ನೀರಿನ ಸಮಸ್ಯೆ ಆಗದಂತೆ ಎಚ್ಚ ರವಹಿಸಿ


Team Udayavani, Jun 26, 2018, 10:17 AM IST

davanagere-2.jpg

ಹರಪನಹಳ್ಳಿ: ತಾಲೂಕಿನ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿರುವ ಹಿನ್ನೆಲೆ ಅಧಿಕಾರಿಗಳು ಖುದ್ದಾಗಿ ಹಳ್ಳಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಶಾಸಕ ಜಿ. ಕರುಣಾಕರ ರೆಡ್ಡಿ ತಾಕೀತು ಮಾಡಿದರು.

ಪಟ್ಟಣದ ತಾಲೂಕು ಪಂಚಾಯತ್‌ ರಾಜೀವ್‌ ಗಾಂಧಿ  ಸಭಾಂಗಣದಲ್ಲಿ ಸೋಮವಾರ ನಡೆದ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ. ಈ ಬಗ್ಗೆ ಸಮಗ್ರ ವರದಿಯನ್ನು ನೀಡಿ. ಪ್ಲೋರೈಡ್‌ಯುಕ್ತ ಅಂಶ ನಿರ್ಮೂಲನೆ ಮಾಡುವ ಬಗ್ಗೆ ಗಮನ ಹರಿಸಿ ಎಂದು ಕುಡಿಯುವ ನೀರು ನೈರ್ಮಲ್ಯ ಇಲಾಖೆ ಸೆಕ್ಸನ್‌ ಅಧಿಕಾರಿಗಳಿಗೆ ಸೂಚಿಸಿದರು.

ನೀರಿನ ಸಮಸ್ಯೆ ಇರುವ ಏಳು ಗ್ರಾಮಗಳಲ್ಲಿ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಎಇಇ ಜಯಣ್ಣ ಅವರು ಸಭೆಗೆ ಮಾಹಿತಿ ನೀಡಿದರು.

ಕೃಷಿ ಇಲಾಖೆಯ ನಾರನಗೌಡ ಅವರು ಜೂನ್‌ ವರೆಗೆ 252 ಮಿ.ಮೀ. ಮಳೆ ಬಂದಿದೆ. ಶೇ. 29ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಜೂನ್‌ ತಿಂಗಳಲ್ಲಿ ಮಾತ್ರ ಸ್ವಲ್ಪ ಮಳೆಯ ಕೊರತೆ ಕಂಡು ಬಂದಿದೆ ಎಂದುತಿಳಿಸಿದರು.

ಸಹಾಯಕ ಕೃಷಿ ನಿರ್ದೇಶಕ ಆರ್‌. ತಿಪ್ಪೇಸ್ವಾಮಿ ಮಾತನಾಡಿ, ಕಳೆದ ಸಾಲಿನಲ್ಲಿ ಹಿಂಗಾರು ಹಂಗಾಮಿನಲ್ಲಿ ಮಾತ್ರ ವಿಮಾ ಪರಿಹಾರ ಬಂದಿದೆ. ಮುಂಗಾರಿನ ವಿಮೆ ಬಂದಿಲ್ಲ ಎಂದು ತಿಳಿಸಿದರು. ಸಂಧ್ಯಾ ಸುರಕ್ಷಾ,ವಿಧವಾ ಸೇರಿದಂತೆ ವಿವಿಧ ವೇತನಗಳು ಸರಿಯಾಗಿ ಬರುತ್ತಿಲ್ಲ ಎಂಬ ಬಗ್ಗೆ ದೂರುಗಳಿವೆ. ಸಮಸ್ಯೆ ಇದ್ದರೆ ಸರಿಪಡಿಸಿ ವೇತನಗಳನ್ನು ಫಲಾನುಭವಿಗಳಿಗೆ ಮುಟ್ಟಿಸಿ ಎಂದು ಸೂಚಿಸಿದ ಶಾಸಕರು, ಶೀಘ್ರ ಕಂದಾಯ ಇಲಾಖೆ ಸಿಬ್ಬಂದಿ ಸಭೆ ಕರೆದು ಈ ಕುರಿತು ಚರ್ಚೆ ನೆಡಸಲಾಗುವುದು ಎಂದರು.

ಹರಪನಹಳ್ಳಿ ತಾಲೂಕಿನಲ್ಲಿ 120 ಜನ ಶಿಕ್ಷಕರ ಕೊರತೆ ಇದ್ದು, 263 ಶಾಲಾ ಕೊಠಡಿಗಳು ಶಿಥಿಲಾವಸ್ಥೆಗೆ ತಲುಪಿವೆ. ಹಲುವಾಗಲು ಜೂನಿಯರ್‌ ಕಾಲೇಜನ್ನು ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಎಂದು ಮಂಜೂರಾತಿ ನೀಡಿ ಅಭಿವೃದ್ಧಿಗೊಳಿಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್‌. ರವಿ ಮಾಹಿತಿ ನೀಡಿದರು.

ಎಸ್‌ಡಿಎಂಸಿ ಅವರಿಗೆ ನೀಡಿದ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗಳನ್ನು ಹಿಂದಕ್ಕೆ ಪಡೆದು ಭೂ ಸೇನಾ ನಿಗಮಕ್ಕೆ ನೀಡಿ ಎಂದು ಶಾಸಕರು ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ ಸೂಚಿಸಿದರು. ತೆಲಗಿ, ಅರಸಿಕೇರಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಇದೆ ಎಂದು ತಾಲೂಕು ವೈದ್ಯಾಧಿಕಾರಿ ರೇಣುಕಾರಾಧ್ಯ ಸಭೆಯ ಗಮನಕ್ಕೆ ತಂದರು.

ಸಭೆಗೆ ಗೈರಾದ ಅಂಬೇಡ್ಕರ, ದೇವರಾಜ ಅರಸು ಹಾಗೂ ಎಸ್ಟಿ ಅಭಿವೃದ್ದಿ ನಿಗಮಗಳ ಅಧಿಕಾರಿಗಳಿಗೆ ಶೋಕಾಸ್‌ ನೋಟಿಸ್‌ ನೀಡಲು ಶಾಸಕ ಕರುಣಾಕರರೆಡ್ಡಿ ಅವರು ತಾಲೂಕು ಪಂಚಾಯತ್‌ ಇಒ ತಿಪ್ಪೇಸ್ವಾಮಿ ಅವರಿಗೆ ಸೂಚಿಸಿದರು. ಜಗಳೂರು ಶಾಸಕ ಎಸ್‌.ವಿ. ರಾಮಚಂದ್ರಪ್ಪ,ತಾಪಂ ಅಧ್ಯಕ್ಷೆ ಅನ್ನಪೂರ್ಣಮ್ಮ, ಉಪಾಧ್ಯಕ್ಷ ಎಲ್‌.
ಮಂಜನಾಯ್ಕ, ಜಿಪಂ ಸದಸ್ಯರಾದ ಡಾ| ಮಂಜುನಾಥ ಉತ್ತಂಗಿ, ಎಚ್‌.ಬಿ. ಪರಶುರಾಮಪ್ಪ, ಕೆ.ಆರ್‌. ಜಯಶೀಲಾ, ಸುವರ್ಣಾ ನಾಗರಾಜ, ರಶ್ಮಿ ರಾಜಪ್ಪ, ತಹಶೀಲ್ದಾರ್‌ ಗುರುಬಸವರಾಜ, ಯೋಜನಾಧಿಕಾರಿ ವಿಜಯಕುಮಾರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.