿ ಭಾರತರತ್ನ ಡಾ| ಬಿ.ಆರ್‌. ಅಂಬೇಡ್ಕರ್‌ ಆಧುನಿಕ ಭಾರತದ ಬುದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಎಸ್‌. ಮಲ್ಲಿಕಾರ್ಜುನ್‌ ಬಣ್ಣಿಸಿದ್ದಾರೆ. ಶುಕ್ರವಾರ ಮಹಾನಗರಪಾಲಿಕೆ ಆವರಣದಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ರವರ 126ನೇ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್‌ ಸಮಾನತೆಯ ಮಂತ್ರ ಬಿತ್ತಿದ ಆಧುನಿಕ ಭಾರತದ ಮಹಾನ್‌ ಮಾನವತಾವಾದಿ ಎಂದರು.

ಸಾಮಾಜಿಕ ತುಳಿತಕ್ಕೆ ಒಳಗಾಗಿದ್ದ ಬಡ ಕುಟುಂಬದಲ್ಲಿ 1891 ಏ. 14 ರಂದು ಜನಿಸಿದ ಅಂಬೇಡ್ಕರ್‌ ಬಾಲ್ಯದಲ್ಲೇ ಅಸ್ಪೃಶ್ಯತೆ ಎಂಬ ಬೆಂಕಿಯಲ್ಲಿ ಬೆಂದರೂ ದೃತಿಗೆಡದೆ ಸಾಮಾಜಿಕ ಕ್ರೌರ್ಯಕ್ಕೆ ಪ್ರತಿಯಾಗಿ ತಮ್ಮ ಎದೆಯೊಳಗೆ ಅಕ್ಷರಗಳನ್ನು ಬಿತ್ತಿಕೊಂಡು, ಅಪಮಾನದ ಮುಳ್ಳಿನ ಹಾದಿಯಲ್ಲಿ ನಡೆಯುತ್ತಲೇ ಉನ್ನತ ಪದವಿ ಪಡೆಯುತ್ತಾರೆ. ನಿರಂತರ ಪರಿಶ್ರಮ ಮತ್ತು ಅಧ್ಯಯನ ಶೀಲತೆಯಿಂದ ಬಹುದೊಡ್ಡ ವಿದ್ವಾಂಸರಾಗಿ ಹೊರ ಹೊಮ್ಮಿದವರು ಎಂದು ತಿಳಿಸಿದರು.

ಅಂಬೇಡ್ಕರ್‌ ಉದಾತ್ತ ಚಿಂತನೆಗಳ ಮೂಲಕ ಸಾವಿರಾರು ವರ್ಷಗಳಿಂದ ಶೋಷಣೆ, ತುಳಿತಕ್ಕೆ ಒಳಗಾಗಿದ್ದ ತಳ ಸಮುದಾಯಗಳನ್ನು ಒಗ್ಗೂಡಿಸಿ ಕುಡಿವ ನೀರಿನ ಕೆರೆ, ದೇಗುಲ ಪ್ರವೇಶ, ಮನು ಸ್ಮೃತಿ ಭಸ್ಮ ಮುಂತಾದ ಹೋರಾಟಗಳ ಮೂಲಕ ಜಾತಿ ವಿನಾಶಕ್ಕೆ ಶ್ರವಿಸಿದವರು. 20ಕ್ಕೂ ಹೆಚ್ಚು ವಿಭಾಗದಲ್ಲಿ ಅದ್ವಿತೀಯ ಪಾಂಡಿತ್ಯ ಹೊಂದಿದ್ದ ಅವರು ಪ್ರಖರ ಪ್ರಜಾತಂತ್ರಧಿವಾದಿ ಎನ್ನುವುದಕ್ಕೆ ಅವರು ನೀಡಿರುವ ಸಂವಿಧಾನವೇ ಸಾಕ್ಷಿ ಎಂದು ತಿಳಿಸಿದರು. 

ರಾಷ್ಟ್ರಪಿತ ಮಹಾತ್ಮ ಗಾಂಧಿಧೀಜಿಯವರು ಬ್ರಿಟಿಷರ ವಿರುದ್ಧ ಅಹಿಂಸಾತ್ಮಕ ಹೋರಾಟ ನಡೆಸಿ ಭಾರತಕ್ಕೆ ರಾಜಕೀಯ ಸ್ವಾತಂತ್ರ ತಂದು ಕೊಡಲು ಪ್ರಯತ್ನಿಸಿದರೆ ಅಂಬೇಡ್ಕರ್‌ ಭಾರತಕ್ಕೆ ರಾಜಕೀಯ ಸ್ವಾತಂತ್ರಕ್ಕಿಂತಲೂ ಮೊದಲು ಸಾಮಾಜಿಕ ಸ್ವಾತಂತ್ರ  ದೊರೆಯಬೇಕು ಎಂದು ಪ್ರತಿಪಾದಿಸುತ್ತಿದ್ದರು.

ಸಾಮಾಜಿಕ ಕ್ರಾಂತಿಯ ಹೊರತಾಗಿ ಸಮಾಜದಲ್ಲಿರುವ ಅಸಮಾನತೆಯನ್ನು ಹೋಗಲಾಡಿಸಲು ಸಾಧ್ಯವಿಲ್ಲ ಎಂದು ಬಲವಾಗಿ ನಂಬಿದ್ದ ಅವರು ಸಂವಿಧಾನದಲ್ಲಿ ಸಮಾನತೆಗೆ ಅತಿ ಹೆಚ್ಚಿನ ಮಹತ್ವ ನೀಡಿದ್ದಾರೆ ಎಂದು ತಿಳಿಸಿದರು. ಅಂಬೇಡ್ಕರ ಅಧ್ಯಕ್ಷತೆಯಲ್ಲಿ ರೂಪಿತವಾದ ಭಾರತ ಸಂವಿಧಾನ ಜಗತ್ತಿನಲ್ಲೇ ಶ್ರೇಷ್ಠ ಸಂವಿಧಾನವೆಂದು ಪರಿಗಣಿಸಲ್ಪಟ್ಟಿದೆ. 

ಅದಕ್ಕೆ ಕಾರಣ ಅಂಬೇಡ್ಕರ್‌ ಅವರಲ್ಲಿದ್ದ ಬಹುತ್ವ ಭಾರತದ ಸಾಂಸ್ಕೃತಿಕ ರಾಜಕೀಯ ನೆಲೆಗಳ ಜಾಗತಿಕ ತಿಳುವಳಿಕೆ, ಸರ್ವಧರ್ಮ ಸಮನ್ವಯ ಮನೋಭಾವ ಹಾಗೂ ಬಹು ಸಂಸ್ಕೃತಿಗಳ ಮಾನ್ಯತೆ ಎಂದು ತಿಳಿಸಿದರು.

ಅಂಬೇಡ್ಕರ್‌ ಕಾನೂನು ಸಚಿವರಾಗಿ ಹಿಂದೂ ಕೋಡ್‌ ಬಿಲ್‌ ಜಾರಿಗೆ ತರುವ ಮೂಲಕ ಮಹಿಳೆಯರಿಗೆ ಆಸ್ತಿ ಹಕ್ಕು, ವಿವಾಹ ವಿಚ್ಛೇದನ ಪಡೆಯುವ ಹಕ್ಕು, ಬಹು ಪತ್ನಿತ್ವ ನಿರಾಕರಣೆ, ವರದಕ್ಷಿಣೆ ನಿಷೇಧ, ಅಂತರ್ಜಾತಿ ವಿವಾಹಕ್ಕೆ ಅವಕಾಶ, ತಾಯ್ತನದ ಹೆರಿಗೆ ರಜೆ ಸೌಲಭ್ಯ ಮುಂತಾದ ಸೌಲಭ್ಯ ಒದಗಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಕಿದ್ದಾರೆ ಎಂದು ತಿಳಿಸಿದರು.    

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

13-davangere

Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು

drowned

Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.