ಶ್ವಾನ ಪ್ರದರ್ಶನದಲ್ಲಿ ವಿಜೇತರಿಗೆ ಮೋಸ


Team Udayavani, Jan 11, 2019, 7:07 AM IST

dvg-5.jpg

ದಾವಣಗೆರೆ: ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಕಳೆದ 6ರಂದು ನಡೆದ ರಾಜ್ಯ ಮಟ್ಟದ ಶ್ವಾನ ಪ್ರದರ್ಶನದಲ್ಲಿ ಪ್ರಥಮ ಸ್ಥಾನಗಳಿಸಿದ ಶ್ವಾನಗಳ ಮಾಲೀಕರಿಗೆ ನಗದು ಬಹುಮಾನ ನೀಡಲು ಅಧಿಕಾರಿಗಳು, ಸಂಘಟಕರು ಚೌಕಾಸಿ…ಗೆ ಇಳಿದಿದ್ದಾರೆ!.

ರಾಜ್ಯ ಮಟ್ಟದ ಪಶು ಮೇಳ-2019ರ ಅಂಗವಾಗಿ ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ಜಾತಿ, ತಳಿವಾರು ಶ್ವಾನ ಪ್ರದರ್ಶನ ಏರ್ಪಡಿಸಲಾಗಿತ್ತು. ಕೃಷಿ ಮೇಳಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರೇ ಚಾಲನೆ ನೀಡಿದ್ದರು. ಶ್ವಾನ ಪ್ರದರ್ಶನದಲ್ಲಿ ಭಾಗವಹಿಸಿ, ವಿಜೇತರಾದ ದಾವಣಗೆರೆಯ ಶ್ವಾನಗಳ ಮಾಲೀಕರಿಗೆ ಬಹುಮಾನದ ಮೊತ್ತ ನೀಡಲು ಅಧಿಕಾರಿಗಳು ಹೊಸ ರಾಗ ತೆಗೆದಿದ್ದಾರೆ.

ಶ್ವಾನ ಪ್ರದರ್ಶನದಲ್ಲಿ ವಿಜೇತರಿಗೆ ಪಶುಸಂಗೋಪನಾ ಇಲಾಖೆ ಸಚಿವ ವೆಂಕಟರಾವ್‌ ನಾಡಗೌಡ ಪ್ರಮಾಣ ಪತ್ರ ವಿತರಿಸಿದ್ದರು. ನಗದು ಬಹುಮಾನವನ್ನ ನಂತರ ನೀಡುವುದಾಗಿ ಅಧಿಕಾರಿಗಳು, ಸಂಘಟಕರು ಹೇಳಿದ್ದರಿಂದ ಶ್ವಾನದ ಮಾಲೀಕರು ಒಲ್ಲದ ಮನಸ್ಸಿನಿಂದಲೇ ಬರೀ ಪ್ರಮಾಣ ಪತ್ರ ಪಡೆದಿದ್ದರು. ಘೋಷಣೆ ಮಾಡಿರುವಂತೆ ಅಧಿಕಾರಿಗಳು ಹಾಗೂ ಸಂಘಟಕರನ್ನು ನಗದು ಬಹುಮಾನ ಬಗ್ಗೆ ಕೇಳಿದರೆ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಂದ ಅನುಮತಿ ದೊರೆತಿಲ್ಲ. ಬೇಕಾದರೆ 1 ಸಾವಿರ ರೂ. ಕೊಡುತ್ತೇವೆ ಎಂಬುದಾಗಿ ಚೌಕಾಸಿಗೆ ಇಳಿದಿದ್ದಾರೆ!.

ಪ್ರತಿ ತಳಿವಾರು ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದ ಶ್ವಾನಕ್ಕೆ 5 ಸಾವಿರ ನಗದು ಘೋಷಿಸಲಾಗಿತ್ತು. ಫೋನ್‌ ಮಾಡಿ ಸ್ಪರ್ಧೆಯಲ್ಲಿ ಭಾಗವಹಿಸಲು ಕೋರಲಾಗಿತ್ತು. ಮೊಬೈಲ್‌ನಲ್ಲೂ ಶ್ವಾನಗಳ ಮಾಲೀಕರೊಂದಿಗೆ ನಗದು ಬಹುಮಾನ ಇತ್ಯಾದಿ ವಿಚಾರಗಳ ಚಾಟ್ ಮಾಡಲಾಗಿತ್ತು. ಈಗ ಅದೇ ಅಧಿಕಾರಿಗಳು, ಸಂಘಟಕರು ತಮಗೂ ಹಾಗೂ ನಗದು ಬಹುಮಾನಕ್ಕೂ ಸಂಬಂಧವೇ ಇಲ್ಲ ಎನ್ನುವಂತೆ ಮಾತನಾಡುತ್ತಿದ್ದಾರೆ. ಏನೋ ಒಂದು ಸಾವಿರ ಕೊಡುತ್ತೇವೆ ಎಂಬುದಾಗಿ ಹೇಳುತ್ತಿದ್ದಾರೆ ಎಂದು ಎಂದು ದಾವಣಗೆರೆ ಪೆಟ್ ಲವರ್ಸ್‌ ಅಸೋಸಿಯೇಷನ್‌ ಉಪಾಧ್ಯಕ್ಷ ಸಚಿನ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ರಾಜ್ಯ ಮಟ್ಟದ ಪಶು ಮೇಳದಲ್ಲಿನ ಶ್ವಾನ ಪ್ರದರ್ಶನಕ್ಕಾಗಿಯೇ 12 ಲಕ್ಷ ಮೀಸಲಿಡಲಾಗಿದೆ. ಪ್ರದರ್ಶನದಲ್ಲಿ ಗೆದ್ದ ಮೇಲೆ ಅಧಿಕಾರಿಗಳಿಗೆ ನಗದು ಬಹುಮಾನ ಕೇಳಿದರೆ ಇಲ್ಲದ್ದನ್ನೆಲ್ಲಾ ಹೇಳುತ್ತಾರೆ. ಬೇಕಾದರೆ 1 ಸಾವಿರ ರೂ. ಕೊಡುತ್ತೇವೆ. ಕೆಲವಕ್ಕೆ ಬಹುಮಾನ ಘೋಷಿಸಿಯೇ ಇರಲಿಲ್ಲ ಎನ್ನುತ್ತಾರೆ ಎಂದು ತಿಳಿಸಿದರು.

ಮನುಷ್ಯರಿಗೆ ಮೋಸ ಮಾಡುತ್ತಿದ್ದ, ಸುಳ್ಳು ಹೇಳುತ್ತಿದ್ದ ಘಟನೆಗಳೀಗ ಮೂಕ ಪ್ರಾಣಿಗಳ ವಿಚಾರದಲ್ಲೂ ನಡೆಯುತ್ತಿದೆ. ಕ್ಯಾಷ್‌ ನಾಳೆ ಕೊಡುತ್ತೇವೆ ಎಂದಾಗಲೇ ಅನುಮಾನ ಇತ್ತು. ಸರ್ಕಾರವೇ ಶ್ವಾನ ಪ್ರದರ್ಶನ ಆಯೋಜಿಸಿರುವಾಗ ಮೋಸ ಆಗುವುದಿಲ್ಲ. ಹೇಳಿದಂತೆ ಅಧಿಕಾರಿಗಳು ಹಣ ಕೊಡುತ್ತಾರೆ ಅಂದುಕೊಂಡಿದ್ದೆವು. ಈಗ ಹಣ ಕೇಳಿದರೆ ಏನೇನೋ ಹೇಳುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸಚಿನ್‌ ಅವರ ಫ್ರೆಂಚ್ ಬುಲ್‌ ಡಾಗ್‌, ಆನೆ ಸಿದ್ದು ಅವರ ಡಾಬರ್‌ಮನ್‌ ಎರಡೂ ಶ್ವಾನ ಪ್ರಥಮ ಸ್ಥಾನ ಪಡೆದಿವೆ. ಇನ್ನು ಚಾಂಪಿಯನ್‌ ಲೈನ್‌ ಆಫ್‌ನಲ್ಲಿ ಆನೆ ಸಿದ್ದು ಅವರ ಶ್ವಾನ 5 ಸಾವಿರ ರೂಪಾಯಿ ಗೆದ್ದಿದೆ. ಆದರೆ, ಕೈಗೆ ಒಂದು ಪೈಸೆಯೂ ಬಂದಿಲ್ಲ. ಹಣ ಕೊಡುವುದಕ್ಕಿಂತಲೂ ಮೂಕ ಪ್ರಾಣಿಗಳ ವಿಚಾರದಲ್ಲಿ ಸುಳ್ಳು ಹೇಳುವ ಅಧಿಕಾರಿಗಳು ಮತ್ತು ಸಂಘಟಕರ ಬಗ್ಗೆ ಜಿಲ್ಲಾಡಳಿತದ ಮೂಲಕ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.