ದಾವಣಗೆರೆ ಮಹಾನಗರ ಪಾಲಿಕೆಯ ಬಜೆಟ್ ಮಂಡನೆ; ಕಿವಿಗೆ ಹೂವಿಟ್ಟು ಕಾಂಗ್ರೆಸ್ ಪ್ರತಿಭಟನೆ


Team Udayavani, Feb 21, 2023, 1:22 PM IST

Budget presentation of Davangere Municipal Corporation

ದಾವಣಗೆರೆ: ಮಹಾನಗರ ಪಾಲಿಕೆಯ ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಮೇಲ್ಮನವಿ ಸ್ಥಾಯಿ ಸಮಿತಿ ಅಧ್ಯಕ್ಷ ಸೋಗಿ ಶಾಂತಕುಮಾರ್ 17.91 ಕೋಟಿ ಉಳಿತಾಯದ ಬಜೆಟ್ ಮಂಡಿಸಿದರು.

ಮಂಗಳವಾರ ಮೇಯರ್ ಜಯಮ್ಮ ಗೋಪಿನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸತತ ಎರಡನೇಯ ಬಜೆಟ್ ಮಂಡಿಸಿದರು. ಆರಂಭಿಕ ಶಿಲ್ಕು 6725.65 ಲಕ್ಷ, 16, 401. 85   ರಾಜ್ಯ ಸರ್ಕಾರದ ಅನುದಾನ, ತೆರಿಗೆ ಮತ್ತಿತರ ಮೂಲಗಳಿಂದ ಒಟ್ಟು 49063.60 ಆದಾಯ ನಿರೀಕ್ಷಿಸಲಾಗಿದೆ.

ದಾವಣಗೆರೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಿವಿಧ ಜನಪರ ಅಭಿವೃದ್ಧಿ ಕಾರ್ಯ, ನೌಕರರು ಮತ್ತು ಸಿಬ್ಬಂದಿ ವೇತನ, ನಿರ್ವಹಣೆ ಇತರೆಗೆ ಖರ್ಚು 53998.17 ಲಕ್ಷ ಅಂದಾಜಿಸಲಾಗಿದೆ.

ಮುಂದುವರಿದ ಶಿಲ್ಕು, ರಾಜ್ಯ ಸರ್ಕಾರದ ಅನುದಾನ, ತೆರಿಗೆ ಸಂಗ್ರಹ, ಇತರೆ ಮೂಲಗಳಿಂದ ಬರುವ 49063.60 ಲಕ್ಷ  ಆದಾಯದಲ್ಲಿ ಅಭಿವೃದ್ಧಿ ಕಾರ್ಯ, ವೇತನ, ನಿರ್ವಹಣೆ ಒಳಗೊಂಡಂತೆ ಇತರೆಯದಕ್ಕೆ 53998.17 ಲಕ್ಷ  ಖರ್ಚು ಮಾಡಿದರೂ 1791.08 ಲಕ್ಷ ಉಳಿತಾಯ ಆಗಲಿದೆ ಎಂದು ಸೋಗಿ ಶಾಂತಕುಮಾರ್ ತಿಳಿಸಿದರು.

ಮೂರನೇ ಬಾರಿಗೂ ಉಳಿತಾಯದ ಬಜೆಟ್ ಮಂಡಿಸಲಾಗಿದೆ ಎಂದು ಬಿಜೆಪಿ ಸದಸ್ಯರು ಕರತಾಡನ, ಮೇಜು ಕುಟ್ಟುವ ಮೂಲಕ ಸ್ವಾಗತಿಸಿದರು.

ಇದನ್ನೂ ಓದಿ:ಏ.1ರಿಂದಲೇ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್: ಸಿಎಂ ಬೊಮ್ಮಾಯಿ

ಬಿಜೆಪಿಯವರ ಆಡಳಿತದ ಕೊನೆಯ ಬಜೆಟ್. ಇದರಲ್ಲಿ ಯಾವುದೇ ರೀತಿಯಲ್ಲಿ ಜನರಿಗೆ ಅನುಕೂಲ ಆಗುವ ಕೆಲಸಗಳೇ ಇಲ್ಲ. ಬರೀ ಅಂಕಿ ಅಂಶಗಳಿವೆ. ಕಳೆದ ವರ್ಷದ ಬಜೆಟ್ ನಲ್ಲಿ ಘೋಷಣೆ ಮಾಡಿರುವ ಯಾವುದೇ ಕೆಲಸ ಮಾಡಿಲ್ಲ. ಇದೊಂದು ನಿರಾಸದಾಯಕ ಬಜೆಟ್ ಎಂದು ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು.

ನಂತರ ನಡೆದ ಚರ್ಚೆಯಲ್ಲಿ ಬಿಜೆಪಿ ಸದಸ್ಯರು ಬಲವಾಗಿ ಬಜೆಟ್ ಅನ್ನು ಸಮರ್ಥಿಸಿಕೊಂಡರು. ಕಾಂಗ್ರೆಸ್‌ನ ಜಿ.ಎಸ್. ಮಂಜುನಾಥ್, ಎ. ನಾಗರಾಜ್, ಕೆ. ಚಮನ್ ಸಾಬ್ ವಿರೋಧ ವ್ಯಕ್ತಪಡಿಸಿದರು.  ಉಪ ಮೇಯರ್ ಗಾಯತ್ರಿಬಾಯಿ ಖಂಡೋಜಿರಾವ್, ಸ್ಥಾಯಿ ಸಮಿತಿ ಅಧ್ಯಕ್ಷ ರಾದ ರಾಕೇಶ್ ಜಾಧವ್, ಬಿ.ಎಚ್. ಉದಯ್ ಕುಮಾರ್, ಎಸ್. ಮಂಜಾನಾಯ್ಕ, ಆಯುಕ್ತೆ ಜಿ. ರೇಣುಕಾ ಇತರರು ಇದ್ದರು.

ಹೂವು ಮುಡಿದರು

ಕಳೆದ ಫೆ. 17 ರಂದು ವಿಧಾನ ಸಭೆಯಲ್ಲಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಿದಾಗ ಕಾಂಗ್ರೆಸ್ ಸದಸ್ಯರು ಕಿವಿಗೆ ಹೂವಿಟ್ಟುಕೊಂಡು ಪ್ರತಿ‌ಭಟನೆ ವ್ಯಕ್ತಪಡಿಸಿದಂತೆ ಮಹಾನಗರ ಪಾಲಿಕೆ ಸದಸ್ಯರೂ ಕಿವಿಗೆ ಹೂವಿಟ್ಟುಕೊಳ್ಳುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.