ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ
Team Udayavani, May 18, 2018, 2:41 PM IST
ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು. ಕೆ.ಬಿ. ಬಡಾವಣೆಯಲ್ಲಿನ ಪಕ್ಷದ ಕಚೇರಿ ಬಳಿ ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ನೇತೃತ್ವದಲ್ಲಿ ಪಟಾಕಿ, ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದ ಕಾರ್ಯಕರ್ತರು, ಪ್ರಧಾನಮಂತ್ರಿ ನರೇಂದ್ರ ಮೋದಿ, ಸಂಸದ ಜಿ.ಎಂ. ಸಿದ್ದೇಶ್ವರ್, ಯಡಿಯೂರಪ್ಪ ಪರ ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ಯಶವಂತರಾವ್, ರಾಜ್ಯ ವಿಧಾನಸಭೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ
104 ಸ್ಥಾನ ಪಡೆಯುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹಾಗಾಗಿಯೇ ರಾಜ್ಯಪಾಲ ವಜುಭಾಯ್ ವಾಲಾ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದಾರೆ. 15 ದಿನದೊಳಗೆ ಬಹುಮತ ಸಾಬೀತುಪಡಿಸಲು ಸೂಚಿಸಿದ್ದಾರೆ. ಯಡಿಯೂರಪ್ಪನವರು ಬಹುಮತ ಸಾಬೀತುಪಡಿಸಲಿದ್ದು, 5 ವರ್ಷಗಳ ಕಾಲ ಆಡಳಿತ ನಡೆಸಲಿದ್ದಾರೆ ಎಂದರು.
ಯಡಿಯೂರಪ್ಪನವರ ವ್ಯಕ್ತಿತ್ವ, ಹೋರಾಟ ಮನೋಭಾವಕ್ಕೆ ಇಡೀ ರಾಜ್ಯದ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ
ಕಾಂಗ್ರೆಸ್, ಜೆಡಿಎಸ್ನಿಂದ ಆಯ್ಕೆಯಾದ ಕೆಲ ಶಾಸಕರು ಬೆಂಬಲಿಸಲಿದ್ದಾರೆ. ಹಾಗಾಗಿ ಮುಂದಿನ 5 ವರ್ಷದಲ್ಲಿ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲು ನಮ್ಮ ಪಕ್ಷ ಶ್ರಮಿಸಲಿದೆ ಎಂದು ಅವರು ತಿಳಿಸಿದರು.
ಪಕ್ಷದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎಚ್.ಸಿ. ಜಯಮ್ಮ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪಿ.ಸಿ. ಶ್ರೀನಿವಾಸ್, ಮುಖಂಡರಾದ ಕೆ. ಹೇಮಂತಕುಮಾರ್, ಶಿವನಗೌಡ ಪಾಟೀಲ್, ರಮೇಶ್ ನಾಯ್ಕ, ಎಚ್.ಎನ್. ಶಿವಕುಮಾರ್, ಜಯಲಕ್ಷ್ಮಿ ಮಹೇಶ್ ಸೇರಿದಂತೆ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ