ಶತಮಾನದ ಸೇತುವೆ ಅಂದಗೆಡಿಸಿದ ಗಿಡ-ಗಂಟಿ!

ಇಕ್ಕೆಲಗಳಲ್ಲಿ ಗಿಡ ಬೆಳೆದಿದ್ದರಿಂದ ತುಂಗಭದ್ರಾ ಸೇತುವೆ ಸುರಕ್ಷತೆಗೆ ಅಪಾಯ ಭೀತಿ

Team Udayavani, May 2, 2022, 3:41 PM IST

century-bridge

ಹೊನ್ನಾಳಿ: ಹೊಸಪೇಟೆ-ಶಿವಮೊಗ್ಗ ರಾಜ್ಯ ಹೆದ್ದಾರಿ 25ರಲ್ಲಿ ಹೊನ್ನಾಳಿ ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಾಣಗೊಂಡಿರುವ ಸೇತುವೆಗೀಗ ಶತಮಾನೋತ್ಸವ ಸಂಭ್ರಮ. ಆದರೆ ಇಕ್ಕೆಲಗಳಲ್ಲಿ ಗಿಡ ಗಂಟಿಗಳು ಬೆಳೆದು ಸೇತುವೆಯ ಸುರಕ್ಷತೆಗೆ ಅಪಾಯ ತಂದೊಡ್ಡಿವೆ.

ಇದೇ ತಿಂಗಳು ಅಥವಾ ಜೂನ್‌ನಲ್ಲಿ ತುಂಗಭದ್ರಾ ಸೇತುವೆಯ ಶತಮಾನೋತ್ಸವ ಆಚರಣೆ ಸಮಾರಂಭವನ್ನು ಶತಮಾನೋತ್ಸವ ಸಮಿತಿ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಎರಡು ಪೂರ್ವಭಾವಿ ಸಭೆ ನಡೆಸಲಾಗಿದೆ. ಶಿವಮೊಗ್ಗ, ದಾವಣಗೆರೆ ಹಾಗೂ ಇತರ ಜಿಲ್ಲೆಗಳ ಎಂಜಿನಿಯರಿಂಗ್‌ ಕಾಲೇಜುಗಳ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಸೇತುವೆ ಬಗ್ಗೆ ಪರಿಶೀಲಿಸುವ ಹಾಗೂ ಸಂಶೋಧಿಸುವ ಕಾರ್ಯ ಮಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಸೇತುವೆ ಅಕ್ಕಪಕ್ಕ ಇರುವ ಗಿಡ-ಗಂಟಿಗಳನ್ನು ಸ್ವತ್ಛಗೊಳಿಸದೇ ಇರುವುದು ಅಚ್ಚರಿ ಮೂಡಿಸಿದೆ. ಸಂಬಂಧಪಟ್ಟ ಇಲಾಖೆಯವರು ಸೇತುವೆಯ ಇಕ್ಕೆಲಗಳಲ್ಲಿ ಬೆಳೆದು ನಿಂತಿರುವ ಗಿಡಗಳನ್ನು ತೆಗೆಯದೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬಂದಿದೆ.

ಉತ್ತರ-ದಕ್ಷಿಣದ ಸಂಪರ್ಕ ಸೇತು

ಉತ್ತರ ಕರ್ನಾಟಕದ ವಿವಿಧ ಭಾಗಗಳಿಂದ ಧರ್ಮಸ್ಥಳ, ಮಂಗಳೂರು, ಉಡುಪಿ-ಮಣಿಪಾಲ, ಮೈಸೂರು, ಹಾಸನ, ಶ್ರವಣಬೆಳಗೊಳ ಇತ್ಯಾದಿ ದಕ್ಷಿಣ ಹಾಗೂ ಕರಾವಳಿ ಕರ್ನಾಟಕದ ಧಾರ್ಮಿಕ, ಐತಿಹಾಸಿಕ ಕ್ಷೇತ್ರಗಳಿಗೆ ಈ ಸೇತುವೆಯ ಮೂಲಕವೇ ಸಂಚರಿಸಬೇಕು. ಹಾಗಾಗಿ ಉತ್ತರ-ದಕ್ಷಿಣ ಕರ್ನಾಟಕ ಬೆಸೆಯುವ ಏಕೈಕ ಸಂಪರ್ಕ ಸೇತು ಎಂಬ ಖ್ಯಾತಿಯೂ ಈ ಸೇತುವೆಗೆ ಇದೆ.

ತುಂಗಭದ್ರಾ ನದಿ ಸೇತುವೆಯ ಎರಡು ಕಮಾನುಗಳ ಮಧ್ಯದ 60 ಅಡಿ ಎತ್ತರ, 40 ಅಡಿ ಅಗಲದ ಕಂಬ ಇಂದಿಗೂ ಗಟ್ಟಿಯಾಗಿದೆ. ಸುಮಾರು 15-20 ಅಡಿಗಳಷ್ಟು ಆಳದ ಬುನಾದಿ ಈ ಸೇತುವೆಯ ಭದ್ರತೆಯ ಗುಟ್ಟು. ಶಿವಮೊಗ್ಗ ತಾಲೂಕಿನ ಗಾಜನೂರು ಜಲಾಶಯ ಮತ್ತು ತರೀಕೆರೆ ತಾಲೂಕಿನ ಲಕ್ಕವಳ್ಳಿಯ ಭದ್ರಾ ಜಲಾಶಯಗಳೆರಡೂ ನಿರ್ಮಾಣವಾಗದ ಅಂದಿನ ಸಂದರ್ಭದಲ್ಲಿ ತುಂಗಭದ್ರಾ ನದಿಯಲ್ಲಿ ಅಧಿಕ ಪ್ರಮಾಣದ ನೀರಿನ ಹರಿವು ಇರುತ್ತಿತ್ತು. ಅಂತಹ ಸಂದರ್ಭದಲ್ಲಿ ಸೇತುವೆಯ ಬುನಾದಿ ಹಾಗೂ ಇತರ ಕಾಮಗಾರಿಗಳನ್ನು ಹೇಗೆ ಪೂರ್ಣಗೊಳಿಸಲಾಯಿತು ಎಂಬುದು ಯಕ್ಷ ಪ್ರಶ್ನೆಯಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಶತಮಾನ ಕಂಡ ಸೇತುವೆಯ ಸೌಂದರ್ಯೀಕರಣ ಹಾಗೂ ಸುರಕ್ಷತೆ ಕಾಪಾಡಲು ಹೆಚ್ಚು ಒತ್ತು ನೀಡಬೇಕಾದ ಅಗತ್ಯವಿದೆ.

ಸೇತುವೆಯ ಒಂದಿಂಚೂ ಹಾಳಾಗದಿರುವುದು ಅಚ್ಚರಿ

ಭಾರತ ರತ್ನ ಸರ್‌ ಎಂ. ವಿಶ್ವೇಶ್ವರಯ್ಯ ಅವರು ನೀಲನಕ್ಷೆ ತಯಾರಿಸಿ ತುಂಗಭದ್ರಾ ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡಿದರು. ಸೇತುವೆ ನಿರ್ಮಾಣ ಕಾರ್ಯ 1918ರಲ್ಲಿ ಪ್ರಾರಂಭಗೊಂಡು 1922ಕ್ಕೆ ಪೂರ್ಣಗೊಂಡಿತು. ಕೇವಲ 3.22 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಸೇತುವೆ ಗುಣಮಟ್ಟದಲ್ಲಿ ಇಂದಿನ ಕೋಟ್ಯಂತರ ವೆಚ್ಚದ ಕಾಮಗಾರಿಗಳಿಗಿಂತ ಒಂದು ಹೆಜ್ಜೆ ಮುಂದೆಯೇ ಇದೆ. ಗುಣಮಟ್ಟದ ಸೈಜುಗಲ್ಲುಗಳು, ಸುಣ್ಣದ ಕಲ್ಲು, ಬೆಲ್ಲ, ಮರಳು ಇತ್ಯಾದಿ ವಸ್ತುಗಳಿಂದ ನಿರ್ಮಾಣಗೊಂಡಿರುವ ಈ ಸೇತುವೆ ಇಂದಿಗೂ ಸುಭದ್ರವಾಗಿರುವುದು ಅಂದಿನ ಜನರ ಕಾರ್ಯದಕ್ಷತೆ, ನೈಪುಣ್ಯತೆಗೆ ಸಾಕ್ಷಿ. 15 ಮೀಟರ್‌ಗಳಷ್ಟು ಅಗಲದ ಒಟ್ಟು 21 ಕಮಾನುಗಳ ಮೇಲೆ ಈ ಸೇತುವೆ ನಿಂತಿದೆ. ಸೇತುವೆಯ ಎರಡು ಬದಿಗಳ ನಡುವಿನ ಅಂತರ 5 ಮೀಟರ್‌ ಇದೆ. ನದಿ ನೀರಿನ ಹರಿವಿನ ಅಗಲ 365 ಮೀಟರ್‌ಗಳಷ್ಟಿದ್ದು, ಇದುವರೆಗೂ ಸೇತುವೆಯ ಒಂದಿಂಚೂ ಕೂಡ ಹಾಳಾಗದಿರುವುದು ವಿಶೇಷ.

-ಎಂ.ಪಿ.ಎಂ ವಿಜಯಾನಂದಸ್ವಾಮಿ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.