ಜಗಳೂರು ಪಟ್ಟಣದ ತುಂಬ ಬಿಡಾಡಿ ದನಗಳ ಹಾವಳಿ

ದನಗಳು ವಾಹನಗಳ ಸಂಚಾರಕ್ಕೆ ಅಡ್ಡಿ-ಅಪಘಾತಗಳಿಗೂ ಕಾರಣ

Team Udayavani, May 28, 2019, 1:55 PM IST

davanagere..4

ಜಗಳೂರು : ಬಿಡಾಡಿದನಗಳ ಹಾವಳಿ ನಿಯಂತ್ರಿಸಲು ಪಟ್ಟಣ ಪಂಚಾಯಿತಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸಾರ್ವಜನಿಕರ ಆರೋಪಿಸಿದ್ದಾರೆ.

ಸಾಮಾನ್ಯವಾಗಿ ರಾಸುಗಳ‌ನ್ನು ತಮ್ಮ ತಮ್ಮ ಮನೆ, ಜಮೀನು, ಕಣದಲ್ಲಿ ಕಟ್ಟಿ ಸಾಕಣೆ ಮಾಡುತ್ತಾರೆ. ಆದರೆ ಪಟ್ಟಣದಲ್ಲಿ ಪರಿಸ್ಥಿತಿಯೇ ಬೇರೆಯಾಗಿದೆ. ಮಾಲೀಕರು ತಮ್ಮ ದನ ಕರುಗಳನ್ನು ರಸ್ತೆಗೆ ಬಿಟ್ಟು ಸಾಕಣಿಕೆ ಮಾಡುತ್ತಿದ್ದಾರೆ ಎಂಬ ಕೂಗು ಕೇಳಿ ಬರುತ್ತಿದೆ.

ಪಟ್ಟಣದ ರಸ್ತೆಯ ತುಂಬೆಲ್ಲ ನೂರಾರು ಬಿಡಾಡಿ ದನಗಳು ಕಾಣಸಿಗುತ್ತಿದ್ದು, ಯಾವ ರಸ್ತೆಯಲ್ಲಿ ನೋಡಿದರೂ ಸಹ ಇವುಗಳದ್ದೇ ಕಾರು ಬಾರು. ಹೀಗಾಗಿ ದ್ವಿಚಕ್ರ ವಾಹನ ಹಾಗೂ ಬಸ್‌, ಲಾರಿಗಳ ಸಂಚಾರ ಕಷ್ಟಕರವಾಗಿದ್ದು, ಅಲ್ಲದೇ ಇವುಗಳು ಅಡ್ಡ ಬರುವುದರಿಂದ ಆಪಘಾತಗಳು ಸಹ ಸಂಭವಿಸಿವೆ.

ದ್ವಿಚಕ್ರ ವಾಹನಗಳಲ್ಲಿರುವ ವಸ್ತುಗಳೇ ಮಾಯ: ಪಟ್ಟಣದ ಅಂಬೇಡ್ಕರ್‌ ವೃತ್ತ , ಹೊಸ ಬಸ್‌ ನಿಲ್ದಾಣ, ಎಸ್‌ಬಿಐ ಬ್ಯಾಂಕ್‌ ರಸ್ತೆ , ಮರೆನಹಳ್ಳಿ ರಸ್ತೆ ಸಮಿಪದ ಪಾರ್ಕಿಂಗ್‌ ಜಾಗದಲ್ಲಿ ವಾಹನಗಳನ್ನು ನಿಲ್ಲಿಸಿದರೆ ಅವುಗಳಲ್ಲಿರುವ ಆಹಾರ ಪದಾರ್ಥಗಳು, ದಿನಸಿ ಸಾಮಗ್ರಿ, ಹಣ್ಣು-ತರಕಾರಿಗಳನ್ನು ಬಿಡಾಡಿ ದನಗಳು ಕ್ಷಣ ಮಾತ್ರದಲ್ಲಿ ತಿನ್ನುತ್ತವೆ ಎಂದು ಹೇಳುತ್ತಾರೆ ದ್ವಿಚಕ್ರ ವಾಹನ ಸವಾರ ರಾಜಪ್ಪ.

ಮುಖ್ಯ ವೃತ್ತದಲ್ಲಿ ನಿದ್ರೆ: ಹಗಲು, ಇರುಳು ದನಗಳು ಗಾಂಧಿ ವೃತ್ತ ಹಾಗೂ ಮುಖ್ಯ ರಸ್ತೆಯಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತವೆ. ನಿದ್ರಗೂ ಜಾರುತ್ತವೆ. ಇದರಿಂದ ಬಸ್‌ ಚಾಲನೆ ಕಷ್ಟವಾಗಿದೆ. ಎಷ್ಟೇ ಹಾರನ್‌ ಹೊಡೆದರೂ ಸಹ ಜಾಗ ಬಿಡುವುದಿಲ್ಲ ಎನ್ನುತ್ತಾರೆ ಬಸ್‌ ಚಾಲಕ ನಂಜಪ್ಪ.

ರಸ್ತೆ ಬದಿ ಬಿದ್ದ ತರಕಾರಿ, ಹೋಟೆಲ್ ತ್ಯಾಜ್ಯವೇ ಇವುಗಳ ಆಹಾರ: ರಸ್ತೆ ಬದಿಯಲ್ಲಿ ಹಣ್ಣು ಹಾಗೂ ತರಕಾರಿ ವ್ಯಾಪಾರಿಗಳು ಎಸೆಯುವ ಕೊಳೆತ ಹಣ್ಣು, ತರಕಾರಿಗಳೇ ಇವುಗಳಿಗೆ ಆಹಾರ. ದಾಹ ಹಿಂಗಿಸಲು ಚರಂಡಿ ನೀರನ್ನೇ ಅವಲಂಬಿಸುತ್ತವೆ.

ರಸ್ತೆಯಲ್ಲಿ ಬಿಟ್ಟು ಹಣಗಳಿಸುವ ಮಾಲೀಕರು: ಬಿಡಾಡಿ ದನಗಳನ್ನು ರಸ್ತೆಯಲ್ಲಿಯೇ ವರ್ಷಾನುಗಟ್ಟಲೇ ಬಿಟ್ಟು ಅವು ಚನ್ನಾಗಿ ಬೆಳೆದ ಮೇಲೆ ಮಾರಾಟ ಮಾಡಿಕೊಂಡು ಹಣ ಗಳಿಸುವ ಸುಲಭ ಮಾರ್ಗವನ್ನು ಕೆಲವರು ಕಂಡು ಕೊಂಡಿದ್ದರೆ, ಇವರಿಗೆ ಅಧಿಕಾರಿಗಳೂ ಪರೋಕ್ಷವಾಗಿ ಸಹಕಾರ ನೀಡುತಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ಬಿಡಾಡಿ ದನಗಳ ನಿಯಂತ್ರಣಕ್ಕೆ ಪಟ್ಟಣ ಪಂಚಾಯ್ತಿ ಕ್ರಮ ಕೈಗೊಳ್ಳಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

ಇಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್‌

ಇಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.